ವಿದ್ಯಾ ಬಾಲನ್ 
ಬಾಲಿವುಡ್

ಸ್ವಜನಪಕ್ಷಪಾತವು ನನ್ನ ವೃತ್ತಿಯಲ್ಲಿ ಬರಲು ಬಿಡುವುದಿಲ್ಲ: ವಿದ್ಯಾ ಬಾಲನ್

ಬಾಲಿವುಡ್ ನಟಿ ವಿದ್ಯಾ ಬಾಲನ್ ಅವರು ತಮ್ಮ ವೃತ್ತಿಯಲ್ಲಿ ಸ್ವಜನಪಕ್ಷಪಾತವನ್ನು ಎಂದಿಗೂ ಬರಲು ಬಿಡುವುದಿಲ್ಲ ಎಂದು ಹೇಳಿದ್ದಾ

ಬಾಲಿವುಡ್ ನಟಿ ವಿದ್ಯಾ ಬಾಲನ್ ಅವರು ತಮ್ಮ ವೃತ್ತಿಯಲ್ಲಿ ಸ್ವಜನಪಕ್ಷಪಾತವನ್ನು ಎಂದಿಗೂ ಬರಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಸುಶಾಂತ್ ಸಿಂಗ್ ರಜಪೂತ್ ಅವರ ಆತ್ಮಹತ್ಯೆ ಆರೋಪದ ನಂತರ ಸಾಮಾಜಿಕ ತಾಣದಲ್ಲಿ ಈ ವಿಷಯದ ಬಗ್ಗೆ ಚರ್ಚೆಯಾಗಿದೆ. ಚಲನಚಿತ್ರೋದ್ಯಮಕ್ಕೆ ಸಂಬಂಧಿಸಿದವರು ಸೇರಿದಂತೆ ಸಾಮಾನ್ಯ ಜನರು ಸ್ವಜನಪಕ್ಷಪಾತ ಬಗ್ಗೆ ವಾದಿಸುತ್ತಿದ್ದಾರೆ. ಈ ಮಧ್ಯೆ ವಿದ್ಯಾ ಬಾಲನ್ ಕೂಡ ಈ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

“ನಾನು ಕೂಡ ಈ ಉದ್ಯಮದಲ್ಲಿ ಅನೇಕ ಏರಿಳಿತಗಳನ್ನು ನೋಡಿದ್ದೇನೆ. ಎಲ್ಲಾ ರೀತಿಯ ಅನುಭವಗಳನ್ನು ಕಂಡಿದ್ದೇನೆ. ಸ್ವಜನಪಕ್ಷಪಾತವಿಲ್ಲ ಎಂದು ನಾನು ಹೇಳುವುದಿಲ್ಲ, ಆದರೆ ನನ್ನ ವೃತ್ತಿಜೀವನದಲ್ಲಿ ಅದನ್ನು ಬರಲು ನಾನು ಬಿಡಲಿಲ್ಲ” ಎಂದು ತಿಳಿಸಿದ್ದಾರೆ. 

ವಿದ್ಯಾ ಪ್ರಸ್ತುತ ಶಕುಂತಲಾ ದೇವಿ ಚಿತ್ರದಲ್ಲಿ ನಟಿಸಿದ್ದು ಸುದ್ದಿಯಲ್ಲಿದ್ದಾರೆ. ಈ ಚಿತ್ರದಲ್ಲಿ ಅವರು ಶ್ರೇಷ್ಠ ಗಣಿತಜ್ಞ ಶಕುಂತಲಾ ದೇವಿ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಈ ಚಿತ್ರವು ತಿಂಗಳ ಕೊನೆಯಲ್ಲಿ ಒಟಿಟಿ ಪ್ಲಾಟ್‌ಫಾರ್ಮ್ ಅಮೆಜಾನ್ ಪ್ರೈಮ್‌ನಲ್ಲಿ ಬಿಡುಗಡೆಯಾಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!