ಅಜಯ್ ದೇವಗನ್ 
ಬಾಲಿವುಡ್

ಲಡಾಕ್ ನ ಗಲ್ವಾನ್ ಸಂಘರ್ಷವನ್ನು ತೆರೆ ಮೇಲೆ ತರಲಿದ್ದಾರೆ ನಟ ಅಜಯ್ ದೇವಗನ್

ಕಳೆದ ಜೂನ್ 15ರಂದು ಪೂರ್ವ ಲಡಾಕ್ ನ ಗಲ್ವಾನ್ ಕಣಿವೆಯಲ್ಲಿ ಭಾರತ ಮತ್ತು ಚೀನಾ ಯೋಧರ ನಡುವೆ ನಡೆದ ಸಂಘರ್ಷ, ಅದರಲ್ಲಿ ಭಾರತದ 20 ಯೋಧರು ಹುತಾತ್ಮರಾಗಿದ್ದು ದೇಶದ ಚರಿತ್ರೆಯಲ್ಲಿ ದಾಖಲಾಗಿದೆ.

ಕಳೆದ ಜೂನ್ 15ರಂದು ಪೂರ್ವ ಲಡಾಕ್ ನ ಗಲ್ವಾನ್ ಕಣಿವೆಯಲ್ಲಿ ಭಾರತ ಮತ್ತು ಚೀನಾ ಯೋಧರ ನಡುವೆ ನಡೆದ ಸಂಘರ್ಷ, ಅದರಲ್ಲಿ ಭಾರತದ 20 ಯೋಧರು ಹುತಾತ್ಮರಾಗಿದ್ದು ದೇಶದ ಚರಿತ್ರೆಯಲ್ಲಿ ದಾಖಲಾಗಿದೆ.

ಇದೇ ಎಳೆಯನ್ನಿಟ್ಟುಕೊಂಡು ಚಿತ್ರ ತಯಾರಿಸಲು ಹೊರಟಿದ್ದಾರೆ ಬಾಲಿವುಡ್ ನಟ ಅಜಯ್ ದೇವಗನ್. ಚೀನಾ ಸೇನಾ ಯೋಧರ ಜೊತೆ ಹೋರಾಡಿ ಹುತಾತ್ಮರಾದ 20 ಯೋಧರ ಮೇಲೆಯೇ ಕಥೆ ತಯಾರಾಗಲಿದೆಯಂತೆ.

ಚಿತ್ರದಲ್ಲಿ ಅಜಯ್ ದೇವಗನ್ ಇರುತ್ತಾರೆಯೇ ಎಂಬ ಬಗ್ಗೆ ಖಚಿತ ಮಾಹಿತಿ ಇಲ್ಲ. ಕಲಾವಿದರ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆಯಂತೆ. ಅಜಯ್ ದೇವಗನ್ ಅವರ ಎಫ್ ಫಿಲ್ಮ್ಸ್ ಮತ್ತು ಸೆಲೆಕ್ಟ್ ಮೀಡಿಯಾ ಹೋಲ್ಡಿಂಗ್ಸ್ ಎಲ್ಎಲ್ ಪಿ ಜೊತೆಯಾಗಿ ಚಿತ್ರ ನಿರ್ಮಿಸಲಿವೆ.

1975ರಲ್ಲಿ ಚೀನಾದ ಪೀಪಲ್ಸ್ ಲಿಬರೇಷನ್ ಆರ್ಮಿ ಜೊತೆ ನಡೆದ ಯುದ್ಧದಲ್ಲಿ ಕಂಡ ಸಾವು ನೋವಿನ ನಂತರ ಚೀನಾ ಪಡೆಯೊಂದಿಗೆ ನಡೆದ ಸಂಘರ್ಷದಲ್ಲಿ ಇಷ್ಟೊಂದು ಸಂಖ್ಯೆಯಲ್ಲಿ ಭಾರತೀಯ ಯೋಧರ ಸಾವು-ನೋವು ಕಂಡಿದ್ದು ಇದೇ ಮೊದಲು.

ಅಜಯ್ ದೇವಗನ್ ಅವರ ಮುಂದಿನ ಚಿತ್ರ ಭುಜ್:ದ ಪ್ರೈಡ್ ಆಫ್ ಇಂಡಿಯಾ ತೆರೆಗೆ ಬರಲು ಸಜ್ಜಾಗಿದ್ದು ಅಭಿಷೇಕ್ ದುದೈಯಾ ನಿರ್ದೇಶಿಸಿದ್ದಾರೆ. ಒಟಿಟಿ ಡಿಜಿಟಲ್ ಮೂಲಕ ಸದ್ಯದಲ್ಲಿಯೇ ತೆರೆಗೆ ಬರಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕ್ಯಾಬಿನೆಟ್ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT