ಜಾಕ್ವೆಲಿನ್ - ನೋರಾ 
ಬಾಲಿವುಡ್

'ನೋರಾ ಫತೇಹಿ ಕೇವಲ ಸಾಕ್ಷಿ, ನಾನು ಆರೋಪಿ ಏಕೆ?': ಇಡಿ ತನಿಖೆಯಲ್ಲಿ ಪಕ್ಷಪಾತ ಎಂದ ಜಾಕ್ವೆಲಿನ್

ನೋರಾ ಫತೇಹಿ ಸೇರಿದಂತೆ ತನ್ನಂತೆ ಇತರ ಕೆಲವು ಸೆಲೆಬ್ರಿಟಿಗಳು ಸಹ 200 ಕೋಟಿ ರೂಪಾಯಿ ಸುಲಿಗೆ ಪ್ರಕರಣದ ಪ್ರಮುಖ ಆರೋಪಿ ಸುಕೇಶ್ ಚಂದ್ರಶೇಖರ್‌ನಿಂದ ಉಡುಗೊರೆ ಪಡೆದಿದ್ದಾರೆ. ಆದರೆ ನನ್ನನ್ನು ಮಾತ್ರ ಆರೋಪಿಯನ್ನಾಗಿ...

ನವದೆಹಲಿ: ನೋರಾ ಫತೇಹಿ ಸೇರಿದಂತೆ ತನ್ನಂತೆ ಇತರ ಕೆಲವು ಸೆಲೆಬ್ರಿಟಿಗಳು ಸಹ 200 ಕೋಟಿ ರೂಪಾಯಿ ಸುಲಿಗೆ ಪ್ರಕರಣದ ಪ್ರಮುಖ ಆರೋಪಿ ಸುಕೇಶ್ ಚಂದ್ರಶೇಖರ್‌ನಿಂದ ಉಡುಗೊರೆ ಪಡೆದಿದ್ದಾರೆ. ಆದರೆ ನನ್ನನ್ನು ಮಾತ್ರ ಆರೋಪಿಯನ್ನಾಗಿ ಮಾಡಿರುವುದು ಆಶ್ಚರ್ಯಕರವಾಗಿದೆ ಎಂದು ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರು ಪಿಎಂಎಲ್‌ಎ ಮೇಲ್ಮನವಿ ಪ್ರಾಧಿಕಾರದ ಮುಂದೆ ಸಲ್ಲಿಸಿದ ಅರ್ಜಿಯಲ್ಲಿ ಸ್ಪಷ್ಟವಾಗಿ ಹೇಳಿದ್ದಾರೆ.

ಪ್ರಮುಖ ಆರೋಪಿ ಸುಕೇಶ್ ಚಂದ್ರಶೇಖರ್‌ನಿಂದ ನನ್ನಂತೆ ಉಡುಗೊರೆ ಪಡೆದ ಇತರ ಸೆಲೆಬ್ರಿಟಿಗಳನ್ನು ಕೇವಲ ಸಾಕ್ಷಿಗಳನ್ನಾಗಿ ಮಾಡಲಾಗಿದೆ. ಆದರೆ ತನ್ನನ್ನು ಮಾತ್ರ ಆರೋಪಿಯನ್ನಾಗಿ ಎಳೆಯಲು ಪ್ರಯತ್ನಿಸಲಾಗಿದೆ ಎಂದು ನಟಿ ಜಾಕ್ವೆಲಿನ್ ದೂರಿದ್ದಾರೆ.

ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಶಪಡಿಸಿಕೊಂಡಿರುವುದು ನನ್ನ ಹಣ. ಅದನ್ನು ಕಷ್ಟಪಟ್ಟು ಗಳಿಸಿದ್ದೆ. ಸುಕೇಶ್ ಜತೆ ಗೆಳೆತನ ಬೆಳೆಸುವುದಕ್ಕೂ ಮೊದಲೇ ನಾನು ದುಡಿದಿದ್ದ ಹಣವದು. ಅದನ್ನು ಬ್ಯಾಂಕ್‌ನಲ್ಲಿ ಠೇವಣಿ ಇರಿಸಿದ್ದೆ. ಆದರೆ ಈಗ ವಂಚನೆ ಪ್ರಕರಣದಲ್ಲಿ ನನ್ನ ಹೆಸರು ಇರುವುದರಿಂದ, ಹಣವನ್ನು ವಶಪಡಿಸಿಕೊಂಡಿದ್ದಾರೆ ಎಂದು ಜಾಕ್ವೆಲಿನ್ ಹೇಳಿದ್ದಾರೆ.

