ಐಶ್ವರ್ಯಾ ರೈ ಬಚ್ಚನ್ ಜಯಾ ಬಚ್ಚನ್ ಮತ್ತು ಆರಾದ್ಯಾ ಬಚ್ಚನ್ 
ಬಾಲಿವುಡ್

ಐಶ್ವರ್ಯಾ ರೈ ಬಚ್ಚನ್, ಆರಾಧ್ಯಾ, ಜಯಾ ಬಚ್ಚನ್ ಕೊರೋನಾ ವರದಿ ಪ್ರಕಟ

ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಸೊಸೆ, ಐಶ್ವರ್ಯಾ ರೈ ಬಚ್ಚನ್, ಅವರ ಪುತ್ರಿ ಆರದ್ಯಾ ಬಚ್ಚನ್ ಹಾಗೂ ಅಮಿತಾಬ್ ಬಚ್ಚನ್ ಮಡದಿ ಜಯಾ ಬಚ್ಚನ್ ಅವರ ಕೊರೋನಾವೈರಸ್ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ. 

ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಸೊಸೆ, ಐಶ್ವರ್ಯಾ ರೈ ಬಚ್ಚನ್, ಅವರ ಪುತ್ರಿ ಆರದ್ಯಾ ಬಚ್ಚನ್ ಹಾಗೂ ಅಮಿತಾಬ್ ಬಚ್ಚನ್ ಮಡದಿ ಜಯಾ ಬಚ್ಚನ್ ಅವರ ಕೊರೋನಾವೈರಸ್ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ. 

ಇನ್ನೊಂದೆಡೆ ಅಮಿತಾಬ್ ಬಚ್ಚನ್ ಮತ್ತು ಅವರ ಮಗ ಅಭಿಷೇಕ್ ಬಚ್ಚನ್ ಅವರಿಗೆ ಕೊರೋನಾ ದೃಢಪಟ್ಟ ಹಿನ್ನೆಲೆಯಲ್ಲಿ  ಅವರನ್ನು ನಾನಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ನಡುವೆ ಅಮಿತಾಭ್ ಬಚ್ಚನ್ ಅವರ ಆರೋಗ್ಯ ಸ್ಥಿರವಾಗಿದೆ. ಸೌಮ್ಯ ಲಕ್ಷಣಗಳಷ್ಟೇ ಕಂಡು ಬಂದಿದೆ. ಪ್ರಸ್ತುತ ಆಸ್ಪತ್ರೆಯ ಐಸೋಲೇಷನ್ ಘಟದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ. 

ಶನಿವಾರ ರಾತ್ರಿ 10.30ರ ವೇಳೆಗೆ ಅಮಿತಾಭ್ ಅವರಿಗೆ ಕೊರೋನಾ ವೈರಸ್ ಅವರೇ ಸ್ವತಃ ಟ್ವೀಟ್ ಮಾಡಿ ತಿಳಿಸಿದ್ದರು, ಇದಾಗಿ ಕೆಲ ಸಮಯದ ನಂತರ ಅವರ ಪುತ್ರರಾದ ಅಭಿಷೇಕ್ ಬಚ್ಚನ್ ಸಹ ಕೊರೋನಾ ಪಾಸಿಟಿವ್ ಇರುವುದಾಗಿ ಟ್ವೀಟ್ ಮಾಡಿದ್ದರು.

"ನನಗೆ ಕೊರೋನಾ ಪಾಸಿಟಿವ್ ಬಂದಿದೆ. ಆಸ್ಪತ್ರೆಗೆ ದಾಖಲಾಗಿದ್ದೇನೆ. ಅಧಿಕಾರಿಗಳಿಗೆ ಆಸ್ಪತ್ರೆ ಸಿಬ್ಬಂದಿ ಮಾಹಿತಿ ನೀಡುತ್ತಿದ್ದಾರೆ. ಕುಟುಂಬ ಹಾಗೂ ಸಿಬ್ಬಂದಿ ಕೂಡ ಪರೀಕ್ಷೆಗೆ ಒಳಗಾಗಿದ್ದಾರೆ. ಅವರ ವರದಿಗಾಗಿ ಗಾಯುತ್ತಿದ್ದೇವೆ. ಕಳೆದ 10 ದಿನಗಳಿಂದ ನನ್ನ ಸಂಪರ್ಕದಲ್ಲಿದ್ದವರು ಪರೀಕ್ಷೆಗೆ ಒಳಗಾಗಬೇಕೆಂದು ಮನವಿ ಮಾಡಿಕೊಳ್ಳುತ್ತೇನೆಂದು" ಅಮಿತಾಬ್  ಹೇಳಿದ್ದರು. 

