ಸುಶಾಂತ್ ಸಿಂಗ್ ರಜಪೂತ್ 
ಬಾಲಿವುಡ್

ಸುಶಾಂತ್‌ ಸಿಂಗ್‌ ಜೀವ ವಿಮೆ ಮಾಡಿಸಿಯೇ ಇಲ್ಲ: ತಪ್ಪು ಮಾಹಿತಿ ನೀಡಲಾಗುತ್ತಿದೆ; ಸುಶಾಂತ್ ವಕೀಲ

ಬಾಲಿವುಡ್‌ ನಟ ಸುಶಾಂತ್‌ ಸಿಂಗ್‌ ರಜಪೂತ್‌ ಅವರು ಜೀವ ವಿಮೆ ಮಾಡಿಸಿಯೇ ಇರಲಿಲ್ಲ, ಸುಶಾಂತ್ ಜೀವ ವಿಮೆ ಮಾಡಿಸಿದ್ದರು ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ ಎಂದು ಸುಶಾಂತ್ ಪರ ವಕೀಲ ಕೆಕೆ ಸಿಂಗ್ ಸ್ಪಷ್ಟ ಪಡಿಸಿದ್ದಾರೆ.

ನವದೆಹಲಿ: ಬಾಲಿವುಡ್‌ ನಟ ಸುಶಾಂತ್‌ ಸಿಂಗ್‌ ರಜಪೂತ್‌ ಅವರು ಜೀವ ವಿಮೆ ಮಾಡಿಸಿಯೇ ಇರಲಿಲ್ಲ, ಸುಶಾಂತ್ ಜೀವ ವಿಮೆ ಮಾಡಿಸಿದ್ದರು ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ ಎಂದು ಸುಶಾಂತ್ ಪರ ವಕೀಲ ಕೆಕೆ ಸಿಂಗ್ ಸ್ಪಷ್ಟ ಪಡಿಸಿದ್ದಾರೆ.

ಇತ್ತೀಚೆಗೆ ಮೃತಪಟ್ಟ ಬಾಲಿವುಡ್‌ ನಟ ಸುಶಾಂತ್‌ ಸಿಂಗ್‌ ರಜಪೂತ್‌ ಅವರು ಜೀವ ವಿಮೆ ಹೊಂದಿದ್ದಾರೆ. ಆದರೆ, ಅವರೇನಾದರೂ ಆತ್ಮಹತ್ನೆ ಮಾಡಿಕೊಂಡಿದ್ದರೆ ವಿಮೆ ಹಣವು ಅವರ ಕುಟುಂಬದವರಿಗೆ ಸಿಗುವುದಿಲ್ಲ ಎಂದು ಕೆಲ ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸುಶಾಂತ್‌ ಅವರ ತಂದೆ ಕೆಕೆ ಸಿಂಗ್ ಪರ ವಕೀಲ ವಿಕಾಸ್‌ ಸಿಂಗ್‌‌, ನಟ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಸುಳ್ಳು ಮತ್ತು ಅವರು ಜೀವ ವಿಮೆಯನ್ನೇ ಮಾಡಿಸಿರಲಿಲ್ಲ ಎಂದು ಹೇಳಿದ್ದಾರೆ. 

‘ಸುಶಾಂತ್‌ ಅವರು ಜೀವ ವಿಮಾ ಪಾಲಿಸಿಗಳನ್ನು ಮಾಡಿಸಿದ್ದರು. ಒಂದುವೇಳೆ ಅವರೇನಾದರೂ ಆತ್ಮಹತ್ಯೆ ಮಾಡಿಕೊಂಡಿದ್ದರೆ, ಕುಟುಂಬದವರಿಗೆ ವಿಮೆಯ ಹಣ ಸಿಗುವುದಿಲ್ಲ. ಈ ಕಾರಣಕ್ಕಾಗಿಯೇ ಆತ್ಮಹತ್ಯೆ ಪ್ರಕರಣವನ್ನು ಆತ್ಮಹತ್ಯೆಗೆ ಪ್ರೇರಣೆ ನೀಡಲಾಗಿದೆ ಅಥವಾ ಕೊಲೆ ಎಂದು ಬಿಂಬಿಸಲಾಗುತ್ತಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ. ಇದು ಮಾಧ್ಯಮಗಳು ಹರಡುತ್ತಿರುವ ಸುಳ್ಳು. ಸುಶಾಂತ್‌ ಯಾವುದೇ ಜೀವ ವಿಮೆಯನ್ನು ಹೊಂದಿಲ್ಲ’ ಎಂದು ತಿಳಿಸಿದ್ದಾರೆ.

ಈ ಸುಳ್ಳು ಆರೋಪವು ತೀವ್ರ ಮಾನಹಾನಿಕರವಾಗಿದೆ. ಸುದ್ದಿ ವಾಹಿನಿಗಳು ಇದೇರೀತಿ ಮುಂದುವರಿದರೆ, ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟವರನ್ನು ಒತ್ತಾಯಿಸಲಾಗುವುದು’ ಎಂದೂ ಹೇಳಿದ್ದಾರೆ. ಜೊತೆಗೆ ಅನುಮತಿ ಪಡೆಯದೆ ನಟನಿಗೆ ಸಂಬಂಧಿಸಿದಂತೆ ಯಾವುದೇ ಪುಸ್ತಕ, ಸಿನಿಮಾ ಅಥವಾ‌ ಧಾರಾವಾಹಿ ನಿರ್ಮಿಸುವಂತಿಲ್ಲ ಎಂಬ ನಿರ್ಧಾರವನ್ನು ಸುಶಾಂತ್ ತಂದೆ ತೆಗೆದುಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!