ನಟ ಶಾರುಖ್ ಖಾನ್ 
ಬಾಲಿವುಡ್

'Pathaan' row: ಏನೇ ಆದರು ನಾವು ಪಾಸಿಟಿವ್ ಆಗಿ ಇರುತ್ತೇವೆ: ಪಠಾಣ್ ವಿವಾದ ಕುರಿತು ಶಾರುಖ್ ಖಾನ್

ಪಠಾಣ್ ಚಿತ್ರದ ಬೇಷರಮ್ ರಂಗ್ ಹಾಡು ವಿವಾದಕ್ಕೀಡಾಗಿರುವಂತೆಯೇ ಈ ಕುರಿತು ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ನಟ ಶಾರುಖ್ ಖಾನ್, ಏನೇ ಆದರು ನಾವು ಪಾಸಿಟಿವ್ ಆಗಿ ಇರುತ್ತೇವೆ ಎಂದು ಹೇಳಿದ್ದಾರೆ.

ಮುಂಬೈ: ಪಠಾಣ್ ಚಿತ್ರದ ಬೇಷರಮ್ ರಂಗ್ ಹಾಡು ವಿವಾದಕ್ಕೀಡಾಗಿರುವಂತೆಯೇ ಈ ಕುರಿತು ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ನಟ ಶಾರುಖ್ ಖಾನ್, ಏನೇ ಆದರು ನಾವು ಪಾಸಿಟಿವ್ ಆಗಿ ಇರುತ್ತೇವೆ ಎಂದು ಹೇಳಿದ್ದಾರೆ.

ಕೋಲ್ಕತ್ತ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ (ಕೆಐಎಫ್‌ಎಫ್) ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, 'ಸುತ್ತಮುತ್ತಲೂ ಏನೇ ನಡೆಯಲಿ, ನಮ್ಮಂತಹ ಜನರು ಧನಾತ್ಮಕ ಮನೋಭಾವದಿಂದ ಇರುತ್ತೇವೆ. ವಿವಿಧ ಜಾತಿ, ಬಣ್ಣ, ಧರ್ಮಗಳ ಜನರು ಪರಸ್ಪರ ಅರಿತುಕೊಳ್ಳಲು ಸಿನಿಮಾ ಉತ್ತಮ ವೇದಿಕೆಯಾಗಿದೆ ಎಂದು ಶಾರುಖ್ ಹೇಳಿದ್ದಾರೆ. ಪಠಾಣ್ ಚಿತ್ರದ 'ಬೇಷರಮ್ ರಂಗ್' ಹಾಡಿನ ವಿವಾದ ಭುಗಿಲೆದ್ದ ಬೆನ್ನಲ್ಲೇ ಶಾರುಖ್ ಈ ಹೇಳಿಕೆ ನೀಡಿರುವುದು ಕುತೂಹಲ ಕೆರಳಿಸಿದೆ.

'ಸಿನಿಮಾವು ಏಕತೆ, ಸಹೋದರತ್ವ ಮತ್ತು ಮಾನವೀಯ ಸಹಾನುಭೂತಿಯನ್ನು ಪ್ರತಿಬಿಂಬಿಸುತ್ತದೆ. ಸಹೋದರತ್ವದ ಮಾನವೀಯತೆಯ ಅಪಾರ ಸಾಮರ್ಥ್ಯವನ್ನು ಸಿನಿಮಾ ಮುನ್ನೆಲೆಗೆ ತರುತ್ತದೆ. ಮನುಕುಲದ ದೊಡ್ಡ ಸ್ವಭಾವದ ಬಗ್ಗೆ ಮಾತನಾಡುವ ಪ್ರತಿ-ನಿರೂಪಣೆಯನ್ನು ಉಳಿಸಿಕೊಳ್ಳಲು ಸಿನಿಮಾ ಅತ್ಯುತ್ತಮ ವೇದಿಕೆಯಾಗಿದೆ ಎಂದು ಶಾರುಖ್ ಹೇಳಿದ್ದಾರೆ.

ಬಹುನಿರೀಕ್ಷಿತ ಪಠಾಣ್ ಚಿತ್ರದ ಹಾಡು ಇತ್ತೀಚೆಗಷ್ಟೇ ಬಿಡುಗಡೆಯಾಗಿತ್ತು. ಇದರಲ್ಲಿ ನಟಿ ದೀಪಿಕಾ ಪಡುಕೋಣೆ ಕೇಸರಿ ಬಣ್ಣದ ಬಿಕಿನಿ ಹಾಕಿಕೊಂಡು ಕಾಣಿಸಿಕೊಂಡಿರುವುದು ಒಂದು ವರ್ಗದ ಆಕ್ರೋಶಕ್ಕೆ ಗುರಿಯಾಗಿದ್ದು, ದೇಶದ ವಿವಿಧೆಡೆ ಪ್ರತಿಭಟನೆ ನಡೆದಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT