ಬಾಲಿವುಡ್

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ: ಬಾಲಿವುಡ್ ನಟ ವಿವೇಕ್ ಒಬೆರಾಯ್ ಮನೆ ಮೇಲೆ ಸಿಸಿಬಿ ದಾಳಿ!

ಸ್ಯಾಂಡಲ್ ವುಡ್ ಡ್ರಗ್ ಪ್ರಕರಣಕ್ಕೆ ಸಂಬಂಧಿಸಿ ಬಾಲಿವುಡ್ ನಟ ವಿವೇಕ್ ಒಬೆರಾಯ್ ಅವರ ಮನೆಯ ಮೇಲೆ ಬೆಂಗಳೂರು ಕೇಂದ್ರ ಅಪರಾಧ ಶಾಖೆ (ಸಿಸಿಬಿ) ದಾಳಿ ನಡೆಸಿದೆ.

ಸ್ಯಾಂಡಲ್ ವುಡ್ ಡ್ರಗ್ ಪ್ರಕರಣಕ್ಕೆ ಸಂಬಂಧಿಸಿ ಬಾಲಿವುಡ್ ನಟ ವಿವೇಕ್ ಒಬೆರಾಯ್ ಅವರ ಮನೆಯ ಮೇಲೆ ಬೆಂಗಳೂರು ಕೇಂದ್ರ ಅಪರಾಧ ಶಾಖೆ (ಸಿಸಿಬಿ) ದಾಳಿ ನಡೆಸಿದೆ. ವಿವೇಕ್ ಅವರ ಸಂಬಂಧಿಯಾಗಿರುವ ಆದಿತ್ಯ ಅಳ್ವಾ ಬೆಂಗಳೂರು ಡ್ರಗ್ಸ್ ಪ್ರಕರಣದ ಆರೋಪಿ. ಆತನನ್ನು ಹುಡುಕಿಕೊಂಡು ಪೊಲೀಸರು ವಿವೇಕ್ ಅವರ ಮುಂಬೈ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. 

ಆದಿತ್ಯ ವಿರುದ್ಧ ಪ್ರಕರಣ ದಾಖಲಾದಾಗಿನಿಂದ ಆತ ತಲೆಮರೆಸಿಕೊಂಡಿದ್ದಾನೆ. ಇಂದು ಸಿಸಿಬಿ ನ್ಯಾಯಾಲಯದ ವಾರಂಟ್‌ನೊಂದಿಗೆ ವಿವೇಕ್ ಅವರ ಮನೆಯಲ್ಲಿ ಹುಡುಕಾಟ ನಡೆಸಿದೆ.

ಸಿಸಿಬಿ ಹೊರಡಿಸಿದ ಹೇಳಿಕೆಯ ಪ್ರಕಾರ, ಕಾಟನ್‌ಪೇಟೆ ಡ್ರಗ್ಸ್ ಪ್ರಕರಣದಲ್ಲಿ ಆದಿತ್ಯ ಆಳ್ವಾ ಬೇಕಾಗಿದ್ದು ಆತ ತಲೆಮರೆಸಿಕೊಂಡಿದ್ದಾನೆ. ವಿವೇಕ್ ಒಬೆರಾಯ್ ಅವರ ಸಂಬಂಧಿಯಾಗಿರುವ ಆಳ್ವಾಗೆ ಆಶ್ರಯ ನೀಡೀದ್ದಾರೆಂಬ ಮಾಹಿತಿ ಇದ್ದು ಅದಕ್ಕಾಗಿ ನಾವು ಒಬೆರಾಯ್ ಅವರ ನಿವಾಸದ ಮೇಲೆ ದಾಳಿ ಮಾಡಲಾಗಿದೆ. ಇದಕ್ಕಾಗಿ ನ್ಯಾಯಾಲಯದಿಂದ ವಾರಂಟ್ ತೆಗೆದುಕೊಂಡು ಸಿಸಿಬಿ ತಂಡ ಮುಂಬೈನ ಅವರ ಮನೆಗೆ ತೆರಳಿದೆ.

ಸ್ಯಾಂಡಲ್ ವುಡ್ ಡ್ರಗ್ ಪ್ರಕರಣದಲ್ಲಿ ಅನೇಕ ದೊಡ್ಡದೊಡ್ಡ ಹೆಸರುಗಳು ಕೇಳಿ ಬಂದಿದೆ. ಅವುಗಳಲ್ಲಿ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ಸಹ ಇದ್ದಾರೆ. 

ಮೂಲಗಳ ಪ್ರಕಾರ, ಕಳೆದ ಒಂದು ತಿಂಗಳಿನಿಂದ ಪೊಲೀಸರು ಮಾದಕ ದ್ರವ್ಯ ಸೇವಿಸುವವರು, ಸರಬರಾಜುದಾರರು ಮತ್ತು ಪಾರ್ಟಿ ಆಯೋಜಕರ ವಿರುದ್ಧ ತನಿಖೆ ಕೈಗೊಂಡಿದ್ದಾರೆ.

ಸಿಸಿಬಿ ತಂಡ ಈ ಮೊದಲು ಆದಿತ್ಯ ಮನೆಯ ಮೇಲೆ ಸಹ ದಾಳಿ ಮಾಡಿತ್ತು. ಹೆಬ್ಬಾಳದ ಸಮೀಪವಿರುವ ಆದಿತ್ಯ ಮನೆ 'ಹೌಸ್ ಆಫ್ ಲೈವ್ಸ್ ಅನ್ನು ಶೋಧಿಸಲಾಗಿದೆ. ಈ ಆದಿತ್ಯ ಆಳ್ವಾ ಮಾಜಿ ಸಚಿವ ಜೀವರಾಜ್ ಅಳ್ವಾ ಅವರ ಪುತ್ರ. ಈತ ದೊಡ್ಡ ದೊಡ್ಡ ಪಾರ್ಟಿಗಳನ್ನು ನಡೆಸುತ್ತಿದ್ದನು ಎನ್ನಲಾಗಿದೆ. ಇವರ ಸಹೋದರಿ ಪ್ರಿಯಾಂಕಾ ಆಳ್ವಾ ಬಾಲಿವುಡ್ ನಟ ವಿವೇಕ್ ಒಬೆರಾಯ್ ಅವರನ್ನು ಮದುವೆಯಾಗಿದ್ದರು.

ಮೂತ್ರದ ಮಾದರಿಯನ್ನು ಹಾಳು ಮಾಡಿದ್ದ ರಾಗಿಣಿ!

ಡ್ರಗ್ಸ್ ಪರೀಕ್ಷೆಯ ಸಮಯದಲ್ಲಿ ರಾಗಿಣಿ ಮೂತ್ರದಲ್ಲಿ ನೀರನ್ನು ಬೆರೆಸಿ ಮಾದರಿಯನ್ನು ಹಾಳು ಮಾಡಲು ಪ್ರಯತ್ನಿಸಿದರು.  ಆ ಸಮಯ ಪೋಲೀಸರು ಮತ್ತೆ ಅವರ ಸ್ಯಾಂಪಲ್ ತೆಗೆದುಕೊಂಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT