ಕಂಗನಾ ರನೌತ್ 
ಬಾಲಿವುಡ್

ರಣವೀರ್, ರಣಬೀರ್, ವಿಕ್ಕಿ ಕೌಶಿಕ್ ಡ್ರಗ್ ಪರೀಕ್ಷೆ ಮಾಡಿಸಿಕೊಳ್ಳಲಿ: ಕಂಗನಾ ರನೌತ್

ಇತ್ತೀಚಿಗಷ್ಟೇ ಬಾಲಿವುಡ್ ನಲ್ಲಿ ಡ್ರಗ್ ಮಾಫಿಯಾ ಸಕ್ರಿಯವಾಗಿದೆ ಎಂದು ಹೇಳಿಕೆ ನೀಡಿದ್ದ ಬಾಲಿವುಡ್ ಕ್ವೀನ್ ಕಂಗನಾ ರನೌತ್ ಅವರು, ನಟ 'ರಣವೀರ್ ಸಿಂಗ್, ರಣಬೀರ್ ಕಪೂರ್, ಅಯಾನ್ ಮುಖರ್ಜಿ ಹಾಗೂ ವಿಕ್ಕಿ ಕೌಶಿಕ್ ಅವರು ಡ್ರಗ್ ಪರೀಕ್ಷೆಗೆ ತಮ್ಮ ರಕ್ತದ ಮಾದರಿಗಳನ್ನು ನೀಡಬೇಕು ಎಂದು ಕೇಳಿಕೊಂಡಿದ್ದಾರೆ. 

ಮುಂಬೈ: ಇತ್ತೀಚಿಗಷ್ಟೇ ಬಾಲಿವುಡ್ ನಲ್ಲಿ ಡ್ರಗ್ ಮಾಫಿಯಾ ಸಕ್ರಿಯವಾಗಿದೆ ಎಂದು ಹೇಳಿಕೆ ನೀಡಿದ್ದ ಬಾಲಿವುಡ್ ಕ್ವೀನ್ ಕಂಗನಾ ರನೌತ್ ಅವರು, ನಟ 'ರಣವೀರ್ ಸಿಂಗ್, ರಣಬೀರ್ ಕಪೂರ್, ಅಯಾನ್ ಮುಖರ್ಜಿ ಹಾಗೂ ವಿಕ್ಕಿ ಕೌಶಿಕ್ ಅವರು ಡ್ರಗ್ ಪರೀಕ್ಷೆಗೆ ತಮ್ಮ ರಕ್ತದ ಮಾದರಿಗಳನ್ನು ನೀಡಬೇಕು ಎಂದು ಕೇಳಿಕೊಂಡಿದ್ದಾರೆ. 

ಸೆಲೆಬ್ರಿಟಿಗಳು ಡ್ರಗ್ಸ್ ಸೇವಿಸುವ ಬಗ್ಗೆ ನಟಿ ಕಂಗನಾ ರನೌತ್ ಇತ್ತೀಚಿಗೆ ಸಂದರ್ಶನವೊಂದರಲ್ಲಿ ಮಾತನಾಡಿ, ಬಾಲಿವುಡ್ ನ ಅನೇಕ ನಟರು ಡ್ರಗ್ಸ್ ಸೇವನೆಯಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದರು. ಶೇ 99ರಷ್ಟು ಬಾಲಿವುಡ್ ನ ಖ್ಯಾತ ನಟರು ಮಾದಕ ದ್ರವ್ಯ ವ್ಯಸನಿಗಳಾಗಿದ್ದಾರೆ, ತನಿಖೆ ನಡೆಸಿದರೆ ಅನೇಕರ ಹೆಸರುಗಳು ಹೊರಬರುತ್ತೆ ಎಂದು ಆರೋಪಿಸಿದ್ದರು.

ಈ ಬಗ್ಗೆ ಇಂದು ಟ್ವೀಟ್ ಮಾಡಿರುವ ಕಂಗನಾ ಬಾಲಿವುಡ್ ನಲ್ಲಿ ಯಾರೆಲ್ಲ ಡ್ರಗ್ಸ್ ಸೇವಿಸುತ್ತಾರೆ ಎಂದು ಬಹಿರಂಗವಾಗಿ ಹೇಳಿದ್ದಾರೆ. ಹಲವು ನಟರು ರಕ್ತ ಪರೀಕ್ಷೆಗೆ ಒಳಗಾಗಬೇಕು, ಈ ಮೂಲಕ ತಮ್ಮ ವಿರುದ್ಧ ಕೇಳಿ ಬರುತ್ತಿರುವ ಆರೋಪಗಳಿಗೆ ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

''ರಣ್ವೀರ್ ಸಿಂಗ್, ರಣ್ಬೀರ್ ಕಪೂರ್, ಅಯಾನ್ ಮುಖರ್ಜಿ, ವಿಕ್ಕಿ ಕೌಶಿಕ್ ಅವರು ಡ್ರಗ್ ಪರೀಕ್ಷೆಗೆ ತಮ್ಮ ರಕ್ತದ ಮಾದರಿ ನೀಡುವಂತೆ ಕೇಳಿಕೊಳ್ಳುತ್ತೇನೆ. ಅವರು ಕೊಕೇನ್ ವ್ಯಸನಿಗಳೆಂದು ವದಂತಿಗಳಿವೆ. ಈ ವದಂತಿಗಳಿಗೆ ಸ್ಪಷ್ಟನೆ ನೀಡಬೇಕು. ವ್ಯಸನಿಗಳು ಅಲ್ಲ ಎಂದು ಸಾಬೀತಾದರೆ ಲಕ್ಷಾಂತರ ಜನರನ್ನು ಪ್ರೇರೇಪಿಸಬಹುದು." ಎಂದು ಟ್ವೀಟ್ ಮಾಡಿ ಪ್ರಧಾನಮಂತ್ರಿ ಕಚೇರಿ ಖಾತೆಗೆ ಟ್ಯಾಗ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಹುಲ್ ಗಾಂಧಿ ಲೋಕಸಭಾ ಸದಸ್ಯತ್ವ ರದ್ದುಗೊಳಿಸಲು ಬಿಜೆಪಿ ಸಂಸದ ನೋಟಿಸ್; ಕಾರಣ ಏನು ಗೊತ್ತಾ?

ಬಿಕ್ಲು ಶಿವ ಕೊಲೆ ಪ್ರಕರಣ: ಭೈರತಿ ಬಸವರಾಜ್​ಗೆ ಬಿಗ್ ಶಾಕ್​​; ಸುಪ್ರೀಂ ಕೋರ್ಟ್ ನಲ್ಲೂ ಜಾಮೀನು‌ ಅರ್ಜಿ ವಜಾ

ಕಾನ್ಪುರ ಲ್ಯಾಂಬೋರ್ಗಿನಿ ಅಪಘಾತ: ತಂಬಾಕು ದೊರೆ ಕೆಕೆ ಮಿಶ್ರಾ ಪುತ್ರನ ಬಂಧನ

'ಆ ದಿನದ ಒಪ್ಪಂದ ಮರೆತು ಬಿಟ್ರಾ'? ನಿಮ್ಮ ಸಮ್ಮುಖದಲ್ಲೇ ಮಾತಾಗಿತ್ತು ಅಲ್ವಾ? ಆಗುತ್ತೋ ಇಲ್ವೋ ಕ್ಲಿಯರ್​ ಮಾಡಿ; ಡಿಕೆ ಬ್ರದರ್ಸ್ ದುಂಬಾಲು!

ಜಾರ್ಖಂಡ್: ಶಾಲೆಯಲ್ಲಿ ಸರಸ್ವತಿ ಪೂಜೆಗೆ ಹಣ ನೀಡದ ವಿದ್ಯಾರ್ಥಿಗಳಿಗೆ 100 ಸಿಟ್ ಅಪ್ಸ್ ಶಿಕ್ಷೆ, ಊಟ ನಿರಾಕರಣೆ!

SCROLL FOR NEXT