ಮುಂಬೈ: ಈಗಾಗಲೇ ದೇಶದ್ರೋಹ ಪ್ರಕರಣದ ಅಡಿ ಸಮನ್ಸ್ ಎದುರಿಸುತ್ತಿರುವ ಬಾಲಿವುಡ್ ನಟಿ ಕಂಗನಾಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು ಎರಡನೇ ಪ್ರಕರಣ ದಾಖಲಾಗಿದೆ.
ಮುಂಬೈ ಮೂಲದ ವಕೀಲರೊಬ್ಬರು ಕಂಗನಾ ವಿರುದ್ಧ ಪ್ರಕರಣ ದಾಖಲಿಸಿದ್ದು ನ್ಯಾಯಾಂಗದ ವಿರುದ್ಧ ದುರುದ್ದೇಶಪೂರಿತವಾಗಿ ಟ್ವೀಟ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಅಂಧೇರಿ ಮ್ಯಾಜಿಸ್ಟ್ರೇಟ್ ಕೋರ್ಟ್ ನಲ್ಲಿ ಆಲೀ ಕಾಸಿಫ್ ಖಾನ್ ದೇಶ್ ಮುಖ್ ಪ್ರಕರಣ ದಾಖಲಿಸಿದ್ದು, ಕಂಗನಾ ರಣಾವತ್ ದೇಶದ್ರೋಹವೆಸಗಿದ್ದಾರೆ ಹಾಗೂ ಎರಡು ಸಮುದಾಯಗಳ ನಡುವೆ ದ್ವೇಷ ಹರಡುವ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಭಾರತದಲ್ಲಿರುವ ವೈವಿಧ್ಯಮಯ ಸಮುದಾಯಗಳು, ಸರ್ಕಾರಿ ಸಂಸ್ಥೆಗಳ ಬಗ್ಗೆ ಬಾಲಿವುಡ್ ನಟಿಗೆ ಗೌರವವಿಲ್ಲ, ನ್ಯಾಯಾಂಗವನ್ನೂ ಗೇಲಿ ಮಾಡಿದ್ದಾರೆ. ಬಾಂದ್ರಾ ಕೋರ್ಟ್ ಆದೇಶದ ಪ್ರಕಾರ ಪೊಲೀಸರು ಎಫ್ಐಆರ್ ದಾಖಲಿಸಲಾಗಿದೆ.