ನಾನು ಯಾವಾಗಲೂ ತನಿಖಾ ಸಂಸ್ಥೆಗಳೊಂದಿಗೆ ಸಹಕರಿಸುತ್ತಿದ್ದೇನೆ ಮತ್ತು ಇಲ್ಲಿಯವರೆಗಿನ ಎಲ್ಲಾ ಸಮನ್ಸ್‌ಗಳಿಗೆ ಹಾಜರಾಗಿದ್ದೇನೆ ಮತ್ತು ಎಲ್ಲಾ ಮಾಹಿತಿಯನ್ನು ಇಡಿಗೆ ಹಸ್ತಾಂತರಿಸಿದ್ದೇನೆ ಎಂದು ಜಾಕ್ವೆಲಿನ್ ಅವರು ತಿಳಿಸಿದ್ದಾರೆ.

ಪ್ರಸ್ತುತ ಪ್ರಕರಣದಲ್ಲಿ ತನ್ನ ವಿರುದ್ಧ "ಉಡುಗೊರೆಗಳನ್ನು ಸ್ವೀಕರಿಸಿದ" ಆಪಾದನೆ ಮಾಡಲಾಗಿದೆ. ಆದರೆ ನನ್ನನ್ನು ಹೊರತುಪಡಿಸಿ ಇಂತಹ ಉಡುಗೊರೆಗಳನ್ನು ಪಡೆದ ಇತರರನ್ನು ಪ್ರಕರಣದಲ್ಲಿ ಸಾಕ್ಷಿಗಳನ್ನಾಗಿ ಮಾಡಲಾಗಿದೆ. ನನ್ನನ್ನು ಮಾತ್ರ ಆರೋಪಿ ಮಾಡಿದ್ದು, ಇದು ಪಕ್ಷಪಾತ ಎಂದು ಮೇಲ್ಮನವಿ ಪ್ರಾಧಿಕಾರದ ಮುಂದೆ ಜಾಕ್ವೆಲಿನ್ ಸಲ್ಲಿಸಿದ ಮನವಿಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಧಮ್ ಇದ್ರೆ ನನ್ನ ಕೊಲ್ಲಿ.. ಕನಿಷ್ಠ 1 ಸಾವಿರ ಕ್ಷಿಪಣಿಗಳು ಲೋಡ್ ಆಗಿ ನಿಂತಿವೆ': ಇರಾನ್ ಗೆ Donald Trump ಎಚ್ಚರಿಕೆ

ಭಾರತ–ನ್ಯೂಜಿಲ್ಯಾಂಡ್ ಸಂಬಂಧ ಕಾರ್ಯತಂತ್ರ ಪಾಲುದಾರಿಕೆಗೆ ಉನ್ನತಿ; 5 ವರ್ಷಗಳಲ್ಲಿ 35,000 ಕೋಟಿ ರೂ ವ್ಯಾಪಾರದ ಗುರಿ; Video

'ಮಟನ್ ಹಾಕ್ತೀವಿ ಅಂತ ಹೇಳಿ ಚಿಕನ್ ಕೊಟ್ರು': ರಣಾಂಗಣವಾಯ್ತು 'ನಿಕಾಹ್ ಸಮಾರಂಭ', 12 ಮಂದಿಗೆ ಗಾಯ, Video

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಬೆಂಗಳೂರು: ತಾಯಿ, ಅಜ್ಜಿ, ಮಾವನನ್ನು ಕೊಂದು ಆರೋಪಿ ಆತ್ಮಹತ್ಯೆ!