ಬಾಲಿವುಡ್

ನೀಲಿ ಚಿತ್ರಗಳ ನಿರ್ಮಾಣ ಪ್ರಕರಣ: ಕ್ರೈಮ್ ಬ್ರಾಂಚ್ ಪೊಲೀಸರಿಂದ ಶಿಲ್ಪಾಶೆಟ್ಟಿಗೆ ಇನ್ನೂ ಸಿಕ್ಕಿಲ್ಲ ಕ್ಲೀನ್ ಚಿಟ್!

Nagaraja AB

ಮುಂಬೈ: ಉದ್ಯಮಿ ರಾಜ್ ಕುಂದ್ರಾ ಪ್ರಮುಖ ಆರೋಪಿಯಾಗಿರುವ ನೀಲಿ ಚಿತ್ರಗಳ ನಿರ್ಮಾಣ ಪ್ರಕರಣದಲ್ಲಿ ನಟಿ ಶಿಲ್ಪಾಶೆಟ್ಟಿಗೆ ಇನ್ನೂ ಕ್ಲಿನ್ ಚೀಟ್ ಸಿಕ್ಕಿಲ್ಲ ಎಂದು ಮುಂಬೈ ಕ್ರೈಮ್ ಬ್ರಾಂಚ್ ಪೊಲೀಸರು ಮಂಗಳವಾರ ಹೇಳಿದ್ದಾರೆ.

ಈ ಕೇಸ್ ನಲ್ಲಿ ತೊಡಗಿಸಿಕೊಂಡಿರುವ ಎಲ್ಲಾರ ಖಾತೆಗಳ ವ್ಯವಹಾರ ವಿಚಾರಣೆಗಾಗಿ ವಿಧಿವಿಜ್ಞಾನ ಲೆಕ್ಕ ಪರಿಶೋಧಕರು ನೇಮಕ ಮಾಡಲಾಗಿದೆ ಎಂದು ಅಧಿಕೃತ ಮಾಹಿತಿಗಳು ತಿಳಿಸಿವೆ.

 ಶಿಲ್ಪಾಶೆಟ್ಟಿಗೆ ಇನ್ನೂ ಕ್ಲೀನ್ ಚಿಟ್ ನೀಡಿಲ್ಲ. ಎಲ್ಲಾ ರೀತಿಯ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ. ಈ ಪ್ರಕರಣದಲ್ಲಿ ಎಲ್ಲಾ ಖಾತೆಗಳ ವ್ಯವಹಾರ ಪರಿಶೀಲಿಸಲು ಲೆಕ್ಕ ಪರಿಶೋಧಕರನ್ನು ನೇಮಕ ಮಾಡಲಾಗಿದೆ. ಅಡಿಟ್ ಗೆ ಸ್ವಲ್ಪ ಸಮಯ ಬೇಕಾಗಲಿದೆ. ಅದೊಂದು ಧೀರ್ಘ ಪ್ರಕ್ರಿಯೆಯಾಗಿದೆ. ಆದರೆ, ಆಡಿಟ್ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೂ ಯಾರಿಗೂ ಕ್ಲೀನ್ ಚಿಟ್ ಇಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಸಾಕ್ಷಿದಾರರಾಗಿ ಹೇಳಿಕೆ ನೀಡಲು ಶೆರ್ಲಾನ್ ಚೋಪ್ರಾ ಅವರನ್ನು ವಿಚಾರಣೆ ಕರೆಯಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

SCROLL FOR NEXT