ಬಾಲಿವುಡ್ ಸೆಲೆಬ್ರಿಟಿಗಳು 
ಬಾಲಿವುಡ್

ಜೆಎನ್ ಯು ದಾಂಧಲೆ: ಬಾಲಿವುಡ್ ಸೆಲೆಬ್ರಿಟಿಗಳು ಏನಂತಾರೆ ಗೊತ್ತಾ?

ದೆಹಲಿಯ ಜವಹರ್ ಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ನಡೆದ ದಾಂಧಲೆಗೆ ಬಾಲಿವುಡ್ ಸೆಲೆಬ್ರಿಟಿಗಳು ಸಾಮಾಜಿಕ  ಜಾಲತಾಣಗಳಲ್ಲಿ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.

ನವದೆಹಲಿ: ದೆಹಲಿಯ ಜವಹರ್ ಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ನಡೆದ ದಾಂಧಲೆಗೆ ಬಾಲಿವುಡ್ ಸೆಲೆಬ್ರಿಟಿಗಳು ಸಾಮಾಜಿಕ  ಜಾಲತಾಣಗಳಲ್ಲಿ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.

ಇದೊಂದು ಭಯಾನಕ ಘಟನೆಯಾಗಿದೆ ಎಂದು ಬಾಲಿವುಡ್ ನಟ ರಿತೇಶ್ ದೇಶಮುಖ್  ಟ್ವಿಟರ್ ನಲ್ಲಿ ಖಂಡಿಸಿದ್ದಾರೆ.ಮುಖಕ್ಕೆ ಮುಸುಕು ಹಾಕಿಕೊಳ್ಳುವ ಅಗತ್ಯವೇನಿತ್ತು? ಎಂದು ಪ್ರಶ್ನಿಸಿರುವ ಅವರು, ನೀವು ಮಾಡುತ್ತಿರುವುದು ತಪ್ಪು, ಅಕ್ರಮ ಹಾಗೂ ಶಿಕ್ಷಾರ್ಹ ಎಂಬುದು ಗೊತ್ತಿದ್ದು, ಈ ರೀತಿ ಮಾಡಿದ್ದೀರಿ ಎಂದಿದ್ದಾರೆ.

ವಿಶ್ವವಿದ್ಯಾಲಯದ ಒಳಗೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡುವ ಭಯಾನಕ ಘಟನೆ ವಿಡಿಯೋದಲ್ಲಿದೆ. ಇಂತಹ ಹಿಂಸಾಚಾರವನ್ನು ಸಹಿಸಲಾಗದು ಎಂದಿದ್ದಾರೆ

ದೇಶಮುಖ್ ಪತ್ನಿ ಜೆನೆಲಿಯಾ ಕೂಡಾ ಜೆಎನ್ ಯು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಮೇಲಿನ ಹಲ್ಲೆಯನ್ನು ಖಂಡಿಸಿದ್ದಾರೆ.ದೆಹಲಿಯ ವಸಂತ್ ಕುಂಜ್ ಪೊಲೀಸ್ ಠಾಣೆ 1 ಕಿಲೋ ಮೀಟರ್ ಕ್ಕಿಂತಲೂ ಕಡಿಮೆ ದೂರದಲ್ಲಿದ್ದರೂ ಏಕೆ ಈ ಹಿಂಸಾಚಾರ ನಡೆಯಿತು ಎಂದು ನಟಿ ಸ್ವರ ಭಾಸ್ಕರ್  ಪ್ರಶ್ನಿಸಿದ್ದಾರೆ.

ಸ್ವರ ಭಾಸ್ಕರ್ ಶೇರ್ ಮಾಡಿರುವ ವಿಡಿಯೋವನ್ನು ಮತ್ತೆ ಶೇರ್ ಮಾಡಿರುವ ಹಿರಿಯ ನಟಿ ಶಬಾನಾ ಅಜ್ಮಿ, ದುಷ್ಕರ್ಮಿಗಳ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.ಎಷ್ಟು ದಿನಗಳ ಕಾಲ ಹೀಗೆ ನಡೆಯಲು ಅವಕಾಶ ಮಾಡಿಕೊಡುತ್ತೀರಾ? ಎಂದು ನಟ ಡಿಯಾ ಮಿರ್ಜಾ ಪವರ್ ಪುಲ್ ಪ್ರಶ್ನೆ ಎಸೆದಿದ್ದಾರೆ. 

ನಮ್ಮ ಭವಿಷ್ಯವನ್ನು ರೂಪಿಸಬೇಕಾದ ಸ್ಥಳದಲ್ಲಿ ಇಂತಹ ಪರಿಸ್ಥಿತಿ ಪ್ರತಿಯೊಬ್ಬರಿಗೂ ಭಯವನ್ನುಂಟುಮಾಡುತ್ತದೆ ಎಂದು ಪಿಂಕ್ ನಟಿ ತಾಪ್ಸಿ ಪನ್ನು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Dasara Holidays extended: ಸರ್ಕಾರಿ, ಅನುದಾನಿತ ಶಾಲೆಗಳಿಗೆ ಅಕ್ಟೋಬರ್ 18ರವರೆಗೆ ರಜೆ; ಜಾತಿ ಗಣತಿ ಅವಧಿ ವಿಸ್ತರಣೆ!

Mark ಚಿತ್ರದ 'ಸೈಕೋ ಸೈತಾನ್' ಚಿತ್ರದ ಹಾಡು ಸಖತ್ ಟ್ರೋಲ್; Darshan ಫ್ಯಾನ್ಸ್ ಟಾಂಗ್, Youtube ವಿಡಿಯೋ ಡಿಲೀಟ್!

ಇದು 'ಮೋದಾನಿ-ನಿರ್ಭರ್ ಭಾರತ': ಸರ್ಕಾರದ ಹಳದಿ ಬಟಾಣಿ ಆಮದು ನೀತಿ ಟೀಕಿಸಿದ ಕಾಂಗ್ರೆಸ್

ನನ್ನ ಹಲವು ಡೀಪ್‌ಫೇಕ್ ವಿಡಿಯೋಗಳು ಎಲ್ಲೆಡೆ ಹರಿದಾಡುತ್ತಿವೆ: ನಿರ್ಮಲಾ ಸೀತಾರಾಮನ್

ಡಿಕೆಶಿಯ 'ಸುರಂಗದ ಹುಚ್ಚಿ'ನಿಂದ ಲಾಲ್‌ಬಾಗ್ ಸಸ್ಯೋದ್ಯಾನಕ್ಕೆ ಅಪಾಯ- ಆರ್. ಅಶೋಕ್

SCROLL FOR NEXT