ಅನುರಾಗ್ ಕಶ್ಯಪ್ 
ಬಾಲಿವುಡ್

ಮಿ ಟೂ ಅಭಿಯಾನ ಹೆಸರಿನಲ್ಲಿ ನನ್ನನ್ನು ನಟಿ ಹೈಜಾಕ್ ಮಾಡುತ್ತಿದ್ದಾರೆ: ನಿರ್ದೇಶಕ ಅನುರಾಗ್ ಕಶ್ಯಪ್

ನಟಿ ಪಾಯಲ್ ಘೋಷ್ ತಮ್ಮ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿ ಕೇಸು ದಾಖಲಿಸಿ ಮುಂಬೈ ಪೊಲೀಸರು ವಿಚಾರಣೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಚಿತ್ರ ನಿರ್ದೇಶಕ ಅನುರಾಗ್ ಕಶ್ಯಪ್ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದಾರೆ.ತಮ್ಮ ವಿರುದ್ಧ ಮಾಡುತ್ತಿರುವ ಆರೋಪದಲ್ಲಿ ಯಾವುದೇ ಸತ್ಯವಿಲ್ಲ. ಇದೊಂದು ಪೂರ್ವನಿಯೋಜಿತ ಸುಳ್ಳು ಕೃತ್ಯ ಎಂದು ಹೇಳಿದ್ದಾರೆ.

ನವದೆಹಲಿ: ನಟಿ ಪಾಯಲ್ ಘೋಷ್ ತಮ್ಮ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿ ಕೇಸು ದಾಖಲಿಸಿ ಮುಂಬೈ ಪೊಲೀಸರು ವಿಚಾರಣೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಚಿತ್ರ ನಿರ್ದೇಶಕ ಅನುರಾಗ್ ಕಶ್ಯಪ್ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದಾರೆ.
ತಮ್ಮ ವಿರುದ್ಧ ಮಾಡುತ್ತಿರುವ ಆರೋಪದಲ್ಲಿ ಯಾವುದೇ ಸತ್ಯವಿಲ್ಲ. ಇದೊಂದು ಪೂರ್ವನಿಯೋಜಿತ ಸುಳ್ಳು ಕೃತ್ಯ ಎಂದು ಹೇಳಿದ್ದಾರೆ.

2013ರಲ್ಲಿ ತಮ್ಮ ಮೇಲೆ ನಿರ್ದೇಶಕ ಅನುರಾಗ್ ಕಶ್ಯಪ್ ರೇಪ್ ಮಾಡಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮುಂಬೈಯ ವರ್ಸೊವಾ ಪೊಲೀಸ್ ಠಾಣೆಯಲ್ಲಿ ಪೊಲೀಸರು ನಿರ್ದೇಶಕರನ್ನು ನಿನ್ನೆ ವಿಚಾರಣೆಗೆ ಕರೆದಿದ್ದರು.

2013ರ ಆಗಸ್ಟ್ ತಿಂಗಳಿಡೀ ನಿರ್ದೇಶಕ ಕಶ್ಯಪ್ ಶ್ರೀಲಂಕಾದಲ್ಲಿ ಚಿತ್ರವೊಂದರ ಶೂಟಿಂಗ್ ನಿಮಿತ್ತ ಇದ್ದರು. ಇದಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಅವರು ನೀಡಿದ್ದಾರೆ. ನಟಿಯ ಮೇಲೆ ಮನೆಯಲ್ಲಿ ಅತ್ಯಾಚಾರ ಮಾಡಿದ್ದರು ಎಂಬ ಆರೋಪವನ್ನು ಅವರು ಸಂಪೂರ್ಣವಾಗಿ ನಿರಾಕರಿಸಿದ್ದಾರೆ ಎಂದು ಅನುರಾಗ್ ಕಶ್ಯಪ್ ಅವರ ಪರವಾಗಿ ವಾದ ಮಂಡಿಸುತ್ತಿರುವ ವಕೀಲೆ ಪ್ರಿಯಾಂಕ ಖಿಮನಿ ಹೇಳಿದ್ದಾರೆ.

ತಮ್ಮ ವಿರುದ್ಧ ಸುಖಾಸುಮ್ಮನೆ ನಿಂದಿಸಲು ಇಷ್ಟು ವರ್ಷಗಳು ಕಳೆದ ನಂತರ ನಟಿ ಪಾಯಲ್ ಘೋಷ್ ಆರೋಪ ಮಾಡುತ್ತಿದ್ದಾರೆ. ಎಫ್ ಐಆರ್ ನಲ್ಲಿ ಒಂದು ರೀತಿ ಆರೋಪಿಸಿದ್ದು, ಇನ್ನು ತನಿಖೆ ವೇಳೆ ಮತ್ತೊಂದು ರೀತಿಯಲ್ಲಿ ಆರೋಪ ಮಾಡುವ ಸಾಧ್ಯತೆಯಿದೆ ಎಂದು ಕಶ್ಯಪ್ ಪರ ವಕೀಲೆ ಹೇಳಿದ್ದಾರೆ.

ನಟಿ ಮಾಡಿರುವ ಸುಳ್ಳು ಆರೋಪದಿಂದ ತಮ್ಮ ಮತ್ತು ತಮ್ಮ ಕುಟುಂಬಕ್ಕೆ ತೀವ್ರ ನೋವಾಗಿದ್ದು, ಅಪರಾಧ ನ್ಯಾಯ ವ್ಯವಸ್ಥೆಯನ್ನು ದುರುಪಯೋಗಪಡಿಸಿಕೊಂಡು, ಮಿಟೂ ಅಭಿಯಾನವನ್ನು ತಮ್ಮ ದುರುದ್ದೇಶಕ್ಕೆ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಅನಿಸುತ್ತಿದೆ ಎಂದು ಅನುರಾಗ್ ಕಶ್ಯಪ್ ಹೇಳಿಕೆಯಲ್ಲಿ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

SCROLL FOR NEXT