ರಾಜ್ ಕುಂದ್ರಾ 
ಬಾಲಿವುಡ್

ನಾನೆಂದೂ ಅಶ್ಲೀಲ ಚಿತ್ರ ತಯಾರಿಕೆಯಲ್ಲಿ ತೊಡಗಿರಲಿಲ್ಲ: ಮೊದಲ ಬಾರಿಗೆ ರಾಜ್ ಕುಂದ್ರಾ ಹೇಳಿಕೆ

ತಾನೆಂದೂ ಅಶ್ಲೀಲ ಚಿತ್ರ ತಯಾರಿಕೆಯಲ್ಲಿ ತೊಡಗಿರಲಿಲ್ಲ ಎಂದು ಉದ್ಯಮಿ ಹಾಗೂ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಹೇಳಿದ್ದಾರೆ.

ಮುಂಬೈ: ತಾನೆಂದೂ ಅಶ್ಲೀಲ ಚಿತ್ರ ತಯಾರಿಕೆಯಲ್ಲಿ ತೊಡಗಿರಲಿಲ್ಲ ಎಂದು ಉದ್ಯಮಿ ಹಾಗೂ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಹೇಳಿದ್ದಾರೆ.

ಈ ವರ್ಷದ ಆರಂಭದಲ್ಲಿ ಭಾರಿ ಸುದ್ದಿಗೆ ಗ್ರಾಸವಾಗಿದ್ದ ಅಶ್ಲೀಲ ಚಿತ್ರ ತಯಾರಿಕಾ ಪ್ರಕರಣದಲ್ಲಿ ಬಂಧಿತರಾಗಿ ನಂತರ ಜಾಮೀನು ಪಡೆದಿದ್ದ ಉದ್ಯಮಿ ರಾಜ್ ಕುಂದ್ರಾ ಇದೇ ಮೊದಲ ಬಾರಿಗೆ ವಿವಾದದ ಕುರಿತು ಹೇಳಿಕೆ ನೀಡಿದ್ದಾರೆ.

ಸೋಮವಾರ ಸೋಶಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್‌ನಲ್ಲಿ ಮಾತನಾಡಿರುವ ರಾಜ್ ಕುಂದ್ರಾ, 'ತಮ್ಮ ಜೀವನದಲ್ಲಿ ತಾನೆಂದೂ ಅಶ್ಲೀಲ ಚಿತ್ರಗಳ ಉತ್ಪಾದನೆ ಮತ್ತು ವಿತರಣೆಯಲ್ಲಿ ಭಾಗಿಯಾಗಿರಲಿಲ್ಲ.  ತಮ್ಮ ವಿರುದ್ಧ ಇಡೀ ಪ್ರಕರಣ ದೊಡ್ಡ ಪಿತೂರಿಯಾಗಿದ್ದು, ಕಾಣದ ಕೈಗಳ ಆಟವಾಡುತ್ತಿವೆ. ಪಿತೂರಿಗೆ ನಾನು ಬಲಿಯಾಗಿದ್ದೇನೆ ಎಂದು ರಾಜ್ ಕುಂದ್ರಾ ಹೇಳಿದ್ದಾರೆ.

ಅಂತೆಯೇ ಮಾಧ್ಯಮಗಳ ಕುರಿತು ಅಸಮಾಧಾನ ಹೊರ ಹಾಕಿದ ರಾಜ್ ಕುಂದ್ರಾ, ಪ್ರಕರಣ ಇನ್ನೂ ವಿಚಾರಣೆಯ ಹಂತದಲ್ಲಿದೆ. ಅದಾಗಲೇ ಮಾಧ್ಯಮಗಳು ನನ್ನನ್ನು ತಪ್ಪಿತಸ್ಥನ ಸ್ಥಾನದಲ್ಲಿ ನಿಲ್ಲಿಸಿವೆ. ಮಾಧ್ಯಮಗಳು ತಮ್ಮ ಟಿಆರ್ ಪಿಗಾಗಿ ನನ್ನ ಖಾಸಗಿ ಜೀವನದ ಮೇಲೆ ದಾಳಿ ಮಾಡಬಾರದು ಎಂದು ಮನವಿ ಮಾಡಿದ್ದಾರೆ. 

ನನ್ನ ಮೌನವನ್ನು ದೌರ್ಬಲ್ಯಕ್ಕಾಗಿ ತಪ್ಪಾಗಿ ಅರ್ಥೈಸಲಾಗುತ್ತಿದೆ. ಸಾಕಷ್ಟು ಊಹಾಪೋಹಗಳು ಸತ್ಯದ ಜಾಗದಲ್ಲಿ ರಾರಾಜಿಸುತ್ತಿವೆ. ಅನೇಕ ತಪ್ಪುದಾರಿಗೆಳೆಯುವ ಮತ್ತು ಬೇಜವಾಬ್ದಾರಿ ಹೇಳಿಕೆಗಳು ಮತ್ತು ಲೇಖನಗಳು ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿವೆ. ಈಗಾಗಲೇ ಮಾಧ್ಯಮಗಳಿಂದ ತಪ್ಪಿತಸ್ಥನೆಂದು ಘೋಷಿಸಲ್ಪಟ್ಟಿದ್ದೇನೆ. ವಿವಿಧ ಹಂತಗಳಲ್ಲಿ ಮಾನವ ಮತ್ತು ಸಾಂವಿಧಾನಿಕ ಹಕ್ಕುಗಳನ್ನು ಉಲ್ಲಂಘಿಸಿ (ನಿರಂತರವಾಗಿ) ನನ್ನ ವಿರುದ್ಧ ಸುದ್ದಿ ಮಾಡುವ ಮೂಲಕ ಬಹಳಷ್ಟು ನೋವು ನೀಡಿದ್ದಾರೆ. ನಾನು ನನ್ನ ಜೀವನದಲ್ಲಿ ಎಂದಿಗೂ ಅಶ್ಲೀಲತೆಯ ಉತ್ಪಾದನೆ ಮತ್ತು ವಿತರಣೆಯಲ್ಲಿ ತೊಡಗಿಸಿಕೊಂಡಿಲ್ಲ. ಇದೊಂದು ನನ್ನ ವಿರುದ್ಧದ ದೊಡ್ಡ ಷಡ್ಯಂತ್ರ ಎಂದಷ್ಟೇ ನಾನು ಹೇಳಬಲ್ಲೆ. ವಿಷಯವು ನ್ಯಾಯಾಲಯದ ಅಧೀನವಾಗಿದೆ ಆದ್ದರಿಂದ ನಾನು ಸ್ಪಷ್ಟಪಡಿಸಲಾರೆ. ಆದರೆ ನಾನು ವಿಚಾರಣೆಯನ್ನು ಎದುರಿಸಲು ಸಿದ್ಧನಿದ್ದೇನೆ ಮತ್ತು ನ್ಯಾಯಾಂಗದಲ್ಲಿ ಸಂಪೂರ್ಣ ನಂಬಿಕೆ ಹೊಂದಿದ್ದೇನೆ, ಅಲ್ಲಿ ಸತ್ಯವು ಮೇಲುಗೈ ಸಾಧಿಸುತ್ತದೆ ಎಂಬ ವಿಶ್ವಾಸ ನನಗಿದೆ ಎಂದು ಹೇಳಿದ್ದಾರೆ.

ಅಂತೆಯೇ  'ಸಾಮಾಜಿಕ ಜಾಲತಾಣಗಳಲ್ಲಿನ ಟ್ರೋಲಿಂಗ್, ನಕಾರಾತ್ಮಕತೆ ಮತ್ತು ದುರ್ಬಲ ಸಾರ್ವಜನಿಕ ಗ್ರಹಿಕೆಗಳಿಂದ ನಾನು ಛಿದ್ರಗೊಂಡಿದ್ದೇನೆ. ಆದರೆ ನಾನು ಅವಮಾನದಿಂದ ನನ್ನ ಮುಖವನ್ನು ಮರೆಮಾಡುವುದಿಲ್ಲ, ನನ್ನ ಆದ್ಯತೆ ಯಾವಾಗಲೂ ನನ್ನ ಕುಟುಂಬವೇ ಆಗಿದೆ. ಈ ಸಮಯದಲ್ಲಿ ಬೇರೆ ಯಾವುದೂ ನನಗೆ ಮುಖ್ಯವಲ್ಲ. ಘನತೆಯಿಂದ ಬದುಕುವುದು ಪ್ರತಿಯೊಬ್ಬ ವ್ಯಕ್ತಿಯ ಅವಿನಾಭಾವ ಹಕ್ಕು ಎಂದು ತಾನು ನಂಬುತ್ತೇನೆ ಮತ್ತು ಅದನ್ನೇ ವಿನಂತಿಸುತ್ತೇನೆ ಎಂದು ಕುಂದ್ರಾ ಹೇಳಿದರು.

ಇನ್ನು ಈ ಹಿಂದೆ ಅಶ್ಲೀಲ ವೀಡಿಯೊಗಳನ್ನು ವಿತರಿಸಿದ ಆರೋಪದಲ್ಲಿ ರಾಜ್ ಕುಂದ್ರಾ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕಳೆದ ವಾರ ಬಂಧನದಿಂದ ರಕ್ಷಣೆ ನೀಡಿತ್ತು.  ಈ ವರ್ಷದ ಜುಲೈನಲ್ಲಿ, ರಾಜ್ ಕುಂದ್ರಾ ಅವರನ್ನು ಮುಂಬೈ ಪೊಲೀಸರು ಮತ್ತೊಂದು ಪ್ರಕರಣದಲ್ಲಿ ಬಂಧಿಸಿದ್ದರು, ಅವರು ಮೊಬೈಲ್ ಆ್ಯಪ್ ಗಳ ಮೂಲಕ ಪೋರ್ನ್ ಚಿತ್ರಗಳನ್ನು ವಿತರಿಸಿದರು ಎಂದು ಆರೋಪಿಸಿದ್ದರು. ಈ ಪ್ರಕರಣದಲ್ಲೂ ಅವರಿಗೆ ಸೆಪ್ಟೆಂಬರ್‌ನಲ್ಲಿ ಜಾಮೀನು ನೀಡಲಾಗಿತ್ತು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel