ಅಂಕಿತಾ ಲೋಖಂಡೆ 
ಬಾಲಿವುಡ್

ಸುಶಾಂತ್ ಸಾವು ಕೊಲೆ ಎಂದು ಹೇಳಿಲ್ಲ, ಇದಕ್ಕೆ ಯಾರು ಹೊಣೆ ಎಂದೂ ಹೇಳಿಲ್ಲ: ನಿಲುವು ಸ್ಪಷ್ಟಪಡಿಸಿದ ಅಂಕಿತಾ

ನಾನು ನ್ಯಾಯ ಕೇಳಿದ್ದೇನೆ ಹೊರತು ಸುಶಾಂತ್ ಸಾವು ಕೊಲೆ ಎಂದು ಯಾವತ್ತೂ ಹೇಳಿಲ್ಲ, ಹಾಗೂ ಇದಕ್ಕೆ ಯಾರೂ ಜವಾಬ್ದಾರಿಯೂ ಎಂದೂ ನಾನು ಹೇಳಿಲ್ಲ ಎಂದು ನಟಿ ಅಂಕಿತಾ ಲೋಖಂಡೆ ತಮ್ಮ ನಿಲುವನ್ನು ಸ್ಪಷ್ಟ ಪಡಿಸಿದ್ದಾರೆ.

ಮುಂಬಯಿ: ನಾನು ನ್ಯಾಯ ಕೇಳಿದ್ದೇನೆ ಹೊರತು ಸುಶಾಂತ್ ಸಾವು ಕೊಲೆ ಎಂದು ಯಾವತ್ತೂ ಹೇಳಿಲ್ಲ, ಹಾಗೂ ಇದಕ್ಕೆ ಯಾರೂ ಜವಾಬ್ದಾರಿಯೂ ಎಂದೂ ನಾನು ಹೇಳಿಲ್ಲ ಎಂದು ನಟಿ ಅಂಕಿತಾ ಲೋಖಂಡೆ ತಮ್ಮ ನಿಲುವನ್ನು ಸ್ಪಷ್ಟ ಪಡಿಸಿದ್ದಾರೆ.

ಸುಶಾಂತ್ ಸಾವಿಗೆ  ಮತ್ತು ಅವರ ಕುಟುಂಬದವರಿಗೆ ನ್ಯಾಯ ಸಿಗಬೇಕೆಂಬುದೇ ನನ್ನ ಉದ್ದೇಶವಾಗಿತ್ತು ಎಂದು ಸ್ಪಷ್ಟಪಡಿಸಿದ್ದಾರೆ. ಜೂನ್ ತಿಂಗಳಿನಲ್ಲಿ 34 ವರ್ಷದ ಸುಶಾಂತ್ ಸಿಂಗ್ ರಜಪೂತ್ ಬಾಂದ್ರಾದ ತಮ್ಮ ಅಪಾರ್ಟ್ ಮೆಂಟ್ ನಲ್ಲಿ ಸಾವನ್ನಪ್ಪಿದ್ದರು. ಅದಾದ ನಂತರ ಸುಶಾಂತ್ ಸಾವಿನ ಸಂಬಂಧ ಹಲವು ಚರ್ಚೆಗಳು ನಡೆದಿದ್ದವು.

ಅಂಕಿತಾ ಲೋಖಂಡೆ ಮತ್ತು ಸುಶಾಂತ್ ಸಿಂಗ್ ಪವಿತ್ರ ರಿಶ್ತಾ ಎಂಬ ಧಾರಾವಾಹಿಯಲ್ಲಿ ನಟಿಸಿದ್ದರು.2016ರ ವರೆಗೂ ಇಬ್ಬರು ಡೇಟಿಂಗ್ ನಡೆಸುತ್ತಿದ್ದರು. ಆದರೆ ಸುಶಾಂತ್ ಸಾವಿನ ನಂತರ ಆತನ ಗೆಳತಿ ರಿಯಾ ಚಕ್ರವರ್ತಿಯನ್ನು ಎನ್ ಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. 

ರಿಯಾ ಚಕ್ರವರ್ತಿ ಬಂಧನಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಅಂಕಿತಾ ಲೋಖಂಡೆ, ಅವಕಾಶದಿಂದ ಯಾವುದು ಆಗುವುದಿಲ್ಲ, ಇದು ಅವರ ಹಮೆ ಬರಹ, ನಿನ್ನ ಕೆಲಸಗಳಿಂದ ನಿನ್ನ ಹಣೆಬರಹ ನಿರ್ಧಾರವಾಗುತ್ತದೆ ಅದುವೇ ಕರ್ಮ ಎಂದು ಟ್ವೀಟ್ ಮಾಡಿದ್ದರು. ಇದು ಕೊಲೆ ಎಂದು ನಾನು ಯಾವತ್ತೂ ನಾನು ಹೇಳಿಲ್ಲ, ಮತ್ತೂ ಇದಕ್ಕೆ ಯಾರೂ ಹೊಣೆ ಎಂದು ಕೂಡ ನಾನು ಎಲ್ಲಿಯೂ ಹೇಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT