ಸುಶಾಂತ್ ಸಿಂಗ್ ರಜಪೂತ್ 
ಬಾಲಿವುಡ್

ಹೊರಬಿತ್ತು ಸುಶಾಂತ್ ಸಿಂಗ್ ರಜಪೂತ್ ಮರಣೋತ್ತರ ಪರೀಕ್ಷೆ ವರದಿ: ವರದಿಯಲ್ಲೇನಿದೆ?

ಬಾಲಿವುಡ್​​ನ ಖ್ಯಾತ ನಟ ಸುಶಾಂತ್ ಸಿಂಗ್ ರಜಪೂತ್ ಮುಂಬೈನ ತಮ್ಮ ಮನೆಯಲ್ಲಿ ಭಾನುವಾರ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದರು. ಈ ಸಾವಿನ ಸುತ್ತ ಸಾಕಷ್ಟು ಅನುಮಾನಗಳು ಕೂಡ ಕಾಡಿದ್ದವು. ಆದರೆ, ಇವೆಲ್ಲದಕ್ಕೂ ಅವರ ಮರಣೋತ್ತರ ಪರೀಕ್ಷೆ ವರದಿ ಉತ್ತರ ನೀಡಿದೆ.

ಮುಂಬಯಿ: ಬಾಲಿವುಡ್​​ನ ಖ್ಯಾತ ನಟ ಸುಶಾಂತ್ ಸಿಂಗ್ ರಜಪೂತ್ ಮುಂಬೈನ ತಮ್ಮ ಮನೆಯಲ್ಲಿ ಭಾನುವಾರ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದರು. ಈ ಸಾವಿನ ಸುತ್ತ ಸಾಕಷ್ಟು ಅನುಮಾನಗಳು ಕೂಡ ಕಾಡಿದ್ದವು. ಆದರೆ, ಇವೆಲ್ಲದಕ್ಕೂ ಅವರ ಮರಣೋತ್ತರ ಪರೀಕ್ಷೆ ವರದಿ ಉತ್ತರ ನೀಡಿದೆ. 

34 ವರ್ಷದ ಸುಶಾಂತ್ ಸಿಂಗ್ ಮುಂಬೈನಲ್ಲಿರುವ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ನಿನ್ನೆ ಬೆಳಗ್ಗೆ ಅವರ ಮನೆಯ ಕೆಲಸದವರು ಬಂದು ನೋಡಿದಾಗ ಈ ವಿಷಯ ಗೊತ್ತಾಗಿತ್ತು.  ಆತ್ಮಹತ್ಯೆ ಮಾಡಿಕೊಂಡಿದ್ದ ಸುಶಾಂತ್ ಸಿಂಗ್ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿತ್ತು.

ಕಳೆದ 6 ತಿಂಗಳಿನಿಂದ ಸುಶಾಂತ್ ಸಿಂಗ್ ಖಿನ್ನತೆಯಿಂದ ಬಳಲುತ್ತಿದ್ದರು. ಇದೇ ಕಾರಣಕ್ಕೆ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿತ್ತು. ಇನ್ನು ಇದು ಯಾರಾದರೂ ಮಾಡಿದ ಹತ್ಯೆ ಇರಬಹುದೇ ಎನ್ನುವ ಅನುಮಾನ ಕೂಡ ಕಾಡಿತ್ತು.

ಈಗ ಮರಣೋತ್ತರ ಪರೀಕ್ಷೆ ವರದಿ ಬಂದಿದೆ. ನೇಣು ಬಿಗಿದುಕೊಂಡ ಕಾರಣಕ್ಕೇ ಸುಶಾಂತ್ ಮರಣ ಹೊಂದಿದ್ದಾರೆ. ಅವರ ದೇಹದ ಮೇಲೆ ಯಾವುದೇ ಗಾಯದ ಕಲೆಗಳು ಇರಲಿಲ್ಲ. ಹೀಗಾಗಿ ಇದು ಆತ್ಮಹತ್ಯೆ ಎಂದು ಪೋಸ್ಟ್ ಮಾರ್ಟಮ್ ರಿಪೋರ್ಟ್​ನಲ್ಲಿ ಹೇಳಲಾಗಿದೆ.

ಸುಶಾಂತ್ ಸಿಂಗ್ ತಂದೆ ಹಾಗೂ ಕುಟುಂಬಸ್ಥರು ಪಾಟ್ನಾದಿಂದ ಇಂದು ಮುಂಬೈಗೆ ಆಗಮಿಸಿದ ನಂತರ ಅಂತ್ಯ ಸಂಸ್ಕಾರ ನಡೆಯಲಿದೆ, ಸುಶಾಂತ್ ಅವರ ಕೆಲವು ಅಂಗಾಂಗಗಳನ್ನು ಜೆಜೆ ಆಸ್ಪತ್ರೆಗೆ ಕಳುಹಿಸಲಾಗಿದ್ದು, ಪರೀಕ್ಷೆಗಾಗಿ ಕಾಯಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

SCROLL FOR NEXT