ಸುಶಾಂತ್ ಸಿಂಗ್ 
ಬಾಲಿವುಡ್

ಮುಂಬೈ ಪೊಲೀಸರು ಸಮರ್ಥರಿದ್ದಾರೆ, ಸುಶಾಂತ್ ಆತ್ಮಹತ್ಯೆ ಪ್ರಕರಣದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲ: ಅನಿಲ್ ದೇಶಮುಖ್

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರದ್ದು ಆತ್ಮಹತ್ಯೆಯೋ? ಅಥವಾ ಕೊಲೆಯೋ? ಎಂಬ ತೀವ್ರ ಚರ್ಚೆಗಳು ನಡೆಯುತ್ತಿವೆ. ಆದರೂ ಪ್ರಕರಣದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲ ಎಂದು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ್ ಹೇಳಿದ್ದಾರೆ.

ನಾಗಪುರ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರದ್ದು ಆತ್ಮಹತ್ಯೆಯೋ? ಅಥವಾ ಕೊಲೆಯೋ? ಎಂಬ ತೀವ್ರ ಚರ್ಚೆಗಳು ನಡೆಯುತ್ತಿವೆ. ಆದರೂ ಪ್ರಕರಣದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲ ಎಂದು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ್ ಹೇಳಿದ್ದಾರೆ. 

ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣವನ್ನು ನಿಭಾಯಿಸಲು ಮುಂಬೈ ಪೊಲೀಸರು ಸಮರ್ಥರಾಗಿದ್ದಾರೆ. ಪೊಲೀಸರು ಈ ಪ್ರಕರಣವನ್ನು "ವ್ಯಾಪಾರ ಪೈಪೋಟಿ"ಯ ಕೋನವನ್ನು ಪರಿಶೀಲಿಸುತ್ತಿದ್ದಾರೆ ಎಂದು ಹೇಳಿದರು. 

34 ವರ್ಷದ ಸುಶಾಂತ್ ಸಿಂಗ್ ರಜಪೂತ್ ಅವರ ಮೃತದೇಹ ಜೂನ್ 14ರಂದು ಮುಂಬೈನ ಬಾಂದ್ರಾ ಅಪಾರ್ಟ್ಮೆಂಟ್ನಲ್ಲಿ ಪತ್ತೆಯಾಗಿದ್ದು ಆತ್ಮಹತ್ಯೆ ಪ್ರಕರಣ ಎಂದು ಪೊಲೀಸರು ಹೇಳಿಕೊಂಡಿದ್ದಾರೆ. ನಟ ಖಿನ್ನತೆಗೆ ಔಷಧಿ ಪಡೆದಿರುವುದ ಮುಂಬೈ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದಿದೆ. 

ಸುಶಾಂತ್ ಸಿಂಗ್ ಪ್ರೇಯಸಿ, ನಟ ರಿಯಾ ಚಕ್ರವರ್ತಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಟ್ವೀಟ್ ಮಾಡಿ ಸಿಬಿಐ ತನಿಖೆಗೆ ಒತ್ತಾಯಿಸಿದ್ದರು. ತನಗೆ ಸರ್ಕಾರದಲ್ಲಿ ಸಂಪೂರ್ಣ ನಂಬಿಕೆ ಇದ್ದರೂ, ಸಿಬಿಐ ವಿಚಾರಣೆಯು ಪ್ರಕರಣಕ್ಕೆ ನ್ಯಾಯ ಒದಗಿಸಲು ಸಹಾಯ ಮಾಡುತ್ತದೆ ಎಂದು ಚಕ್ರವರ್ತಿ ಹೇಳಿದರು.

ನಟನ ಸಾವಿನ ಬಗ್ಗೆ ಮುಂಬೈ ಪೊಲೀಸರು ವಿವರವಾದ ವಿಚಾರಣೆ ನಡೆಸುತ್ತಿದ್ದಾರೆ ಮತ್ತು ಸಂಬಂಧಪಟ್ಟ ಜನರಿಂದ ಹೇಳಿಕೆಗಳನ್ನು ಪಡೆಯುತ್ತಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT