ಸುಶಾಂತ್ ಸಿಂಗ್ ರಜಪೂತ್ ಮತ್ತು ರಿಯಾ ಚಕ್ರವರ್ತಿ(ಸಂಗ್ರಹ ಚಿತ್ರ) 
ಬಾಲಿವುಡ್

ಸುಶಾಂತ್ ಸಿಂಗ್ ರಜಪೂತ್ ಜೊತೆ ಲಿವ್ ಇನ್ ರಿಲೇಷನ್ ಷಿಪ್ ನಲ್ಲಿದ್ದೆ, ಜೂ.8ಕ್ಕೆ ಮನೆ ಬಿಟ್ಟಿದ್ದೆ: ರಿಯಾ ಚಕ್ರವರ್ತಿ

ತಾನು ಸುಶಾಂತ್ ಸಿಂಗ್ ರಜಪೂತ್ ಜೊತೆಗೆ ಒಂದು ವರ್ಷ ಲಿವ್ ಇನ್ ರಿಲೇಷನ್ ಷಿಪ್ ನಲ್ಲಿ ಇದ್ದೆ, ಅವರು ಮುಂಬೈ ನಿವಾಸದಲ್ಲಿ ಸಾಯುವುದಕ್ಕೆ 6 ದಿನ ಮೊದಲಷ್ಟೇ ಬೇರೆಡೆಗೆ ನನ್ನ ವಾಸಸ್ಥಳವನ್ನು ಬದಲಾಯಿಸಿದ್ದೆ ಎಂದು ನಟನ ಸ್ನೇಹಿತೆ ರಿಯಾ ಚಕ್ರವರ್ತಿ ನ್ಯಾಯಾಲಯಕ್ಕೆ ಹೇಳಿಕೆ ನೀಡಿದ್ದಾರೆ.

ನವದೆಹಲಿ: ತಾನು ಸುಶಾಂತ್ ಸಿಂಗ್ ರಜಪೂತ್ ಜೊತೆಗೆ ಒಂದು ವರ್ಷ ಲಿವ್ ಇನ್ ರಿಲೇಷನ್ ಷಿಪ್ ನಲ್ಲಿ ಇದ್ದೆ, ಅವರು ಮುಂಬೈ ನಿವಾಸದಲ್ಲಿ ಸಾಯುವುದಕ್ಕೆ 6 ದಿನ ಮೊದಲಷ್ಟೇ ಬೇರೆಡೆಗೆ ನನ್ನ ವಾಸಸ್ಥಳವನ್ನು ಬದಲಾಯಿಸಿದ್ದೆ ಎಂದು ನಟನ ಸ್ನೇಹಿತೆ ರಿಯಾ ಚಕ್ರವರ್ತಿ ನ್ಯಾಯಾಲಯಕ್ಕೆ ಹೇಳಿಕೆ ನೀಡಿದ್ದಾರೆ.

ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವಿನ ಹಿಂದೆ ಆತನ ಗರ್ಲ್ ಫ್ರೆಂಡ್ ಆಗಿದ್ದ ರಿಯಾ ಚಕ್ರವರ್ತಿ ಪಾತ್ರವಿದೆ ಎಂದು ಆರೋಪಿಸಿ ನಟನ ಕುಟುಂಬಸ್ಥರು ಪಾಟ್ನಾ ಕೋರ್ಟ್ ನಲ್ಲಿ ದೂರು ಸಲ್ಲಿಸಿದ್ದಾರೆ.

ಅರ್ಜಿ ವಿಚಾರಣೆಯನ್ನು ಪಾಟ್ನಾದಿಂದ ಮುಂಬೈಗೆ ವರ್ಗಾಯಿಸಬೇಕೆಂದು ಕೋರಿರುವ ರಿಯಾ ಚಕ್ರವರ್ತಿ, ಅದರಲ್ಲಿ ತಾನು ಮತ್ತು ಸುಶಾಂತ್ ಜೂನ್ 8ರವರೆಗೆ ಲಿವ್ ಇನ್ ರಿಲೇಷನ್ ಷಿಪ್ ನಲ್ಲಿದ್ದೆವು. ಅದಾದ ಬಳಿಕ ನಾನು ತಾತ್ಕಾಲಿಕವಾಗಿ ಬೇರೆಡೆಗೆ ವಾಸಸ್ಥಳವನ್ನು ವರ್ಗಾಯಿಸಿಕೊಂಡೆ, ಅವರ ತಂದೆ ತಪ್ಪಾಗಿ ಹೇಳಿಕೆ ನೀಡಿದ್ದಾರೆ. ತಾನು ಖಿನ್ನತೆಯಿಂದ ಬಳಲುತ್ತಿರುವುದಾಗಿ ಹೇಳಿಕೊಂಡಿದ್ದಾರೆ.

