ಜಾವೇದ್ ಅಖ್ತರ್ 
ಬಾಲಿವುಡ್

ಆರ್ ಎಸ್ ಎಸ್ ಕುರಿತ ಹೇಳಿಕೆ: ಬಾಲಿವುಡ್ ಗೀತೆ ರಚನೆಕಾರ ಜಾವೇದ್ ಅಖ್ತರ್ ವಿರುದ್ಧ ಎಫ್ ಐಆರ್ 

ರಾಷ್ಟ್ರೀಯ ಸ್ವಯಂ ಸೇವಕ ಸಂಘ- ಆರ್ ಎಸ್ ಎಸ್ ವಿರುದ್ಧ ಹೇಳಿಕೆ ಆರೋಪದ ಮೇರೆಗೆ ಬಾಲಿವುಡ್ ಗೀತೆ ರಚನೆಕಾರ ಜಾವೇದ್ ಅಖ್ತರ್ ವಿರುದ್ಧ ಸೋಮವಾರ ಮುಂಬೈ ಪೊಲೀಸರು ಎಫ್ ಐಆರ್ ದಾಖಲಿಸಿರುವುದಾಗಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುಂಬೈ: ರಾಷ್ಟ್ರೀಯ ಸ್ವಯಂ ಸೇವಕ ಸಂಘ- ಆರ್ ಎಸ್ ಎಸ್ ವಿರುದ್ಧ ಹೇಳಿಕೆ ಆರೋಪದ ಮೇರೆಗೆ ಬಾಲಿವುಡ್ ಗೀತೆ ರಚನೆಕಾರ ಜಾವೇದ್ ಅಖ್ತರ್ ವಿರುದ್ಧ ಸೋಮವಾರ ಮುಂಬೈ ಪೊಲೀಸರು ಎಫ್ ಐಆರ್ ದಾಖಲಿಸಿರುವುದಾಗಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
 
ನಗರದ ಮೂಲದ ವಕೀಲ ಸಂತೋಷ್ ದುಬೆ ನೀಡಿದ ದೂರಿನ ಆಧಾರದ ಮೇಲೆ ಮುಲುಂಡ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಐಪಿಸಿ ಸೆಕ್ಷನ್ 500 ( ಮಾನನಷ್ಟಕ್ಕಾಗಿ ಶಿಕ್ಷೆ) ಅಡಿಯಲ್ಲಿ ಎಫ್ ಐಆರ್ ದಾಖಲಾಗಿರುವುದಾಗಿ ಮುಲುಂಡ್ ಠಾಣೆಯ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಟಿವಿ ಚಾನಲ್ ವೊಂದರ ಸಂದರ್ಶನದಲ್ಲಿ ಆರ್ ಎಸ್ ಎಸ್ ವಿರುದ್ಧ ಸುಳ್ಳು, ಅವಹೇಳನಕಾರಿ ಹೇಳಿಕೆ ನೀಡಿಕೆ ಆರೋಪದ ಮೇರೆಗೆ ಜಾವೇದ್ ಅಖ್ತರ್ ಅವರಿಗೆ ಕಳೆದ ತಿಂಗಳು ವಕೀಲ ಸಂತೋಷ್ ದುಬೆ ಕಾನೂನಿನ ನೋಟಿಸ್ ವೊಂದನ್ನು ಕಳುಹಿಸಿ, ಕ್ಷಮೆ ಯಾಚಿಸುವಂತೆ ಕೋರಿದ್ದರು. ಇತ್ತೀಚಿಗೆ ನಡೆದ ಸಂದರ್ಶನದಲ್ಲಿ ತಾಲಿಬಾನ್ ನೊಂದಿಗೆ ಹಿಂದೂ ಬಲಪಂಥೀಯರನ್ನು ಜಾವೇದ್ ಅಖ್ತರ್ ಹೋಲಿಕೆ ಮಾಡಿದ್ದರು.

ಜಾವೇದ್ ಅಖ್ತರ್ ಇಂತಹ ಹೇಳಿಕೆ ನೀಡುವ ಮೂಲಕ ಐಪಿಸಿ ಸೆಕ್ಷನ್ 499 (ಮಾನಹಾನಿ) 500 ( ಮಾನಹಾನಿಗೆ ಶಿಕ್ಷೆ) ಅಡಿಯಲ್ಲಿ ಅಪರಾಧ ಮಾಡಿರುವುದಾಗಿ ದುಬೆ ನೋಟಿಸ್ ನಲ್ಲಿ ಹೇಳಿದ್ದರು. ಹೇಳಿಕೆ ಕುರಿತಂತೆ ಕ್ಷಮೆಯಾಚಿಸುವಂತೆ ಈ ಹಿಂದೆ ನೋಟಿಸ್ ನೀಡಲಾಗಿತ್ತು. ಆದರೆ, ಕ್ಷಮೆಯಾಚಿಸಿದ ಹಿನ್ನೆಲೆಯಲ್ಲಿ ನನ್ನ ದೂರಿನ ಆಧಾರದ ಮೇಲೆ ಇದೀಗ ಎಫ್ ಐಆರ್ ದಾಖಲಿಸಲಾಗಿದೆ ಎಂದು ವಕೀಲರು ಪಿಟಿಐಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಹೊಸ ಸುಂಕ ನೀತಿಗೆ ಅಮೆರಿಕದಲ್ಲೇ ಭಾರಿ ವಿರೋಧ: ಭಾರತ ಸೇರಿ 59 ದೇಶಗಳ ಪರ ನಿಂತ 25 ರಾಜ್ಯಗಳು; ಟ್ರಂಪ್ ಸರ್ಕಾರಕ್ಕೆ ಕಾನೂನು ಸಂಕಷ್ಟ..!

West Asia War: ಒಪ್ಪಂದಕ್ಕೆ ಬರ್ತೀರಾ? ಇತಿಹಾಸ ಸೇರ್ತೀರಾ?; ಇರಾನ್‌ಗೆ ಟ್ರಂಪ್ ಲಾಸ್ಟ್ ವಾರ್ನಿಂಗ್..!

"ನನಗೊಬ್ಬ ಪಾಕಿಸ್ತಾನಿ ಹುಡುಗನನ್ನು ಹುಡುಕಿ ಕೊಡಿ" ಸಂಘಿ ಹೇಳಿಕೆ ಬೆನ್ನಲ್ಲೇ ಕಂಗನಾ ರಣಾವತ್ ಹಳೆಯ VIDEO ವೈರಲ್!

ಹೊಸ ಮುಖಗಳ ನಿರೀಕ್ಷೆ ಹುಸಿ; ಡಿಕೆಶಿ ಸಂಪುಟದಲ್ಲಿ ಹಿರಿಯರ ಪ್ರಾಬಲ್ಯ, ಅನುಭವಿಗಳಿಗೆ ಮಣೆ ಹಾಕಿದ ಹೈಕಮಾಂಡ್..!

ಅತಿವೃಷ್ಟಿ, ಅನಾವೃಷ್ಟಿ ಬಗ್ಗೆ ವರದಿ ನೀಡಲು ನೂತನ ಸಚಿವರಿಗೆ ಸೂಚನೆ: ಸಿದ್ದುಗೆ ಯಾವುದೇ ಅಸಮಾಧಾನವಿಲ್ಲ, ತಮಿಳುನಾಡಿಗೆ ಕಾನೂನು ಮೂಲಕವೇ ಉತ್ತರ- ಸಿಎಂ ಡಿಕೆ ಶಿವಕುಮಾರ್