ಇದೀಗ ಅಭಿಷೇಕ್ ಪತ್ನಿ ಐಶ್ವರ್ಯಾ, ಮಗಳು ಆರಾದ್ಯ ಸೇರಿ ಮೂವರಿಗೂ ಕೊರೋನಾ ಇಲ್ಲವೆಂದು ಖಚಿತವಾಗಿದ್ದು ಸಧ್ಯ ಅವರು ವಾಸವಿರುವ ಬಂಗಲೆ ಜಲ್ಸಾ ಬಂಗಲೆಯನ್ನು ಸ್ಯಾನಿಟ್ರೈಸ್ ಮಾಡಲಾಗಿದೆ. ಬಿಎಂಸಿ ಈ ಪ್ರದೇಶದಲ್ಲಿನ ಪ್ರತೀಕ್ಷ ಮತ್ತು ಇತರ ಕಟ್ಟಡಗಳನ್ನು ಸೀಲ್ ಡೌನ್ ಮಾಡಲಿದ್ದು ಅಲ್ಲಿ ಸಹ ಶೀಘ್ರವೇ ಸ್ವಚ್ಚತಾ ಕಾರ್ಯ ನಡೆಯಲಿದೆ,

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಟ್ರಂಪ್ ಎಚ್ಚರಿಕೆಗೆ ತಲೆಬಾಗದ ಇರಾನ್​: ಸೌದಿ ನೆಲೆಯಲ್ಲಿ ಕ್ಷಿಪಣಿ ದಾಳಿ; ಅಮೆರಿಕಾದ 5 ಟ್ಯಾಂಕರ್ ವಿಮಾನಗಳಿಗೆ ಹಾನಿ..!

West Asia conflict effect: LPG ಕೊರತೆ ತೀವ್ರ; ಮನೆಗಳಲ್ಲಿ PNG, ಹೋಟೆಲ್ ಗಳು ಕಲ್ಲಿದ್ದಲು ಬಳಕೆ ಮಾಡುವಂತೆ ಕೇಂದ್ರ ಸರ್ಕಾರ ಸಲಹೆ

ಒಡಿಶಾ 'ಕೈ' ಶಾಸಕರಿಗೆ' ಟ್ರಬಲ್ ಶೂಟರ್ ಡಿಕೆಶಿ ಆತಿಥ್ಯ: 'ಆಪರೇಷನ್ ಕಮಲ' ತಡೆಗೆ ಕೈಗೊಂಡ ಮುನ್ನೆಚ್ಚರಿಕಾ ಕ್ರಮ; ಕಾಂಗ್ರೆಸ್ ಸಮರ್ಥನೆ

ಒಂದೇ ಸೂರಿನಡಿ ರಾಮ್-ರಹೀಮ್: ದ್ವೇಷ ಹರಡುವವರ ಮಧ್ಯೆ ಮುಸ್ಲಿಮರಿಗಾಗಿ ‘ಇಫ್ತಾರ್ ಕೂಟ’ ಆಯೋಜಿಸುತ್ತಿರುವ ಹಿಂದೂ ಮಹಿಳೆ..!

Strait of Hormuz: 'ಹೌದು.. ನಮ್ಮ ಆಪ್ತ ರಾಷ್ಟ್ರ'... ಭಾರತದ ನೌಕೆಗಳಿಗೆ ಅನುಮತಿ ಕುರಿತು ಇರಾನ್ ರಾಯಭಾರಿ ಹೇಳಿಕೆ!

SCROLL FOR NEXT