ಕಂಗನಾ ರನೌತ್ 
ಬಾಲಿವುಡ್

'ಜಿಹಾದಿ ರಾಷ್ಟ್ರ' ಹೇಳಿಕೆ: ತನ್ನ ವಿರುದ್ಧ ಎಫ್‌ಐಆರ್‌ಗೆ ಪ್ರತ್ಯುತ್ತರವಾಗಿ ಹಾಟ್ ಫೋಟೋ ಹಂಚಿಕೊಂಡ ಕಂಗನಾ ರನೌತ್

ಭಾರತ ಮತ್ತು ರೈತರ ವಿರುದ್ಧ ದೇಶದ್ರೋಹಿ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಶ್ರೀ ಗುರು ಸಿಂಗ್ ಸಭಾ ಗುರುದ್ವಾರ ಸಮಿತಿ (ಎಸ್‌ಜಿಎಸ್‌ಎಸ್‌ಜಿಸಿ) ತನ್ನ ವಿರುದ್ಧ ದಾಖಲಿಸಿದ ಎಫ್‌ಐಆರ್‌ಗೆ ಪ್ರತಿಕ್ರಿಯೆಯಾಗಿ ನಟಿ ಕಂಗನಾ ರನೌತ್ ತಮ್ಮ ಮೊದಲ ಹೇಳಿಕೆಯನ್ನು ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ನಲ್ಲಿ ಹಂಚಿಕೊಂಡಿದ್ದಾರೆ.

ಮುಂಬೈ: ಭಾರತ ಮತ್ತು ರೈತರ ವಿರುದ್ಧ ದೇಶದ್ರೋಹಿ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಶ್ರೀ ಗುರು ಸಿಂಗ್ ಸಭಾ ಗುರುದ್ವಾರ ಸಮಿತಿ (ಎಸ್‌ಜಿಎಸ್‌ಎಸ್‌ಜಿಸಿ) ತನ್ನ ವಿರುದ್ಧ ದಾಖಲಿಸಿದ ಎಫ್‌ಐಆರ್‌ಗೆ ಪ್ರತಿಕ್ರಿಯೆಯಾಗಿ ನಟಿ ಕಂಗನಾ ರನೌತ್ ತಮ್ಮ ಮೊದಲ ಹೇಳಿಕೆಯನ್ನು ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ನಲ್ಲಿ ಹಂಚಿಕೊಂಡಿದ್ದಾರೆ.

ತನ್ನ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಕಂಗನಾ ತನ್ನ ಹಾಟ್ ಫೋಟೋವನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಕಂಗನಾ ಕೈಯಲ್ಲಿ ವೈನ್ ಗ್ಲಾಸ್ ಹಿಡಿದುಕೊಂಡು ಮಾದಕ ಉಡುಪನ್ನು ಧರಿಸಿರುವುದು ಕಾಣಬಹುದು. ಇನ್ನು ಕಂಗನಾ, ‘ಇನ್ನೊಂದು ದಿನ ಮತ್ತೊಂದು ಎಫ್‌ಐಆರ್‌... ನನ್ನನ್ನು ಬಂಧಿಸಲು ಬಂದರೆ... ಸದ್ಯ ಮನೆಯಲ್ಲಿ ನನ್ನ ಮನಸ್ಥಿತಿ ಹೀಗಿದೆ’ ಎಂದು ಬರೆದುಕೊಂಡಿದ್ದಾರೆ.

ಮೋದಿ ಸರ್ಕಾರ ಕೃಷಿ ಕಾನೂನುಗಳನ್ನು ಹಿಂಪಡೆಯುವುದಾಗಿ ಘೋಷಿಸಿದ ನಂತರ ಕಂಗನಾ ರೈತರ ಚಳವಳಿಯನ್ನು ಖಲಿಸ್ತಾನಿ ಚಳವಳಿಗೆ ಹೋಲಿಸಿದ್ದರು. ತದನಂತರ ದೇಶದ ವಿವಿಧ ಪ್ರದೇಶಗಳಲ್ಲಿ ಕಂಗನಾ ವಿರುದ್ಧ ಅನೇಕ ಎಫ್‌ಐಆರ್‌ಗಳು ದಾಖಲಾಗಿದ್ದವು. ಸಿಖ್ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಕಂಗನಾ ವಿರುದ್ಧ ಮಹಾರಾಷ್ಟ್ರ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಪ್ರಧಾನಿ ಮೋದಿ ಅವರು ಕೃಷಿ ಕಾಯ್ದೆಗಳನ್ನು ಹಿಂಪಡೆದ ಬಗ್ಗೆ ಇನ್‌ಸ್ಟಾಗ್ರಾಂನಲ್ಲಿ ಪ್ರತಿಕ್ರಿಯಿಸಿದ್ದ ಕಂಗನಾ, ‘ಇದು ದುಃಖದ ಸಂಗತಿ, ನಾಚಿಕೆಗೇಡಿನದ್ದು, ಸಂಪೂರ್ಣ ಅನ್ಯಾಯ. ಬೀದಿಗಿಳಿದ ಜನ ದೇಶದಲ್ಲಿ ಕಾನೂನುಗಳನ್ನು ರೂಪಿಸಲಾರಂಭಿಸಿದ್ದಾರೆಯೇ ಹೊರತು, ಸಂಸತ್ತಿನಲ್ಲಿರುವ ಜನರಿಂದ ಆಯ್ಕೆಯಾದ ಸರ್ಕಾರವಲ್ಲ. ಇದು ಸಹ ಜಿಹಾದಿ ರಾಷ್ಟ್ರವಾಗಿದೆ. ಈ ರೀತಿ ಆಗಬೇಕೆಂದು ಬಯಸಿದ ಎಲ್ಲರಿಗೂ ಅಭಿನಂದನೆಗಳು,’ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಎರಡನೇ ಪೋಸ್ಟ್‌ನಲ್ಲಿ ಆ ಮಹಿಳೆಯನ್ನು(ಇಂದಿರಾ ಗಾಂಧಿ) ಮರೆಯಬಾರದು. ಇವರೆಲ್ಲವನ್ನು ಆಕೆ ತನ್ನ ಶೂ ಅಡಿಯಲ್ಲಿ ಪುಡಿಮಾಡಿದರು. ತನ್ನ ಪ್ರಾಣವನ್ನೇ ಪಣಕ್ಕಿಟ್ಟು ಅವರನ್ನು ಸೊಳ್ಳೆಗಳಂತೆ ತುಳಿದಿದ್ದರು. ಆದರೆ ದೇಶವನ್ನು ತುಂಡು ತುಂಡಾಗಲು ಬಿಡಲಿಲ್ಲ. ಆಕೆ ಸತ್ತು ದಶಕ ಕಳೆದರೂ ಅವರ ಹೆಸರಿಗೆ ಇವರು ನಡುಗುತ್ತಾರೆ. ಅದು ಗುರು ಬೇಕು ಎಂದು ಬರೆದುಕೊಂಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ರಿಷಭ್ ಪಂತ್ ಔಟ್; ಭಾರತ ತಂಡ ಸೇರಿದ 24 ವರ್ಷದ ಆಟಗಾರ!

SCROLL FOR NEXT