ಸುಶಾಂತ್ ಸಿಂಗ್ ರಜಪೂತ್ ನಂತರ ಜೂನ್ 14ರಂದು ಮುಂಬೈಯ ನಿವಾಸದಲ್ಲಿ ಮೃತಪಟ್ಟಿದ್ದು ಪೊಲೀಸರು ಇದು ಆತ್ಮಹತ್ಯೆ ಎಂದು ಶಂಕಿಸಿದ್ದಾರೆ. ನಂತರ ಇದು ಭಾರೀ ವಿವಾದ ಹುಟ್ಟಿಸಿ ಬಾಲಿವುಡ್ ಸಿನೆಮಾ ಜಗತ್ತಿನ ಸ್ವಜನಪಕ್ಷಪಾತ ಧೋರಣೆಯಿಂದಾಗಿ ನೊಂದು ಖಿನ್ನತೆಗೊಳಗಾಗಿ ಸುಶಾಂತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೆಲವರು ಹೇಳಿದರೆ, ಇನ್ನು ಕೆಲವರು ಇದು ಆತ್ಮಹತ್ಯೆಯಲ್ಲ, ಕೊಲೆ ಎಂದು ಶಂಕಿಸಿದ್ದಾರೆ. ಇದೀಗ ಅವರ ಕುಟುಂಬಸ್ಥರು ಕೂಡ ನ್ಯಾಯಾಲಯದಲ್ಲಿ ದೂರು ಸಲ್ಲಿಸಿ ಕೊಲೆಯೆಂಬ ಅರ್ಥದಲ್ಲಿ ಆರೋಪ ಮಾಡುತ್ತಿದ್ದಾರೆ.

ಪ್ರಕರಣ ಸಂಬಂಧ ಮುಂಬೈ ಪೊಲೀಸರು ಈಗಾಗಲೇ ರಿಯಾ ಚಕ್ರವರ್ತಿ, ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ, ನಿರ್ಮಾಪಕ ಆದಿತ್ಯ ಚೋಪ್ರಾ, ನಿರ್ದೇಶಕ ಮುಕೇಶ್ ಛಬ್ರೆ, ಶೇಖರ್ ಕಪೂರ್, ಚಿತ್ರ ವಿಮರ್ಶಕ ರಾಜೀವ್ ಮಸಂದ್ ಅವರನ್ನು ವಿಚಾರಣೆ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೈಸೂರಿನಲ್ಲಿ ರಾಹುಲ್ ಗಾಂಧಿ ಜತೆ ಸಿದ್ದರಾಮಯ್ಯ, ಡಿಕೆಸಿ ಮಹತ್ವದ ಚರ್ಚೆ; ಬಳಿಕ ಸಿಎಂ ಹೇಳಿದ್ದೇನು? Video

'Ground Ops ಗಾಗಿ ಭಾರತೀಯ ಸೇನೆ ಸಂಪೂರ್ಣ ಸಜ್ಜು: ಪಾಕ್ ಗೆ ವಾರ್ನಿಂಗ್ ನೀಡಿದ ಸೇನಾ ಮುಖ್ಯಸ್ಥ ದ್ವಿವೇದಿ!

ಬ್ಲಿಂಕಿಟ್, ಸ್ವಿಗ್ಗಿ, ಜೆಪ್ಟೊಗೆ 10 ನಿಮಿಷಗಳ ಡೆಲಿವರಿ ಸೇವೆ ನಿಲ್ಲಿಸುವಂತೆ ಸರ್ಕಾರ ಸೂಚನೆ; ಯಾಕೆ ಗೊತ್ತಾ?

'ಹಾವು ಕಚ್ಚಿದೆ ಬೇಗ ಚಿಕಿತ್ಸೆ ಕೊಡಿ'; ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂದ ಆಟೋ ಚಾಲಕ, Video

ಜಮ್ಮು-ಕಾಶ್ಮೀರ: ಇದೇ ಮೊದಲು, ಮಸೀದಿಯ ಇಮಾಮ್ ಸೇರಿದಂತೆ ಎಲ್ಲರ ವೈಯಕ್ತಿಕ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು! ಕಾರಣವೇನು ಗೊತ್ತಾ?

SCROLL FOR NEXT