ನಟಿ ಜಾಕ್ವೆಲಿನ್ ಫರ್ನಾಂಡಿಸ್ 
ಬಾಲಿವುಡ್

'ನಾನು ಬಲಿಷ್ಠ, ನನ್ನನ್ನು ನಾನು ಒಪ್ಪಿಕೊಳ್ಳುತ್ತೇನೆ': ಇಡಿ ಚಾರ್ಜ್ ಶೀಟ್ ಗೆ ನಟಿ ಜಾಕ್ವೆಲಿನ್ ಪ್ರತಿಕ್ರಿಯೆ

ಸುಕೇಶ್ ಚಂದ್ರಶೇಖರ್ ಮತ್ತು ಇತರರಿಗೆ ಸಂಬಂಧಿಸಿದ ಬಹುಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಬುಧವಾರ ಸಲ್ಲಿಸಿರುವ ಚಾರ್ಜ್ ಶೀಟ್‌ನಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರನ್ನು ಆರೋಪಿ...

ಮುಂಬೈ: ಸುಕೇಶ್ ಚಂದ್ರಶೇಖರ್ ಮತ್ತು ಇತರರಿಗೆ ಸಂಬಂಧಿಸಿದ ಬಹುಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಬುಧವಾರ ಸಲ್ಲಿಸಿರುವ ಚಾರ್ಜ್ ಶೀಟ್‌ನಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರನ್ನು ಆರೋಪಿ ಎಂದು ಹೆಸರಿಸಲಾಗಿದೆ.

ಈ ಕುರಿತು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಹಾಕಿರುವ ನಟಿ, ಇದು ನನಗೆ ಪರೀಕ್ಷೆಯ ಸಮಯವಾಗಿದ್ದು, ಮತ್ತಷ್ಟು ಬಲಿಷ್ಠವಾಗುವುದಾಗಿ ಹೇಳಿದ್ದಾರೆ.

ಡಿಯರ್ ಮಿ ಎಂದು ಪೋಸ್ಟ್ ಆರಂಭಿಸಿರುವ ಜಾಕ್ವೆಲಿನ್, ನಾನು ಬಲಿಷ್ಠವಾಗಿದ್ದೇನೆ, ನನ್ನನ್ನು ನಾನು ಒಪ್ಪಿಕೊಳ್ಳುತ್ತೇನೆ, ಎಲ್ಲವೂ ಸರಿಯಾಗಲಿದೆ. ನಾನು ನನ್ನ ಗುರಿಯನ್ನು ಸಾಧಿಸುತ್ತೇನೆ, ಕನಸನ್ನು ನನಸಾಗಿಸುತ್ತೇನೆ, ನನಗದು ಸಾಧ್ಯವಿದೆ ಎಂದು ಹೇಳಿಕೊಂಡಿದ್ದಾರೆ.

ಬೆಂಗಳೂರು ಮೂಲದ ಸುಕೇಶ್‌ ಚಂದ್ರಶೇಖರ್‌ ಎಂಬಾತ ನಡೆಸಿರುವ 200 ಕೋಟಿ ರೂಪಾಯಿಗೂ ಅಧಿಕ ವಂಚನೆ ಪ್ರಕರಣದಲ್ಲಿ ಜಾಕ್ವೆಲಿನ್‌ 10 ಕೋಟಿ ಮೌಲ್ಯದ ಉಡುಗೊರೆ ನೀಡಿರುವುದು ತನಿಖೆಯಲ್ಲಿ ಪತ್ತೆಯಾಗಿತ್ತು.

ಸುಲಿಗೆ ಪ್ರಕರಣದ ಹಣದ ಜಾಡು ಹಿಡಿದು ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇಡಿ) ದೆಹಲಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ ನಟಿ  ಜಾಕ್ವೆಲಿನ್ ಫರ್ನಾಂಡೀಸ್ ರನ್ನು ಆರೋಪಿ ಎಂದು ಹೆಸರಿಸಲಾಗಿದೆ.

ಇದಕ್ಕೂ ಮೊದಲು ದೆಹಲಿ ಪೊಲೀಸರು ಸುಖೇಶ್ ಚಂದ್ರಶೇಖರ್ ಅವರನ್ನು ಬಂಧಿಸಿದ್ದರು. ಅವರು ಔಷಧೀಯ ದೈತ್ಯ ರ್ಯಾನ್‌ಬಾಕ್ಸಿಯ ಮಾಜಿ ಪ್ರವರ್ತಕರ ಸದಸ್ಯರಾದ ಅದಿತಿ ಸಿಂಗ್ ಮತ್ತು ಶಿವೇಂದರ್ ಸಿಂಗ್ ಅವರಿಂದ ಸುಮಾರು  215 ಕೋಟಿ ರೂ. ಸುಲಿಗೆ ಮಾಡಿದ್ದರು. ದೆಹಲಿ ಪೊಲೀಸರ ಪ್ರಕರಣವನ್ನು ಗಮನದಲ್ಲಿಟ್ಟುಕೊಂಡು ಇಡಿ ತನ್ನ ಮನಿ ಲಾಂಡರಿಂಗ್ ತನಿಖೆಯನ್ನು ಪ್ರಾರಂಭಿಸಿತು.

ಇಡಿ ಮೊದಲ ಚಾರ್ಜ್‌ಶೀಟ್‌ನಲ್ಲಿ ಚಂದ್ರಶೇಖರ್ ವಂಚಿಸಿದ ಹಣವನ್ನು ಹೇಗೆ ಬಳಸಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ತನ್ನ ಪೂರಕ ಆರೋಪಪಟ್ಟಿಯಲ್ಲಿ, ಚಂದ್ರಶೇಖರ್ ಅವರು ವಂಚಿಸಿದ ಮೊತ್ತದಿಂದ  5 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಉಡುಗೊರೆಗಳನ್ನು ಜಾಕ್ವೆಲಿನ್ ಫರ್ನಾಂಡೀಸ್ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಅಪರಾಧದ ಆದಾಯದಿಂದ ಉಡುಗೊರೆಗಳನ್ನು ಖರೀದಿಸಲಾಗಿದೆ ಎಂದು ಆಕೆಗೆ ತಿಳಿದಿತ್ತು ಎಂದು ಆರೋಪಿಸಿ ನಟಿಯನ್ನು ಆರೋಪಿ ಎಂದು ಹೆಸರಿಸಿದೆ.

ಸುಖೇಶ್ ಚಂದ್ರಶೇಖರ್ ಅವರು ಜಾಕ್ವೆಲಿನ್ ಫರ್ನಾಂಡೀಸ್‌ಗೆ ಸುಲಿಗೆ ಸೇರಿದಂತೆ ಅಪರಾಧ ಚಟುವಟಿಕೆಗಳಿಂದ ಗಳಿಸಿದ ಆದಾಯದಿಂದ  5.71 ಕೋಟಿ ರೂ. ಮೌಲ್ಯದ ವಿವಿಧ ಉಡುಗೊರೆಗಳನ್ನು ನೀಡಿದ್ದರು. ಚಂದ್ರಶೇಖರ್ ಅವರು ತಮ್ಮ ದೀರ್ಘಕಾಲದ ಸಹವರ್ತಿ ಮತ್ತು ಸಹ ಆರೋಪಿ ಪಿಂಕಿ ಇರಾನಿ ಅವಿಂದ ಈ ಉಡುಗೊರೆಯನ್ನು ತಲುಪಿಸಿದ್ದರು ಎಂದು ಇಡಿ ಹೇಳಿಕೆಯಲ್ಲಿ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!