ಕಂಗನಾ ರಣಾವತ್ -ಇಂದಿರಾ ಜೈಸಿಂಗ್ 
ಬಾಲಿವುಡ್

ನಿರ್ಭಯಾ ಅಪರಾಧಿಗಳ ಜೊತೆ ಇಂದಿರಾ ಜೈಸಿಂಗ್ ರನ್ನು ಜೈಲಿನಲ್ಲಿರಿಸಬೇಕು: ಕಂಗನಾ ರಣಾವತ್ 

ನಿರ್ಭಯಾ ಅತ್ಯಾಚಾರಿಗಳನ್ನು ಕ್ಷಮಿಸಬೇಕು ಎಂದು ಹಿರಿಯ ವಕೀಲೆ ಇಂದಿರಾ ಜೈಸಿಂಗ್ ನೀಡಿರುವ ಹೇಳಿಕೆಗೆ ಬಾಲಿವುಡ್ ನಟಿ ಕಂಗನಾ ರಣಾವತ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. 

ನವದೆಹಲಿ: ನಿರ್ಭಯಾ ಅತ್ಯಾಚಾರಿಗಳನ್ನು ಕ್ಷಮಿಸಬೇಕು ಎಂದು ಹಿರಿಯ ವಕೀಲೆ ಇಂದಿರಾ ಜೈಸಿಂಗ್ ನೀಡಿರುವ ಹೇಳಿಕೆಗೆ ಬಾಲಿವುಡ್ ನಟಿ ಕಂಗನಾ ರಣಾವತ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. 


ತಮ್ಮ ಪಂಗಾ ಚಿತ್ರದ ಪ್ರಚಾರ ಸಂದರ್ಭದಲ್ಲಿ ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಿರ್ಭಯಾ ಅಪರಾಧಿಗಳ ಜೊತೆಗೆ ಆ ಹೆಂಗಸು ಇಂದಿರಾ ಜೈಸಿಂಗ್ ರನ್ನು ನಾಲ್ಕು ದಿವಸ ಜೈಲಿನಲ್ಲಿರಿಸಬೇಕು. ಅಂತಹ ಮಹಿಳೆಯರೇ ಇಂತಹ ರಾಕ್ಷಸಪ್ರವೃತ್ತಿಯ ಕೊಲೆಗಾರ ಮಕ್ಕಳಿಗೆ ಜನ್ಮ ನೀಡುವುದು ಎಂದು ಆಕ್ರೋಶ ಹೊರಹಾಕಿದರು.


ಇಂದಿರಾ ಜೈಸಿಂಗ್ ಯಾವತ್ತೂ ಕೂಡ ನಿರ್ಭಯಾ ಪೋಷಕರನ್ನು ಭೇಟಿ ಮಾಡಿ ಅವರ ಕಷ್ಟ ಸುಖ ವಿಚಾರಿಸಲಿಲ್ಲ. ಇಂದು ಅಪರಾಧಿಗಳ ಪರ ವಹಿಸಿ ಮಾತನಾಡುತ್ತಿದ್ದಾರೆ. ಅತ್ಯಾಚಾರಿಗಳನ್ನು ಬೆಂಬಲಿಸಿ ತಮ್ಮ ಕೆಲಸ ಮಾಡಿಸಿಕೊಳ್ಳುವ ಇಂತವರಿಂದಲೇ ಅಪರಾಧಿಗಳಿಗೆ ಶಿಕ್ಷೆಯಾಗಿ ಅಮಾಯಕರಿಗೆ ನ್ಯಾಯ ಸಿಗಲು ಈ ದೇಶದಲ್ಲಿ ವಿಳಂಬವಾಗುತ್ತಿದೆ ಎಂದು ಕಂಗನಾ ರಣಾವತ್ ನೊಂದು ನುಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT