ಅಲಿಯಾ ಭಟ್ 
ಬಾಲಿವುಡ್

ಬಾಲಿವುಡ್ ನಟಿ ಆಲಿಯಾ ಭಟ್ ವಿರುದ್ಧ ಎಫ್ ಐ ಆರ್!

ಬೃಹನ್‌ ಮುಂಬೈ ಮುನ್ಸಿಪಲ್ ಕಾರ್ಪೊರೇಶನ್ ನಿಯಮಗಳ ಪ್ರಕಾರ, ಕೋವಿಡ್‌ ಸೋಂಕು ಬಂದರೂ ಬರದಿದ್ದರೂ, ಪಾಸಿಟಿವ್‌ ಬಂದ ವ್ಯಕ್ತಿಗಳೊಂದಿಗೆ ಸಂಪರ್ಕಕ್ಕೆ ಬರುವ ಪ್ರತಿಯೊಬ್ಬರೂ 14-ದಿನಗಳು ಕ್ವಾರಂಟೈನ್‌ ನಲ್ಲಿರಬೇಕು.

ಮುಂಬಯಿ: ಬಾಲಿವುಡ್‌ನ ಅತ್ಯಂತ ಜನಪ್ರಿಯ ನಟಿಯರ ಪೈಕಿ ಆಲಿಯಾ ಭಟ್ ಕೂಡಾ ಒಬ್ಬರು. ತಮ್ಮ ಸೌಂದರ್ಯದ ಜೊತೆಗೆ ಅಭಿನಯದಿಂದಲೂ ದೇಶಾದ್ಯಂತ ಕೋಟ್ಯಾಂತರ ಅಭಿಮಾನಿಗಳನ್ನು ಹೊಂದಿರುವ ಈ ಬೆಡಗಿಯ ವಿರುದ್ದ ಮುಂಬೈ ನಲ್ಲಿ ಹೊಸದಾಗಿ ಎಫ್‌ಐಆರ್ ದಾಖಲಾಗಿದೆ.

ಬೃಹನ್‌ ಮುಂಬೈ ಮುನ್ಸಿಪಲ್ ಕಾರ್ಪೊರೇಶನ್ ನಿಯಮಗಳ ಪ್ರಕಾರ, ಕೋವಿಡ್‌ ಸೋಂಕು ಬಂದರೂ ಬರದಿದ್ದರೂ, ಪಾಸಿಟಿವ್‌ ಬಂದ ವ್ಯಕ್ತಿಗಳೊಂದಿಗೆ ಸಂಪರ್ಕಕ್ಕೆ ಬರುವ ಪ್ರತಿಯೊಬ್ಬರೂ 14-ದಿನಗಳು ಕ್ವಾರಂಟೈನ್‌ ನಲ್ಲಿರಬೇಕು. ಆದರೆ ಈ ನಿಯಮಗಳನ್ನು ಉಲ್ಲಂಘಿಸಿ, ದೆಹಲಿಯಲ್ಲಿ ತಮ್ಮ ಹೊಸ ಚಿತ್ರ ‘ಬ್ರಹ್ಮಾಸ್ತ್ರ’ ಮೋಷನ್ ಪೋಸ್ಟರ್ ಬಿಡುಗಡೆಗಾಗಿ ಅಲಿಯಾ ಭಟ್ ರಣಬೀರ್ ಕಪೂರ್ ಜೊತೆ ಹೋಗಿದ್ದರು. ಅಲ್ಲದೆ ಅಲ್ಲಿ ಸಾಕಷ್ಟು ಜನರನ್ನು ಭೇಟಿಯಾಗಿದ್ದರು ಇದರೊಂದಿಗೆ ಅಲಿಯಾ ಭಟ್‌ ವಿರುದ್ಧ ಸಾಂಕ್ರಾಮಿಕ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಲು ಬಿಎಂಸಿ ಸಿದ್ಧತೆ ನಡೆಸಿದೆ.

ಈ ಕುರಿತು ಬಿ ಎಂ ಸಿ ಸಾರ್ವಜನಿಕ ಆರೋಗ್ಯ ಸಮಿತಿ ಅಧ್ಯಕ್ಷ ರಾಜು ಪಟೇಲ್, “ಮನೆಯಲ್ಲಿ ಐಸೋಲೇಶನ್ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆಲಿಯಾ ಭಟ್ ವಿರುದ್ಧ ಪ್ರಕರಣ ದಾಖಲಿಸಲು ಡಿ ಎಂಸಿ ಆರೋಗ್ಯ ಇಲಾಖೆಗೆ ಆದೇಶ ನೀಡಿದ್ದೇನೆ. ಅಲಿಯಾ ಭಟ್‌ ಅನೇಕರಿಗೆ ರೋಲ್‌ ಮಾಡೆಲ್‌ ಅಂತಹ ವ್ಯಕ್ತಿಗಳು ಅತ್ಯಂತ ಜವಾಬ್ದಾರಿಯುತವಾಗಿ ವರ್ತಿಸಬೇಕು. ನಿಯಮಗಳು ಎಲ್ಲರಿಗೂ ಸಮಾನ ಎಂದು ಹೇಳಿದ್ದಾರೆ.

ದೆಹಲಿಯಲ್ಲಿರುವ ಆಲಿಯಾ ಭಟ್ ಅವರ ಬಗ್ಗೆ ಮಾಹಿತಿ ಪಡೆಯಲು ಮ್ಯಾನೇಜರ್ ಅನ್ನು ಬುಧವಾರ ಬಿಎಂಸಿ ಸಂಪರ್ಕಿಸಿ, ನಿಯಮಾವಳಿಗಳನ್ನು ಉಲ್ಲಂಘಿಸಿರುವ ಕಾರಣ ಅಲ್ಲಿಯೇ ಇರಬೇಕೆಂದು ಅಲಿಯಾಗೆ ತಾಕೀತು ಮಾಡಲಾಗಿತ್ತು. ಆದರೆ ಅದನ್ನೂ ಮುರಿದ ಈ ಚೆಲುವೆ ನಿನ್ನೆ ರಾತ್ರಿ ಮುಂಬೈಗೆ ವಾಪಸಾಗಿದ್ದಾಳೆ. ಇದರೊಂದಿಗೆ ಭಟ್‌ ವಿರುದ್ಧ ಸಾಂಕ್ರಾಮಿಕ ಕಾಯ್ದೆಯಡಿ ಪ್ರಕರಣ ದಾಖಲಿಸಲು ಬಿಎಂಸಿ ಸಿದ್ಧತೆ ನಡೆಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT