ರಾಷ್ಟ್ರ ಪ್ರಶಸ್ತಿ ವಿಜೇತ ಗೀತೆ ರಚನೆಕಾರ ಜಾವೇದ್ ಅಖ್ತರ್ 
ಬಾಲಿವುಡ್

ತಾಲಿಬಾನ್- ಆರ್ ಎಸ್ ಎಸ್ ಹೋಲಿಕೆ ಹೇಳಿಕೆಗಾಗಿ ಮೊಕದ್ದಮೆ: ಜಾವೇದ್ ಅಖ್ತರ್ ಗೆ ಥಾಣೆ ಕೋರ್ಟ್ ನೋಟಿಸ್

ತಾಲಿಬಾನ್ ನೊಂದಿಗೆ ಆರ್ ಎಸ್ ಎಸ್ ಹೋಲಿಕೆ ಆರೋಪಕ್ಕೆ ಸಂಬಂಧಿಸಿದಂತೆ ವಿರುದ್ಧ ದಾಖಲಾಗಿರುವ ಮಾನನಷ್ಟ ಮೊಕದ್ದಮೆಯಲ್ಲಿ ಬಾಲಿವುಡ್ ಖ್ಯಾತ ಗೀತೆ ರಚನೆಕಾರ, ಕವಿ  ಜಾವೇದ್ ಅಖ್ತರ್ ಗೆ ಥಾಣೆಯ ಕೋರ್ಟ್ ಒಂದು ಸೋಮವಾರ ಶೋಕಾಸ್ ನೋಟಿಸ್ ನೀಡಿದೆ.

ಥಾಣೆ: ತಾಲಿಬಾನ್ ನೊಂದಿಗೆ ಆರ್ ಎಸ್ ಎಸ್ ಹೋಲಿಕೆ ಆರೋಪಕ್ಕೆ ಸಂಬಂಧಿಸಿದಂತೆ ವಿರುದ್ಧ ದಾಖಲಾಗಿರುವ ಮಾನನಷ್ಟ ಮೊಕದ್ದಮೆಯಲ್ಲಿ ಬಾಲಿವುಡ್ ಖ್ಯಾತ ಗೀತೆ ರಚನೆಕಾರ, ಕವಿ  ಜಾವೇದ್ ಅಖ್ತರ್ ಗೆ ಥಾಣೆಯ ಕೋರ್ಟ್ ಒಂದು ಸೋಮವಾರ ಶೋಕಾಸ್ ನೋಟಿಸ್ ನೀಡಿದೆ.

 ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಮತ್ತು ಜಂಟಿ ಸಿವಿಲ್ ನ್ಯಾಯಾಧೀಶರ (ಹಿರಿಯ ವಿಭಾಗ) ನ್ಯಾಯಾಲಯದಲ್ಲಿ  ಆರ್‌ಎಸ್‌ಎಸ್ ಕಾರ್ಯಕರ್ತ ವಿವೇಕ್ ಚಂಪಾನೇಕರ್ ಸಲ್ಲಿಸಿರುವ ಮೊಕದ್ದಮೆಯಲ್ಲಿ 1 ಕೋಟಿ ರೂ. ಪರಿಹಾರವನ್ನು ಕೋರಿದ್ದಾರೆ. ನವೆಂಬರ್ 12 ರಂದು ಹಿಂತಿರುಗಿಸಬಹುದಾದ ನೋಟಿಸ್ ನೀಡಲು ನ್ಯಾಯಾಲಯ ಆದೇಶಿಸಿದೆ.

ವಿಶ್ವದಾದ್ಯಂತ ಬಲಪಂಥೀಯರು ಅಸಾಮಾನ್ಯ ಸಾಮ್ಯತೆಯನ್ನು ಹೊಂದಿದ್ದಾರೆ ಎಂದು 76 ವರ್ಷದ ಹಿರಿಯ ಗೀತೆ ರಚನೆಕಾರರಾಗಿರುವ ಜಾವೇದ್ ಅಖ್ತರ್ ಈ ತಿಂಗಳ ಆರಂಭದಲ್ಲಿ ಖಾಸಗಿ ಸುದ್ದಿ ವಾಹಿಯೊಂದಿಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು.

ತಾಲಿಬಾನಿಗಳು ಇಸ್ಲಾಮಿಕ್ ದೇಶವನ್ನು ಬಯಸುತ್ತಾರೆ. ಈ ಜನರು ಹಿಂದೂ ರಾಷ್ಟ್ರವನ್ನು ಮಾಡಲು ಬಯಸುತ್ತಾರೆ ಎಂದು  ನಾಗ್ಪುರ್ ಪ್ರಧಾನ ಕಚೇರಿಯ ಹಿಂದುತ್ವ ಸಂಘಟನೆಯ ಹೆಸರನ್ನು ಹೇಳದೆ ಜಾವೇದ್ ಅಖ್ತರ್ ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT