ಕಂಗನಾ ರಣಾವತ್ 
ಬಾಲಿವುಡ್

ಸಾವರ್ಕರ್ ರೀತಿ ನನ್ನನ್ನು ಜೈಲಿನಲ್ಲಿರಿಸಲು ಸರ್ಕಾರ ಯತ್ನಿಸುತ್ತಿದೆ: ಕಂಗನಾ ರಣಾವತ್

ನನ್ನ ವಿರುದ್ಧ ದೂರು ದಾಖಲಿಸಿರುವ ಸರ್ಕಾರ ನನ್ನನ್ನು ಜೈಲಿನಲ್ಲಿರಿಸಲು ಪ್ರಯತ್ನಿಸುತ್ತಿದೆ ಎಂದು ನಟಿ ಕಂಗನಾ ರಣಾವತ್ ಆರೋಪಿಸಿದ್ದಾರೆ

ಮುಂಬಯಿ: ನನ್ನ ವಿರುದ್ಧ ದೂರು ದಾಖಲಿಸಿರುವ ಸರ್ಕಾರ ನನ್ನನ್ನು ಜೈಲಿನಲ್ಲಿರಿಸಲು ಪ್ರಯತ್ನಿಸುತ್ತಿದೆ ಎಂದು ನಟಿ ಕಂಗನಾ ರಣಾವತ್ ಆರೋಪಿಸಿದ್ದಾರೆ.

ತಮ್ಮ ಸೋಷಿಯಲ್ ಮೀಡಿಯಾ ಪೋಸ್ಟ್‌ಗಳ ಮೂಲಕ ಹಿಂದೂ ಮತ್ತು ಮುಸ್ಲಿಂ ನಡುವೆ ಕೋಮು ಸೌಹಾರ್ದ ಕದಡಿದ ಆರೋಪದಡಿ ಬಾಲಿವುಡ್ ಸೆಲೆಬ್ರಿಟಿ ಸಹೋದರಿಯರ ವಿರುದ್ಧ ದೂರು ದಾಖಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ನಟಿ ಕಂಗನಾ ಸರ್ಕಾರ ತಮ್ಮನ್ನು ಜೈಲಿನಲ್ಲಿರಿಸಲು ಪ್ರಯತ್ನಿಸುತ್ತಿದೆ ಎಂದು ದೂರಿದ್ದಾರೆ.

ನೇತಾ ಬೋಸ್, ಸಾವರ್ಕರ್ ಮತ್ತು ಝಾನ್ಸಿ ರಾಣಿಯಂತೆ ನಾನು ನನ್ನ ಕಾಯಕ ಮಾಡುತ್ತಿದ್ದೇನೆ, ಇಂದು ಸರ್ಕಾರವು ನನ್ನನ್ನು ಜೈಲಿಗೆ ಹಾಕಲು ಪ್ರಯತ್ನಿಸುತ್ತಿದೆ, ಅದು ನನ್ನ ಆಯ್ಕೆಗಳ ಬಗ್ಗೆ ನನಗೆ ವಿಶ್ವಾಸವನ್ನುಂಟುಮಾಡುತ್ತದೆ, ಶೀಘ್ರದಲ್ಲೇ ಜೈಲಿನಲ್ಲಿರಲು ಕಾಯುತ್ತಿದ್ದೇನೆ, ಇದು ನನ್ನ ಜೀವನಕ್ಕೆ ಅರ್ಥ ನೀಡುತ್ತದೆ ಜೈ ಹಿಂದ್ ಎಂದು ಟ್ವೀಟ್ ಮಾಡಿದ್ದಾರೆ.

ಅಂಧೇರಿ ಮ್ಯಾಜಿಸ್ಟ್ರೇಟ್ ಕೋರ್ಟ್ ನಲ್ಲಿ ಆಲೀ ಕಾಸಿಫ್ ಖಾನ್ ದೇಶ್ ಮುಖ್ ಪ್ರಕರಣ ದಾಖಲಿಸಿದ್ದು, ಕಂಗನಾ ರಣಾವತ್ ದೇಶದ್ರೋಹವೆಸಗಿದ್ದಾರೆ ಹಾಗೂ ಎರಡು ಸಮುದಾಯಗಳ ನಡುವೆ ದ್ವೇಷ ಹರಡುವ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. 

ರಾಣಿ ಲಕ್ಷ್ಮಿ ಬಾಯಿ ಅವರ ಕೋಟೆಯನ್ನು ಮುರಿಯಲಾಯಿತು, ಅದರಂತೆ ನನ್ನ ಮನೆಯನ್ನು ಧ್ವಂಸ ಮಾಡಲಾಗಿದೆ,  ಸಾವರ್ಕರ್ ರನ್ನು ಜೈಲಿನಲ್ಲಿಡಲಾಗಿತ್ತು.  ನನ್ನನ್ನು ಕೂಡ ಜೈಲಿನಲ್ಲಿರಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಟ್ಟೀಟ್ ಮಾಡಿ ನಟ ಅಮೀರ್ ಖಾನ್ ಗೆ ಟ್ಯಾಗ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

Idre Nemdiyaag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

SCROLL FOR NEXT