ಡ್ಯಾನ್ಸರ್ ಕಿಶೋರ್ ಶೆಟ್ಟಿ 
ಬಾಲಿವುಡ್

ಡ್ರಗ್ಸ್ ಪ್ರಕರಣ: ಡ್ಯಾನ್ಸರ್, ಬಾಲಿವುಡ್ ನಟ ಕಿಶೋರ್ ಶೆಟ್ಟಿಗೆ 7 ದಿನಗಳ ಪೊಲೀಸ್ ಕಸ್ಟಡಿ

ಮಾದಕವಸ್ತು ಕಳ್ಳಸಾಗಣೆ ಮತ್ತು ಸೇವನೆ ಆರೋಪದಡಿ ಶನಿವಾರ ಬಂಧಿಸಲ್ಪಟ್ಟಿದ್ದ ಡ್ಯಾನ್ಸರ್-ಕಮ್-ನೃತ್ಯ ಸಂಯೋಜಕ ಕಿಶೋರ್ ಅಮನ್ ಶೆಟ್ಟಿ  (30) ಮತ್ತು ಅಕಿಲ್ ನೌಶೀಲ್ (28) ಅವರನ್ನು ಏಳು ದಿನಗಳ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಮಂಗಳೂರು: ಮಾದಕವಸ್ತು ಕಳ್ಳಸಾಗಣೆ ಮತ್ತು ಸೇವನೆ ಆರೋಪದಡಿ ಶನಿವಾರ ಬಂಧಿಸಲ್ಪಟ್ಟಿದ್ದ ಡ್ಯಾನ್ಸರ್-ಕಮ್-ನೃತ್ಯ ಸಂಯೋಜಕ ಕಿಶೋರ್ ಅಮನ್ ಶೆಟ್ಟಿ  (30) ಮತ್ತು ಅಕಿಲ್ ನೌಶೀಲ್ (28) ಅವರನ್ನು ಏಳು ದಿನಗಳ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಅವರನ್ನು ಭಾನುವಾರ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ ನಂತರ  ಪೊಲೀಸರು ವಶಕ್ಕೆ ತೆಗೆದುಕೊಂಡರು. ಇಬ್ಬರನ್ನೂ ಭಾನುವಾರ ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಸೋಮವಾರ ಫಲಿತಾಂಶ ನಿರೀಕ್ಷಿಸಲಾಗಿದೆ. ಫಲಿತಾಂಶವನ್ನು ಪಡೆಯುವವರೆಗೆ, ಪೊಲೀಸ್ ಸಿಬ್ಬಂದಿಗೆ ಪೂರ್ಣ ಪ್ರಮಾಣದಲ್ಲಿ ವಿಚಾರಣೆಯನ್ನು ಪುನರಾರಂಭಿಸಲು ಸಾಧ್ಯವಾಗುವುದಿಲ್ಲ. ಫಲಿತಾಂಶವು  ನೆಗೆಟಿವ್ ಆಗಿದ್ದರೆ ಅವರು ತಮ್ಮ ವಿಚಾರಣೆಯನ್ನು ಪ್ರಾರಂಭಿಸಬಹುದು ಮತ್ತು ಅವರು ಪಾಸಿಟಿವ್ ವರದಿ ಪಡೆದರೆ ಸರ್ಕಾರದ ಮಾನದಂಡಗಳ ಪ್ರಕಾರ ಚಿಕಿತ್ಸೆಯನ್ನು ಒದಗಿಸಬೇಕಾಗುತ್ತದೆ.

ಪ್ರಾಥಮಿಕ ವಿಚಾರಣೆಯ ಸಮಯದಲ್ಲಿ, ಕಿಶೋರ್ ಸ್ವತಃ ಮಾದಕ ವ್ಯಸನಿಯಾಗಿದ್ದರೂ, ಅವರು ಇತ್ತೀಚೆಗೆ ಮಾದಕವಸ್ತು ವ್ಯವಹಾರವನ್ನು ಪ್ರಾರಂಭಿಸಿದ್ದಾಗಿ ಒಪ್ಪಿಕೊಂಡಿದ್ದಾರೆ. ಅವರು  ಡ್ಯಾನ್ಸರ್ ಆಗಿ ಮಾತ್ರವಲ್ಲ ಬಾಲಿವಿಡ್ ಚಿತ್ರಗಳಲ್ಲಿ ನಟರಾಗಿ ಸಹ ಗುರುತಿಸಿಕೊಂಡಿದ್ದಾರೆ. 

ಕೆಲವು ತಿಂಗಳ ಹಿಂದೆ ನಗರಕ್ಕೆ ಮರಳಿದ್ದ ಕಿಶೋರ್  ಅವರ ಕುಟುಂಬವು ಕುಳಾಯಿಗುಡ್ಡೆಯ  ಸಣ್ಣ ಹೆಂಚುಗಳ ಮನೆಯಲ್ಲಿ ವಾಸಿಸುತ್ತಿದೆ. ಕೊರೋನಾವೈಅರಸ್ -ಪ್ರೇರಿತ ಲಾಕ್‌ಡೌನ್ ನಂತರ ಕಿಶೋರ್ ತೀವ್ರ ಆರ್ಥಿಕ ಸಮಸ್ಯೆಯನ್ನು ಎದುರಿಸಿದರು ಮತ್ತು ಆದ್ದರಿಂದ  ಡ್ರಗ್ಸ್ ವ್ಯಾಪಾರದಲ್ಲಿ ತೊಡಗಿದ್ದಾಗಿ ಅವರು ಹೇಳಿದ್ದಾರೆ. ತಾನು  ಮುಂಬೈಯಲ್ಲಿ ಬೀಡುಬಿಟ್ಟಿದ್ದ ತನ್ನ ಸ್ನೇಹಿತರ ಗುಂಪಿನ ಮೂಲಕ ಮುಂಬೈಯಿಂದ ಡ್ರಗ್ಸ್ ತರಿಸಿಕೊಳ್ಳುತ್ತಿದ್ದದ್ದಾಗಿ ಆತ ಒಪ್ಪಿಕೊಂಡಿದ್ದಾನೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!