ಕಂಗನಾ ರಣಾವತ್, ಮುಖ್ಯಮಂತ್ರಿ ಉದ್ಧವ್ ಠಾಕ್ರೆ 
ಬಾಲಿವುಡ್

ಉದ್ಧವ್ ಠಾಕ್ರೆ ವಿರುದ್ಧ ಅವಹೇಳನಕಾರಿ ಹೇಳಿಕೆ: ಕಂಗಾನಾ ವಿರುದ್ಧ ದೂರು ಕೇಸ್ ದಾಖಲು

ಬಾಲಿವುಡ್ ನಟಿ ಕಂಗನಾ ರಣಾವತ್ ಅವರ ಬಾಂದ್ರಾದಲ್ಲಿರುವ ಮನೆಯ ಕೆಲ ಭಾಗಗಳನ್ನು ಬೃಹನ್ ಮುಂಬೈ ಪಾಲಿಕೆ ಅಧಿಕಾರಿಗಳು ಧ್ವಂಸಗೊಳಿಸಿದ ನಂತರ  ಶಿವಸೇನೆ ಹಾಗೂ ಕಂಗನಾ ನಡುವಿನ ಮಾತಿನ ಸಮರ ತೀವ್ರಗೊಂಡಿದೆ.

ಮುಂಬೈ: ಬಾಲಿವುಡ್ ನಟಿ ಕಂಗನಾ ರಣಾವತ್ ಅವರ ಬಾಂದ್ರಾದಲ್ಲಿರುವ ಮನೆಯ ಕೆಲ ಭಾಗಗಳನ್ನು ಬೃಹನ್ ಮುಂಬೈ ಪಾಲಿಕೆ ಅಧಿಕಾರಿಗಳು ಧ್ವಂಸಗೊಳಿಸಿದ ನಂತರ  ಶಿವಸೇನೆ ಹಾಗೂ ಕಂಗನಾ ರಣವಾತ್  ನಡುವಿನ ಮಾತಿನ ಸಮರ ತೀವ್ರಗೊಂಡಿದೆ.

ಗುರುವಾರ ಶಿವಸೇನೆ ಹಾಗೂ ಬೃಹನ್  ಮುಂಬೈ ಪಾಲಿಕೆ ವಿರುದ್ಧ ಕಿಡಿಕಾರಿರುವ ಕಂಗನಾ ರಣವಾತ್, ಅಧಿಕಾರಕ್ಕಾಗಿ ತತ್ವ ಸಿದ್ದಾಂತಗಳನ್ನು ಮಾರಿಕೊಳ್ಳಲು ಸಿದ್ಧವಾಗಿರುವ ಶಿವಸೇನೆ 'ಸೋನಿಯಾ ಸೇನೆ'ಯಾಗಿದ್ದೆ ಎಂದು ಟೀಕಿಸಿದ್ದಾರೆ.

ಅಲ್ಲದೇ, ಬೃಹನ್ ಮುಂಬೈ ಪಾಲಿಕೆ ಅಧಿಕಾರಿಗಳನ್ನು ಗೂಂಡಾಗಳು ಎಂದು ಕರೆದಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಅವಹೇನಕಾರಿ ಹೇಳಿಕೆ ಹಿನ್ನೆಲೆಯಲ್ಲಿ ಐಪಿಸಿ ಸೆಕ್ಷನ್ 500 (ಮಾನನಷ್ಟ) ಅಡಿಯಲ್ಲಿ ವಿಕ್ರೋಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಮಧ್ಯೆ ಕಂಗನಾ ರಣವಾತ್ ಅವರ ಬಾಂದ್ರಾದಲ್ಲಿರುವ ನಿವಾಸದ ಸುತ್ತಮುತ್ತ ಬಿಗಿ ಭದ್ರತೆ ಕಲ್ಪಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT