ಎ ಆರ್ ರೆಹಮಾನ್ 
ಬಾಲಿವುಡ್

ತೆರಿಗೆ ವಂಚನೆ ಆರೋಪ: ಸಂಗೀತ ಮಾಂತ್ರಿಕ ಎ ಆರ್ ರೆಹಮಾನ್‌ಗೆ ಮದ್ರಾಸ್ ಹೈಕೋರ್ಟ್ ನೋಟಿಸ್

ಆದಾಯ ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿ, ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ಸಂಯೋಜಕ ಎ.ಆರ್. ರೆಹಮಾನ್ ಅವರಿಗೆ ಮದ್ರಾಸ್ ಹೈಕೋರ್ಟ್ ನೋಟಿಸ್ ನೀಡಿದೆ.

ಚೆನ್ನೈ: ಆದಾಯ ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿ, ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ಸಂಯೋಜಕ ಎ.ಆರ್. ರೆಹಮಾನ್ ಅವರಿಗೆ ಮದ್ರಾಸ್ ಹೈಕೋರ್ಟ್ ನೋಟಿಸ್ ನೀಡಿದೆ.

ಐಟಿ ಇಲಾಖೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಟಿ ಎಸ್ ಶಿವಜ್ಞಾನಂ ಮತ್ತು ವಿ ಭವಾನಿ ಸುಬ್ಬರಾಯನ್ ನೇತೃತ್ವದ ವಿಭಾಗೀಯ ಪೀಠ ರೆಹಮಾನ್‌ಗೆ ನೋಟಿಸ್ ನೀಡಿದೆ. ಮೇಲ್ಮನವಿಯಲ್ಲಿ, ರಹಮಾನ್ ತಮ್ಮ ಚಾರಿಟಬಲ್ ಟ್ರಸ್ಟ್ ಗೆ ಅಕ್ರಮವಾಗಿ 3.47 ಕೋಟಿ ರೂ.ವರ್ಗಾಯಿಸುವ  ಮೂಲಕ ತೆರಿಗೆ ವಂಚಿಸಿದ್ದಾರೆ ಎಂದು ಐಟಿ ಇಲಾಖೆ ತಿಳಿಸಿದೆ.

ರೆಹಮಾನ್ ಅವರ 2011-12ನೇ ಸಾಲಿನ ತೆರಿಗೆ ಸಲ್ಲಿಕೆಯಲ್ಲಿ ಐಟಿ ಇಲಾಖೆ ವ್ಯತ್ಯಾಸವನ್ನು ಗುರುತಿಸಿದೆ. ಬೃಹತ್ ಮೊತ್ತವನ್ನು ಗಾಯಕ-ಸಂಯೋಜಕರಿಂದ ಸಂಬಳವಾಗಿ ಸ್ವೀಕರಿಸಲಾಗಿದೆ. ಇಂಗ್ಲೆಂಡ್ ಮೂಲದ ಲಿಬ್ರಾ ಮೊಬೈಲ್ಸ್ ಟೆಲಿಕಾಂಗಾಗಿ ವಿಶೇಷ ರಿಂಗ್‌ ಟೋನ್‌ಗಳನ್ನು ರಚಿಸುವುದಕ್ಕಾಗಿ ಕಂಪನಿ  2011ರಲ್ಲಿ 3 ವರ್ಷಗಳ ಒಪ್ಪಂದ ಮಾಡಿಕೊಂಡಿತ್ತು. ಒಪ್ಪಂದದ ಪ್ರಕಾರ ಎ.ಆರ್.ರಹಮಾನ್‌ರವರು ಟೆಲಿಕಾಂ ಕಂಪೆನಿಗೆ ತನ್ನ ಸಂಭಾವನೆಯನ್ನು ನೇರವಾಗಿ ಚಾರಿಟೇಬಲ್ ಫೌಂಡೇಶನ್‌ಗೆ ಪಾವತಿಸುವಂತೆ ಸೂಚಿಸಿದ್ದಾರೆ.

ತೆರಿಗೆಗೆ ಒಳಪಡುವ ಆದಾಯವನ್ನು ರೆಹಮಾನ್ ಸ್ವೀಕರಿಸಬೇಕು. ತೆರಿಗೆ ಕಡಿತವಾದ ಬಳಿಕ ಅದನ್ನು ಟ್ರಸ್ಟ್‌ಗೆ ವರ್ಗಾಯಿಸಬೇಕು. ಆದರೆ ಚಾರಿಟೇಬಲ್ ಟ್ರಸ್ಟ್‌ಗೆ ಆದಾಯ ತೆರಿಗೆ ಕಾಯ್ದೆಯಡಿ ವಿನಾಯಿತಿ ನೀಡಲಾಗಿರುವುದರಿಂದ ಅದನ್ನು ಟ್ರಸ್ಟ್ ಮೂಲಕ ರವಾನಿಸಲಾಗುವುದಿಲ್ಲ ಎಂದು ಐಟಿ ವಕೀಲರು  ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT