ತುನಿಷಾ ಶರ್ಮಾ 
ಬಾಲಿವುಡ್

ಹಿಂದಿ ಕಿರುತೆರೆ ನಟಿ ತುನಿಷಾ ಶರ್ಮಾ ಆತ್ಮಹತ್ಯೆ: ಪ್ರಚೋದನೆ ನೀಡಿದ ಆರೋಪದ ಮೇಲೆ ಸಹನಟನ ಬಂಧನ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಹಿಂದಿ ಕಿರುತೆರೆ ನಟಿ ತುನಿಷಾ ಶರ್ಮಾ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ 27 ವರ್ಷದ ಸಹ ನಟನನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಹಿಂದಿ ಕಿರುತೆರೆ ನಟಿ ತುನಿಷಾ ಶರ್ಮಾ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ 27 ವರ್ಷದ ಸಹ ನಟನನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

21 ವರ್ಷದ ನಟಿ ಶನಿವಾರ ಇಲ್ಲಿನ ವಸೈ ಪ್ರದೇಶದಲ್ಲಿ ಧಾರಾವಾಹಿಯೊಂದರ ಸೆಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರು ಹೇಳಿದರು.

ಶರ್ಮಾ ಅವರ ತಾಯಿ ನೀಡಿದ ದೂರಿನ ಆದಾರದ ಮೇರೆಗೆ ಇಲ್ಲಿನ ವಲಿವ್ ಪೊಲೀಸರು ಸಂತ್ರಸ್ತೆಯ ಸಹನಟ ಶ್ರೀಜನ್ ಎಂ ಖಾನ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 306 (ಆತ್ಮಹತ್ಯೆಗೆ ಪ್ರಚೋದನೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಮತ್ತು ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತುನಿಷಾ ಶರ್ಮಾ ಅವರು 'ಭಾರತ್ ಕಾ ವೀರ್ ಪುತ್ರ ಮಹಾರಾಣಾ ಪ್ರತಾಪ್' ಟವಿ ಶೋ ಮತ್ತು 'ಫಿತೂರ್' ಮತ್ತು 'ಬಾರ್ ಬಾರ್ ದೇಶೋ' ಚಿತ್ರಗಳಲ್ಲಿ ನಟಿಸಿದ್ದರು.

‘ಅಲಿ ಬಾಬಾ: ದಸ್ತಾನ್-ಎ-ಕಾಬೂಲ್’ ಧಾರಾವಾಹಿಯ ಚಿತ್ರೀಕರಣ ನಡೆಯುತ್ತಿರುವ ಸೆಟ್‌ನಲ್ಲಿ ಶನಿವಾರ ಈ ಘಟನೆ ನಡೆದಿದೆ. ತುನಿಷಾ ಅವರು ಸೆಟ್‌ನಲ್ಲಿ ವಾಶ್‌ರೂಂಗೆ ತೆರಳಿದ್ದು, ಬಹಳ ಹೊತ್ತಾದರೂ ಹಿಂದಿರುಗಿರಲಿಲ್ಲ. ಅನುಮಾನಗೊಂಡು ಬಾಗಿಲು ಒಡೆದು ನೋಡಿದಾಗ ಆಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ.

ಆಕೆಯ ತಾಯಿ ನೀಡಿರುವ ದೂರಿನಲ್ಲಿ, ತುನಿಷಾ ಶರ್ಮಾ ಮತ್ತು ಖಾನ್ ಪ್ರೀತಿಸುತ್ತಿದ್ದರು. ತನ್ನ ಮಗಳ ಸಾವಿಗೆ ಖಾನ್ ಕಾರಣ ಎಂದು ದೂಷಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳದಲ್ಲಿ ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?