ಕಂಗನಾ ರಣಾವತ್ 
ಬಾಲಿವುಡ್

ಪೊಲೀಸ್ ವಿಚಾರಣೆಗೆ ಹಾಜರಾಗುವಂತೆ ನಟಿ ಕಂಗನಾ ಮತ್ತು ಸಹೋದರಿಗೆ ಸಮನ್ಸ್

ದೇಶದ್ರೋಹ ಪ್ರಕರಣದ ಅಡಿ ಪೊಲೀಸ್​ ವಿಚಾರಣೆಗೆ ಹಾಜರಾಗುವಂತೆ ನಟಿ ಕಂಗನಾ ರಣಾವತ್​ ಮತ್ತು ಆಕೆಯ ಸಹೋದರಿ ರಂಗೋಲಿ ಚಾಂದೆಲ್​ ಅವರಿಗೆ ಸಮನ್ಸ್​ ಜಾರಿ ಮಾಡಲಾಗಿದೆ. 

ನವದೆಹಲಿ: ದೇಶದ್ರೋಹ ಪ್ರಕರಣದ ಅಡಿ ಪೊಲೀಸ್​ ವಿಚಾರಣೆಗೆ ಹಾಜರಾಗುವಂತೆ ನಟಿ ಕಂಗನಾ ರಣಾವತ್​ ಮತ್ತು ಆಕೆಯ ಸಹೋದರಿ ರಂಗೋಲಿ ಚಾಂದೆಲ್​ ಅವರಿಗೆ ಸಮನ್ಸ್​ ಜಾರಿ ಮಾಡಲಾಗಿದೆ. 

ವಿಜಯದಶಮಿ ಹಬ್ಬದ ದಿನವಾದ ಅ.26 ಮತ್ತು 27ರಂದು ಅವರು ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ. ಬಾಲಿವುಡ್​ ನಟಿ ಕಂಗನಾ ರಣಾವತ್​ ಹಾಗೂ ಆಕೆಯ ಸಹೋದರಿ ರಂಗೋಲಿ ಚಾಂದೆಲ್​ ತಮ್ಮ ಟ್ವೀಟ್​ಗಳ ಮೂಲಕ ಕೋಮು ದ್ವೇಷವನ್ನು ಹರಡುವ ಪ್ರಯತ್ನ ನಡೆಸುತ್ತಿದ್ದಾರೆ ಎಂಬ ​ ದೂರಿನ ಕುರಿತು ದಾಖಲಾದ ಎಫ್​ಐಆರ್​ ಅಡಿ ಅವರನ್ನು ವಿಚಾರಣೆಗೆ ಒಳಪಡಿಸಲಾಗುವುದು.

ನಟಿ ಕಂಗನಾ ಮತ್ತವರ ಸಹೋದರಿ ಟ್ವೀಟ್​ ಮೂಲಕ ಕೋಮುದ್ವೇಷ ಹರಡುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಆರೋಪಿಸಿ ನಿರ್ದೇಶಕ ಸಾಹಿಲ್​ ಆಸ್ರಫ್​ಆಲಿ ಸಯ್ಯದ್​ ಬಾಂದ್ರಾ ಮೆಟ್ರೋಪಾಲಿಟನ್​ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು. ಈ ದೂರಿನ ಅನ್ವಯ ಈ ಕ್ರಮಕ್ಕೆ ಮುಂದಾಗಲಾಗಿದೆ.

ಕಂಗಾನಾ ಆಕ್ಷೇಪಾರ್ಹ ಟ್ವೀಟ್​ ಮಾಡಿದ್ದಾರೆ. ಇದು ಧಾರ್ಮಿಕ ಮನೋಭಾವಕ್ಕೆ ಧಕ್ಕೆ ತರುವಂತೆ ಇದೆ. ಅಷ್ಟೇ ಅಲ್ಲದೇ , ಅನೇಕ ಕಲಾವಿದರ ಭಾವನೆಗಳು ಚ್ಯುತಿ ತರುತ್ತಿದೆ. ಕಂಗನಾ ಕಲಾವಿದರನ್ನು ಕೋಮು ವರ್ಗದಲ್ಲಿ ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಸಯ್ಯದ್​ ದೂರು ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?