ಕಂಗನಾ ರಾನಾವತ್ 
ಬಾಲಿವುಡ್

'ನಾನು ಮುಂಬೈ ತೊರೆಯುತ್ತಿದ್ದೇನೆ, ಪಿಒಕೆ ಹೋಲಿಕೆ ಸತ್ಯವಾಗಿದೆ':ಕಂಗನಾ ರಾನಾವತ್ 

ಬಾಲಿವುಡ್ ನಟಿ ಕಂಗನಾ ರಾನಾವತ್ ಮುಂಬೈ ತೊರೆಯುವುದಾಗಿ ಪ್ರಕಟಿಸಿದ್ದಾರೆ. ಕಳೆದ ಸೆಪ್ಟೆಂಬರ್ 9ರಂದು ಮಹಾರಾಷ್ಟ್ರ ಸರ್ಕಾರದೊಂದಿಗೆ ಅದರಲ್ಲೂ ಶಿವಸೇನೆಯೊಂದಿಗೆ ವಿವಾದದ ಮಧ್ಯೆ ಕೇಂದ್ರ ಸರ್ಕಾರ ನೀಡಿದ್ದ ವೈ+ ಭದ್ರತೆ ನಡುವೆ ನಗರಕ್ಕೆ ಬಂದಿದ್ದರು.

ಮುಂಬೈ: ಬಾಲಿವುಡ್ ನಟಿ ಕಂಗನಾ ರಾನಾವತ್ ಮುಂಬೈ ತೊರೆಯುವುದಾಗಿ ಪ್ರಕಟಿಸಿದ್ದಾರೆ. ಕಳೆದ ಸೆಪ್ಟೆಂಬರ್ 9ರಂದು ಮಹಾರಾಷ್ಟ್ರ ಸರ್ಕಾರದೊಂದಿಗೆ ಅದರಲ್ಲೂ ಶಿವಸೇನೆಯೊಂದಿಗೆ ವಿವಾದದ ಮಧ್ಯೆ ಕೇಂದ್ರ ಸರ್ಕಾರ ನೀಡಿದ್ದ ವೈ+ ಭದ್ರತೆ ನಡುವೆ ನಗರಕ್ಕೆ ಬಂದಿದ್ದರು.

ಮುಂಬೈ ತೊರೆಯುವ ತಮ್ಮ ನಿರ್ಧಾರವನ್ನು ಟ್ವೀಟ್ ಮೂಲಕ ಪ್ರಕಟಿಸಿರುವ ಅವರು, ಭಾರವಾದ ಹೃದಯಗಳಿಂದ ಮುಂಬೈ ತೊರೆಯುತ್ತಿದ್ದೇನೆ. ಇಷ್ಟು ದಿನ ನನ್ನ ಮೇಲೆ ನಿರಂತರ ದಾಳಿ ಮಾಡುತ್ತಾ, ಭಯೋತ್ಪಾದಕರಂತೆ ನನ್ನ ಮೇಲೆ ಬೆದರಿಕೆ ಹಾಕಿದ್ದು, ನಿಂದನೆ ಮಾಡಿದ್ದು, ನನ್ನ ಕಚೇರಿಯನ್ನು ಧ್ವಂಸ ಮಾಡಿದ್ದು, ನನ್ನ ಸುತ್ತ ಭದ್ರತೆ ಇರುವಂತೆ ಮಾಡಿದ್ದು ಇವುಗಳೆಲ್ಲವನ್ನೂ ನೋಡಿದಾಗ ಮುಂಬೈ ಪಾಕ್ ಆಕ್ರಮಿತ ಕಾಶ್ಮೀರದಂತೆ ಭಾಸವಾಗುತ್ತಿದೆ ಎಂದು ನಾನು ಹೇಳಿದ ಮಾತು ಸತ್ಯವೆನ್ನುವುದು ಮತ್ತಷ್ಟು ಸಾಬೀತಾಗುತ್ತಿದೆ, ನನ್ನ ಸಾದೃಶ್ಯ ಸರಿಯಾಗಿದೆ ಎನಿಸುತ್ತಿದೆ ಎಂದು ಬರೆದುಕೊಂಡಿದ್ದಾರೆ.

ನಿರ್ಮಾಣದ ವೇಳೆ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಬೃಹನ್ ಮುಂಬೈ ಮಹಾನಗರ ಪಾಲಿಕೆ ಕಂಗನಾ ರಾನಾವತ್ ಅವರ ಕಚೇರಿಯ ಒಂದು ಭಾಗವನ್ನು ಕಳೆದ 9ರಂದು ಧ್ವಂಸಗೊಳಿಸಿತ್ತು. ಇದು ಶಿವಸೇನೆಯ ರಾಜಕೀಯ ಪಿತೂರಿ ಕೃತ್ಯ ಎಂದು ಕಂಗನಾ ಆರೋಪಿಸಿದ್ದರು. ಇದಕ್ಕೂ ಮುನ್ನ ಮುಂಬೈಯನ್ನು ಪಾಕ್ ಆಕ್ರಮಿತ ಕಾಶ್ಮೀರ ಎಂದು ಹೋಲಿಸಿ ಕಂಗನಾ ಮತ್ತು ಶಿವಸೇನಾ ನಾಯಕರ ಮಧ್ಯೆ ಮಾತಿನ ಚಕಮಕಿ ನಡೆದಿತ್ತು. 

ಹಿಂದಿಯಲ್ಲಿ ಮತ್ತೊಂದು ಟ್ವೀಟ್ ನಲ್ಲಿ ಕಂಗನಾ, ನಮ್ಮನ್ನು ಕಾಪಾಡುವವರೇ ಕೊಲ್ಲುವವರಾದಾಗ ಅವರು ಪ್ರಜಾಪ್ರಭುತ್ವಕ್ಕೆ ನೋವುಂಟುಮಾಡುವವರು, ಧಕ್ಕೆ ತರುವವರು ಆಗಿರುತ್ತಾರೆ. ನಾನು ದುರ್ಬಳಲು ಎಂದು ಭಾವಿಸಿಕೊಂಡು ದೊಡ್ಡ ತಪ್ಪು ಮಾಡುತ್ತಿದ್ದಾರೆ. ನನ್ನನ್ನು ಹೆದರಿಸಲು ಪ್ರಯತ್ನಿಸುವ ಮೂಲಕ, ನನ್ನನ್ನು ಕೀಳಾಗಿ ನೋಡುವ ಮೂಲಕ, ಅವರು ತಮ್ಮ ನಿಜವಾದ ರೂಪವನ್ನು, ಬುದ್ದಿಯನ್ನು ತೋರಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ನಿನ್ನೆ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರನ್ನು ಭೇಟಿ ಮಾಡಿದ್ದ ನಟಿ ಕಂಗನಾ ತಮಗೆ ಸರ್ಕಾರ ಮುಂಬೈಯಲ್ಲಿ ಉಳಿದುಕೊಳ್ಳಲು ತೊಂದರೆ, ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

ಅಜಿತ್ ಪವಾರ್ ವಿಮಾನ ಪತನ ವಿಧ್ವಂಸಕ ಕೃತ್ಯವೋ ಅಥವಾ ನಿರ್ಲಕ್ಷ್ಯವೋ? ಸಿಐಡಿ ಹೇಳಿದ್ದೇನು?

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

SCROLL FOR NEXT