ಅನುರಾಗ್ ಕಶ್ಯಪ್ 
ಬಾಲಿವುಡ್

ಮಿ ಟೂ ಅಭಿಯಾನ ಹೆಸರಿನಲ್ಲಿ ನನ್ನನ್ನು ನಟಿ ಹೈಜಾಕ್ ಮಾಡುತ್ತಿದ್ದಾರೆ: ನಿರ್ದೇಶಕ ಅನುರಾಗ್ ಕಶ್ಯಪ್

ನಟಿ ಪಾಯಲ್ ಘೋಷ್ ತಮ್ಮ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿ ಕೇಸು ದಾಖಲಿಸಿ ಮುಂಬೈ ಪೊಲೀಸರು ವಿಚಾರಣೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಚಿತ್ರ ನಿರ್ದೇಶಕ ಅನುರಾಗ್ ಕಶ್ಯಪ್ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದಾರೆ.ತಮ್ಮ ವಿರುದ್ಧ ಮಾಡುತ್ತಿರುವ ಆರೋಪದಲ್ಲಿ ಯಾವುದೇ ಸತ್ಯವಿಲ್ಲ. ಇದೊಂದು ಪೂರ್ವನಿಯೋಜಿತ ಸುಳ್ಳು ಕೃತ್ಯ ಎಂದು ಹೇಳಿದ್ದಾರೆ.

ನವದೆಹಲಿ: ನಟಿ ಪಾಯಲ್ ಘೋಷ್ ತಮ್ಮ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿ ಕೇಸು ದಾಖಲಿಸಿ ಮುಂಬೈ ಪೊಲೀಸರು ವಿಚಾರಣೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಚಿತ್ರ ನಿರ್ದೇಶಕ ಅನುರಾಗ್ ಕಶ್ಯಪ್ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದಾರೆ.
ತಮ್ಮ ವಿರುದ್ಧ ಮಾಡುತ್ತಿರುವ ಆರೋಪದಲ್ಲಿ ಯಾವುದೇ ಸತ್ಯವಿಲ್ಲ. ಇದೊಂದು ಪೂರ್ವನಿಯೋಜಿತ ಸುಳ್ಳು ಕೃತ್ಯ ಎಂದು ಹೇಳಿದ್ದಾರೆ.

2013ರಲ್ಲಿ ತಮ್ಮ ಮೇಲೆ ನಿರ್ದೇಶಕ ಅನುರಾಗ್ ಕಶ್ಯಪ್ ರೇಪ್ ಮಾಡಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮುಂಬೈಯ ವರ್ಸೊವಾ ಪೊಲೀಸ್ ಠಾಣೆಯಲ್ಲಿ ಪೊಲೀಸರು ನಿರ್ದೇಶಕರನ್ನು ನಿನ್ನೆ ವಿಚಾರಣೆಗೆ ಕರೆದಿದ್ದರು.

2013ರ ಆಗಸ್ಟ್ ತಿಂಗಳಿಡೀ ನಿರ್ದೇಶಕ ಕಶ್ಯಪ್ ಶ್ರೀಲಂಕಾದಲ್ಲಿ ಚಿತ್ರವೊಂದರ ಶೂಟಿಂಗ್ ನಿಮಿತ್ತ ಇದ್ದರು. ಇದಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಅವರು ನೀಡಿದ್ದಾರೆ. ನಟಿಯ ಮೇಲೆ ಮನೆಯಲ್ಲಿ ಅತ್ಯಾಚಾರ ಮಾಡಿದ್ದರು ಎಂಬ ಆರೋಪವನ್ನು ಅವರು ಸಂಪೂರ್ಣವಾಗಿ ನಿರಾಕರಿಸಿದ್ದಾರೆ ಎಂದು ಅನುರಾಗ್ ಕಶ್ಯಪ್ ಅವರ ಪರವಾಗಿ ವಾದ ಮಂಡಿಸುತ್ತಿರುವ ವಕೀಲೆ ಪ್ರಿಯಾಂಕ ಖಿಮನಿ ಹೇಳಿದ್ದಾರೆ.

ತಮ್ಮ ವಿರುದ್ಧ ಸುಖಾಸುಮ್ಮನೆ ನಿಂದಿಸಲು ಇಷ್ಟು ವರ್ಷಗಳು ಕಳೆದ ನಂತರ ನಟಿ ಪಾಯಲ್ ಘೋಷ್ ಆರೋಪ ಮಾಡುತ್ತಿದ್ದಾರೆ. ಎಫ್ ಐಆರ್ ನಲ್ಲಿ ಒಂದು ರೀತಿ ಆರೋಪಿಸಿದ್ದು, ಇನ್ನು ತನಿಖೆ ವೇಳೆ ಮತ್ತೊಂದು ರೀತಿಯಲ್ಲಿ ಆರೋಪ ಮಾಡುವ ಸಾಧ್ಯತೆಯಿದೆ ಎಂದು ಕಶ್ಯಪ್ ಪರ ವಕೀಲೆ ಹೇಳಿದ್ದಾರೆ.

ನಟಿ ಮಾಡಿರುವ ಸುಳ್ಳು ಆರೋಪದಿಂದ ತಮ್ಮ ಮತ್ತು ತಮ್ಮ ಕುಟುಂಬಕ್ಕೆ ತೀವ್ರ ನೋವಾಗಿದ್ದು, ಅಪರಾಧ ನ್ಯಾಯ ವ್ಯವಸ್ಥೆಯನ್ನು ದುರುಪಯೋಗಪಡಿಸಿಕೊಂಡು, ಮಿಟೂ ಅಭಿಯಾನವನ್ನು ತಮ್ಮ ದುರುದ್ದೇಶಕ್ಕೆ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಅನಿಸುತ್ತಿದೆ ಎಂದು ಅನುರಾಗ್ ಕಶ್ಯಪ್ ಹೇಳಿಕೆಯಲ್ಲಿ ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT