ರಾಜ್ ಕುಂದ್ರಾ-ಶಿಲ್ಪಾ ಶೆಟ್ಟಿ 
ಬಾಲಿವುಡ್

ಅಶ್ಲೀಲ ವಿಡಿಯೋ ಪ್ರಕರಣ: ದಯವಿಟ್ಟು ನಮ್ಮ ಖಾಸಗಿತನವನ್ನು ಗೌರವಿಸಿ; ಶಿಲ್ಪಾ ಶೆಟ್ಟಿ ಮನವಿ

ಉದ್ಯಮಿ ರಾಜ್ ಕುಂದ್ರಾ ಅಶ್ಲೀಲ ವಿಡಿಯೋ ನಿರ್ಮಾಣ ಮತ್ತು ಪ್ರಸರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಬಹಿರಂಗ ಹೇಳಿಕೆ ನೀಡಿರುವ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರು, ತಾಯಿಯಾಗಿ ಕೇಳಿಕೊಳ್ಳುತ್ತಿದ್ದೇನೆ ದಯವಿಟ್ಟು ನಮ್ಮ ಖಾಸಗಿತನವನ್ನು ಗೌರವಿಸಿ ಎಂದು ಮನವಿ ಮಾಡಿದ್ದಾರೆ. 

ಮುಂಬೈ: ಉದ್ಯಮಿ ರಾಜ್ ಕುಂದ್ರಾ ಅಶ್ಲೀಲ ವಿಡಿಯೋ ನಿರ್ಮಾಣ ಮತ್ತು ಪ್ರಸರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಬಹಿರಂಗ ಹೇಳಿಕೆ ನೀಡಿರುವ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರು, ತಾಯಿಯಾಗಿ ಕೇಳಿಕೊಳ್ಳುತ್ತಿದ್ದೇನೆ ದಯವಿಟ್ಟು ನಮ್ಮ ಖಾಸಗಿತನವನ್ನು ಗೌರವಿಸಿ ಎಂದು ಮನವಿ ಮಾಡಿದ್ದಾರೆ.  

ಅಶ್ಲೀಲ ವಿಡಿಯೋ ನಿರ್ಮಾಣ ಮತ್ತು ಪ್ರಸರಣ ಪ್ರಕರಣ ಸಂಬಂಧ ಜುಲೈ 19ರಂದು ಮುಂಬೈ ಅಪರಾಧ ವಿಭಾಗ ಉದ್ಯಮಿ ರಾಜ್ ಕುಂದ್ರಾರನ್ನು ಬಂಧಿಸಿತ್ತು. ಅಶ್ಲೀಲ ಚಿತ್ರಗಳ ಸೃಷ್ಟಿ ಮತ್ತು ಕೆಲವು ಆ್ಯಪ್‌ಗಳ ಮೂಲಕ ಅವುಗಳ ಪ್ರಸರಣ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಲಾಗಿದೆ. 

ಇನ್ನು ರಾಜ್ ಕುಂದ್ರಾ ವಿಚಾರವಾಗಿ ದಿನಕ್ಕೊಂದು ಮಾಧ್ಯಮಗಳಲ್ಲಿ ವರದಿ ಪ್ರಸಾರವಾಗುತ್ತಿದೆ. ಅಲ್ಲದೆ ಸಾಮಾಜಿಕ ಜಾಲತಾಣದಲ್ಲಿ ನಮ್ಮ ಕುಟುಂಬವನ್ನು ಟ್ರೋಲ್ ಮಾಡಲಾಗುತ್ತಿದೆ. ಇದರಿಂದ ಮನನೊಂದು ಮೊದಲ ಬಾರಿಗೆ ಬಹಿರಂಗವಾಗಿ ಹೇಳಿಕೆ ನೀಡಿರುವ ಶಿಲ್ಪಾ ಶೆಟ್ಟಿ ಮುಂಬೈ ಪೊಲೀಸರು ಮತ್ತು ಭಾರತೀಯ ನ್ಯಾಯಾಂಗದ ಮೇಲೆ ಸಂಪೂರ್ಣ ನಂಬಿಕೆ ಇದ್ದು, ನಿಪಕ್ಷಪಾತ ತನಿಖೆ ನಡೆಸಿ ನಮಗೆ ನ್ಯಾಯ ಒದಗಿಸುತ್ತಾರೆ ಎಂದು ಇನ್ ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ. 

ಈ ವಿಚಾರವಾಗಿ ಕಳೆದ ಕೆಲವು ದಿನಗಳು ನನಗೆ ಸವಾಲುಗಳು ಎದುರಾಗಿವೆ. ಸಾಕಷ್ಟು ವದಂತಿಗಳು ಮತ್ತು ಆರೋಪಗಳು ಕೇಳಿ ಬಂದಿವೆ. ನನ್ನ ಮೇಲೆ ಸುಳ್ಳು ಆರೋಪಗಳನ್ನು ಮಾಡುವುದನ್ನು ನಿಲ್ಲಿಸಿ, ನನ್ನ ಪರವಾಗಿ  ಸುಳ್ಳು ಹೇಳಿಕೆಗಳನ್ನು ನೀಡಬೇಡಿ ಎಂದು ವಿನಂತಿಸಿಕೊಂಡಿದ್ದಾರೆ. 

ನಾನು ಹೆಮ್ಮೆಯ ಕಾನೂನು ಪಾಲಿಸುವ ಭಾರತೀಯ ಪ್ರಜೆ. ಜೊತೆಗೆ ಕಳೆದ 29 ವರ್ಷಗಳಿಂದ ಕಠಿಣ ಪರಿಶ್ರಮದ ವೃತ್ತಿಪರತೆಯನ್ನು ಕಾಪಾಡಿಕೊಂಡು ಬರುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT