ಶಾರೂಕ್ ಖಾನ್ 
ಬಾಲಿವುಡ್

'ಪಠಾಣ್ ಕೂಡ ದೇಶಭಕ್ತ, ಆದರೆ ಆಕ್ಷನ್ ರೀತಿಯಲ್ಲಿ' ಅಭಿಮಾನಿ ಪ್ರಶ್ನೆಗೆ ಶಾರೂಕ್ ಖಾನ್ ಉತ್ತರ

ಬಾಲಿವುಡ್ ಕಿಂಗ್ ಖಾನ್ ಶಾರುಖ್​ ಖಾನ್  ನಟನೆಯ ‘ಪಠಾಣ್’ ಸಿನಿಮಾ ಸದ್ಯ ಸೋಷಿಯಲ್ ಮೀಡಿಯಾಗಳಲ್ಲಿ, ಮಾಧ್ಯಮಗಳಲ್ಲಿ ಭಾರೀ ಸದ್ದು ಮಾಡುತ್ತಿದ್ದು, ಹೆಚ್ಚು ಚರ್ಚೆಗೆ ಗ್ರಾಸವಾಗಿದೆ. ಶಾರುಖ್ ಅನೇಕ ವರ್ಷಗಳ ಬಳಿಕ ಅಭಿಮಾನಿಗಳ ಮುಂದೆ ಬಂದಿದ್ದರು. ನಿನ್ನೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ #AskSrk ಹ್ಯಾಶ್ ಟಾಗ್ ಮೂಲಕ ಅಭಿಮಾನಿಗಳೊಂದಿಗೆ ವರ್ಚುವಲ್ ಸಂವಾದ ನಡೆಸಿದ್ದಾರೆ.

ಮುಂಬೈ: ಬಾಲಿವುಡ್ ಕಿಂಗ್ ಖಾನ್ ಶಾರುಖ್​ ಖಾನ್  ನಟನೆಯ ‘ಪಠಾಣ್’ ಸಿನಿಮಾ ಸದ್ಯ ಸೋಷಿಯಲ್ ಮೀಡಿಯಾಗಳಲ್ಲಿ, ಮಾಧ್ಯಮಗಳಲ್ಲಿ ಭಾರೀ ಸದ್ದು ಮಾಡುತ್ತಿದ್ದು, ಹೆಚ್ಚು ಚರ್ಚೆಗೆ ಗ್ರಾಸವಾಗಿದೆ. ಶಾರುಖ್ ಅನೇಕ ವರ್ಷಗಳ ಬಳಿಕ ಅಭಿಮಾನಿಗಳ ಮುಂದೆ ಬಂದಿದ್ದರು. ನಿನ್ನೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ #AskSrk ಹ್ಯಾಶ್ ಟಾಗ್ ಮೂಲಕ ಅಭಿಮಾನಿಗಳೊಂದಿಗೆ ವರ್ಚುವಲ್ ಸಂವಾದ ನಡೆಸಿದ್ದಾರೆ.

ಇತ್ತೀಚಿಗಷ್ಟೆ ರಿಲೀಸ್ ಆದ ಪಠಾಣ್ ಚಿತ್ರದ ‘ಬೇಷರಂ​ ರಂಗ್​..’ ಹಾಡು ಕೆಲವರಿಗೆ ಇಷ್ಟವಾದರೇ ಇನ್ನು ಕೆಲವರನ್ನು ಕೆರಳಿಸಿದೆ. ಶಾರುಖ್​ ಖಾನ್ ಮತ್ತು ದೀಪಿಕಾ ಪಡುಕೋಣೆಯ ಕೆಮಿಸ್ಟ್ರಿ ಇಷ್ಟಪಟ್ಟರೆ ಮತ್ತೆ ಕೆಲವರು ಹಾಡಿನಲ್ಲಿ ದೀಪಿಕಾ ಪಡುಕೋಣೆ ಧರಿಸಿರುವ ಕೇಸರಿ ಬಣ್ಣದ ಬಿಕಿನಿಗೆ, ಹಾಡಿನಲ್ಲಿ ಧರಿಸಿರುವ ಬಟ್ಟೆ ಅಶ್ಲೀಲವಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ, ಚಿತ್ರವನ್ನು ನಿಷೇಧಿಸಬೇಕೆಂದು ಮುಸ್ಲಿಂ ಸಂಘಟನೆಗಳು ಸೇರಿದಂತೆ ಹಲವರು ಒತ್ತಾಯಿಸುತ್ತಿದ್ದಾರೆ.

ನಿನ್ನೆ ಟ್ವಿಟರ್‌ನಲ್ಲಿ ನಡೆದ ‘ಆಸ್ಕ್ ಮಿ ಎನಿಥಿಂಗ್’​ ಸೆಷನ್‌ನಲ್ಲಿ ಶಾರುಖ್ ಖಾನ್‌ಗೆ ಒಬ್ಬರು ಅಭಿಮಾನಿಯೊಬ್ಬರು ಈ ಚಿತ್ರ ದೇಶಭಕ್ತಿ ಸಿನಿಮಾವಾಗಿದೆಯಾ ಎಂದು ಪ್ರಶ್ನಿಸಿದ್ದರು. ಇದಕ್ಕೆ ಉತ್ತರ ನೀಡಿದ ಶಾರುಖ್, ‘ಪಠಾಣ್ ಕೂಡ ತುಂಬಾ ದೇಶಪ್ರೇಮಿ, ಆದರೆ ಆಕ್ಷನ್ ರೀತಿಯಲ್ಲಿ’ ಎಂದು ಹೇಳಿದರು. 

ಮೊನ್ನೆ ಕೋಲ್ಕತ್ತಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ 2022 ಭಾಗಿಯಾಗಿದ್ದ ಶಾರುಖ್ ಪಠಾಣ್ ವಿವಾದದ ಬಗ್ಗೆ ಪರೋಕ್ಷವಾಗಿ ಮಾತನಾಡಿದ್ದರು. ಜಗತ್ತು ನಾರ್ಮಲ್ ಆಗಿದೆ. ನಾವೆಲ್ಲರೂ ಸಂತೋಷವಾಗಿದ್ದೇವೆ, ನಾನು ಅತ್ಯಂತ ಸಂತೋಷವಾಗಿದ್ದೇನೆ. ಇಲ್ಲಿ ಸಕಾರಾತ್ಮಕ ಜನರಿದ್ದಾರೆ. ವಿವಿಧ ಜಾತಿ, ಬಣ್ಣ, ಧರ್ಮಗಳ ಜನರು ಪರಸ್ಪರ ಅರಿತುಕೊಳ್ಳಲು ಸಿನಿಮಾ ಉತ್ತಮ ವೇದಿಕೆಯಾಗಿದೆ' ಎಂದು ಹೇಳಿದ್ದರು. 

ಪಠಾಣ್ ಚಿತ್ರದ ಮೇಲೆ ಶಾರೂಕ್ ಭಾರೀ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಹಲವು ವರ್ಷಗಳಿಂದ ಸೋಲು ಕಂಡಿರುವ ಮತ್ತು ಸತತ ಸೋಲಿನಿಂದ ಕಂಗೆಟ್ಟಿರುವ ಬಾಲಿವುಡ್ ಚಿತ್ರರಂಗಕ್ಕೆ ಸಹ ಒಂದು ಹಿಟ್ ಚಿತ್ರ ನೀಡುವ ಅನಿವಾರ್ಯತೆ ಬಂದೊದಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT