ಪೂನಂ ಪಾಂಡೆ ಮತ್ತು ಪತಿ ಸ್ಯಾಮ್ ಬಾಂಬೆ 
ಬಾಲಿವುಡ್

ಬಾಲಿವುಡ್ ಹಾಟ್ ಬೆಡಗಿ ಪೂನಂ ಪಾಂಡೆ ಪತಿ ಅರೆಸ್ಟ್

ಬಾಲಿವುಡ್ ನಟಿ ಪೂನಂ ಪಾಂಡೆ ಮೇಲೆ ಹಲ್ಲೆ ಮಾಡಿದ ಆರೋಪದ ಅಡಿ ಸ್ಯಾಮ್ ಬಾಂಬೆಯನ್ನು ಪೊಲೀಸರು ಬಂಧಿಸಿದ್ದಾರೆ.

ಮುಂಬೈ: ಬಾಲಿವುಡ್ ನಟಿ ಪೂನಂ ಪಾಂಡೆ ಮೇಲೆ ಹಲ್ಲೆ ಮಾಡಿದ ಆರೋಪದ ಅಡಿ ಸ್ಯಾಮ್ ಬಾಂಬೆಯನ್ನು ಪೊಲೀಸರು ಬಂಧಿಸಿದ್ದಾರೆ.

ಪೂನಂ ಪಾಂಡೆ ಅವರ ತಲೆ, ಕಣ್ಣು ಮತ್ತು ಮುಖದ ಮೇಲೆ ಗಾಯಗಳಾಗಿದ್ದುಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಯಾಮ್ ಬಾಂಬೆ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಎಂದು ಮುಂಬೈ ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಹಿಂದೆ ಪತಿ, ನಿರ್ಮಾಪಕ ಸ್ಯಾಮ್ ಬಾಂಬೆ ವಿರುದ್ಧ ಹಲ್ಲೆ ಪ್ರಕರಣ ದಾಖಲಿಸಿ ನಟಿ ಜೈಲಿಗಟ್ಟಿದ್ದರು. ಇದೀಗ ಜೈಲಿನಿಂದ ಹೊರಬರುತ್ತಿದ್ದಂತೆಯೇ ಪೂನಂ ಮೇಲೆ ಮತ್ತೆ ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದೆ.

2020ರ ಸೆಪ್ಟೆಂಬರ್ 11ರಂದು ಪೂನಂ ಪಾಂಡೆ ತನ್ನ ಗೆಳೆಯ ಸ್ಯಾಮ್ ಬಾಂಬೆ ಅವರನ್ನು ವಿವಾಹವಾಗಿದ್ದರು. ಮದುವೆಯಾಗಿ ಎರಡು ವಾರದಲ್ಲೇ ನನಗೆ ಕಿರುಕುಳ ನೀಡುತ್ತಿದ್ದಾನೆ, ಹಲ್ಲೆ ಮಾಡುತ್ತಿದ್ದಾನೆ ಎಂದು ಆರೋಪಿಸಿ ನಟಿ ಪತಿ ವಿರುದ್ಧ ಗೋವಾದಲ್ಲಿ ದೂರು ನೀಡಿದ್ದರು.

ನಟಿ ಗೋವಾದ ಕೆನಕೋನಾದಲ್ಲಿ ಚಿತ್ರೀಕರಣದಲ್ಲಿ ತೊಡಗಿದ್ದರು. ಈ ಸಂದರ್ಭದಲ್ಲಿ ಅಲ್ಲಿಗೆ ಬಂದಿದ್ದ ಸ್ಯಾಮ್ ಬಾಂಬೆ, ಪಾಂಡೆ ಮೇಲೆ ಹಲ್ಲೆ ಮಾಡಿ, ದೈಹಿಕ ಕಿರುಕುಳ ನೀಡಿ ಬೆದರಿಕೆ ಹಾಕಿರುವುದಾಗಿ ಪೂನಂ ಕೆನಕೋನಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ದೂರಿನ ಮೇರೆಗೆ ಪೊಲೀಸರು ಪೂನಂ ಪತಿ ಸ್ಯಾಮ್ ಬಾಂಬೆಯನ್ನು ಬಂಧಿಸಿ ಜೈಲಿಗಟ್ಟಿದ್ದರು. ಹೀಗೆ ಬಂಧಿತನಾಗಿದ್ದ ಸ್ಯಾಮ್ ಹೈಕೋರ್ಟಿನಿಂದ ಜಾಮೀನು ಪಡೆದು ಹೊರಬಂದಿದ್ದರು. ಇದೀಗ ಮತ್ತೆ ಪತ್ನಿ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

ಈ ಬಾರಿ ಆತ ಕೆಟ್ಟದಾಗಿ ಹೊಡೆದಿದ್ದಾನೆ. ಪ್ರತಿ ಬಾರಿ ಅವನು ನನ್ನನ್ನು ಹೊಡೆದು ನಂತರ ಕ್ಷಮಿಸಿ ಎಂದು ಅಳಲು ಪ್ರಾರಂಭಿಸುತ್ತಾನೆ. ಈ ಬಾರಿಯೂ ಸ್ಯಾಮ್ ಅದೇ ರೀತಿ ಮಾಡಿದ್ದಾನೆ. ಇನ್ಮುಂದೆ ಹೀಗಾಗುವುದಿಲ್ಲ ಎಂದು ಭರವಸೆ ನೀಡಿದ. ಆದರೆ ಮತ್ತೆ ಅವರು ಹೀಗೆ ಮಾಡುತ್ತಾನೆ. ಅವನಿಂದಾಗಿ ನನಗೆ ಮೆದುಳಿನ ರಕ್ತಸ್ರಾವವಾಗಿದೆ ಎಂದು ಪೂನಂ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

SCROLL FOR NEXT