ಕಂಗನಾ ರಣಾವತ್ 
ಬಾಲಿವುಡ್

ಪೊಲೀಸ್ ವಿಚಾರಣೆಗೆ ಹಾಜರಾಗುವಂತೆ ನಟಿ ಕಂಗನಾ ಮತ್ತು ಸಹೋದರಿಗೆ ಸಮನ್ಸ್

ದೇಶದ್ರೋಹ ಪ್ರಕರಣದ ಅಡಿ ಪೊಲೀಸ್​ ವಿಚಾರಣೆಗೆ ಹಾಜರಾಗುವಂತೆ ನಟಿ ಕಂಗನಾ ರಣಾವತ್​ ಮತ್ತು ಆಕೆಯ ಸಹೋದರಿ ರಂಗೋಲಿ ಚಾಂದೆಲ್​ ಅವರಿಗೆ ಸಮನ್ಸ್​ ಜಾರಿ ಮಾಡಲಾಗಿದೆ. 

ನವದೆಹಲಿ: ದೇಶದ್ರೋಹ ಪ್ರಕರಣದ ಅಡಿ ಪೊಲೀಸ್​ ವಿಚಾರಣೆಗೆ ಹಾಜರಾಗುವಂತೆ ನಟಿ ಕಂಗನಾ ರಣಾವತ್​ ಮತ್ತು ಆಕೆಯ ಸಹೋದರಿ ರಂಗೋಲಿ ಚಾಂದೆಲ್​ ಅವರಿಗೆ ಸಮನ್ಸ್​ ಜಾರಿ ಮಾಡಲಾಗಿದೆ. 

ವಿಜಯದಶಮಿ ಹಬ್ಬದ ದಿನವಾದ ಅ.26 ಮತ್ತು 27ರಂದು ಅವರು ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ. ಬಾಲಿವುಡ್​ ನಟಿ ಕಂಗನಾ ರಣಾವತ್​ ಹಾಗೂ ಆಕೆಯ ಸಹೋದರಿ ರಂಗೋಲಿ ಚಾಂದೆಲ್​ ತಮ್ಮ ಟ್ವೀಟ್​ಗಳ ಮೂಲಕ ಕೋಮು ದ್ವೇಷವನ್ನು ಹರಡುವ ಪ್ರಯತ್ನ ನಡೆಸುತ್ತಿದ್ದಾರೆ ಎಂಬ ​ ದೂರಿನ ಕುರಿತು ದಾಖಲಾದ ಎಫ್​ಐಆರ್​ ಅಡಿ ಅವರನ್ನು ವಿಚಾರಣೆಗೆ ಒಳಪಡಿಸಲಾಗುವುದು.

ನಟಿ ಕಂಗನಾ ಮತ್ತವರ ಸಹೋದರಿ ಟ್ವೀಟ್​ ಮೂಲಕ ಕೋಮುದ್ವೇಷ ಹರಡುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಆರೋಪಿಸಿ ನಿರ್ದೇಶಕ ಸಾಹಿಲ್​ ಆಸ್ರಫ್​ಆಲಿ ಸಯ್ಯದ್​ ಬಾಂದ್ರಾ ಮೆಟ್ರೋಪಾಲಿಟನ್​ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು. ಈ ದೂರಿನ ಅನ್ವಯ ಈ ಕ್ರಮಕ್ಕೆ ಮುಂದಾಗಲಾಗಿದೆ.

ಕಂಗಾನಾ ಆಕ್ಷೇಪಾರ್ಹ ಟ್ವೀಟ್​ ಮಾಡಿದ್ದಾರೆ. ಇದು ಧಾರ್ಮಿಕ ಮನೋಭಾವಕ್ಕೆ ಧಕ್ಕೆ ತರುವಂತೆ ಇದೆ. ಅಷ್ಟೇ ಅಲ್ಲದೇ , ಅನೇಕ ಕಲಾವಿದರ ಭಾವನೆಗಳು ಚ್ಯುತಿ ತರುತ್ತಿದೆ. ಕಂಗನಾ ಕಲಾವಿದರನ್ನು ಕೋಮು ವರ್ಗದಲ್ಲಿ ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಸಯ್ಯದ್​ ದೂರು ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT