ರಣವೀರ್ ಸಿಂಗ್ 
ಬಾಲಿವುಡ್

ಸಾಮಾಜಿಕ ಮಾಧ್ಯಮಗಳಲ್ಲಿ ನಗ್ನ ಫೋಟೊ ಹಂಚಿಕೊಂಡಿದ್ದ ನಟ ರಣವೀರ್ ಸಿಂಗ್ ವಿರುದ್ಧ ಎಫ್‌ಐಆರ್

ಸಂಪೂರ್ಣ ಬೆತ್ತಲಾಗಿ ಫೋಟೊಶೂಟ್ ಮಾಡಿಸಿದ್ದ ನಟ ರಣವೀರ್ ಸಿಂಗ್, ಅವುಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುವ ಮೂಲಕ ಟೀಕೆಗೆ ಗುರಿಯಾಗಿದ್ದರು. ಇದೀಗ ದೂರಿನ ಆಧಾರದ ಮೇಲೆ ಅವರ ವಿರುದ್ಧ ಮುಂಬೈ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಮುಂಬೈ: ಬಾಲಿವುಡ್ ನಟ ಹಾಗೂ ನಟಿ ದೀಪಿಕಾ ಪಡುಕೋಣೆ ಅವರ ಪತಿ ರಣವೀರ್ ಸಿಂಗ್ ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ನಗ್ನ ಫೋಟೊಶೂಟ್ ಮಾಡಿಸಿ, ಅವುಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದರು. ಇದು ಸಾಕಷ್ಟು ಟೀಕೆಗೆ ಗುರಿಯಾಗಿತ್ತು. ಈ ಸಂಬಂಧ ಮುಂಬೈ ಪೊಲೀಸರು ರಣವೀರ್ ಸಿಂಗ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಮುಂಬೈ ಮೂಲದ ಎನ್‌ಜಿಒ ನಟನ ವಿರುದ್ಧ ಇಲ್ಲಿನ ಚೆಂಬೂರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿತ್ತು.

ದೂರಿನ ಆಧಾರದ ಮೇಲೆ ಪೊಲೀಸರು, ರಣವೀರ್ ಸಿಂಗ್ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳಾದ 292 (ಅಶ್ಲೀಲ ಪುಸ್ತಕಗಳ ಮಾರಾಟ, ಇತ್ಯಾದಿ), 293 (ಯುವಕರಿಗೆ ಅಶ್ಲೀಲ ವಸ್ತುಗಳ ಮಾರಾಟ), 509 (ಪದ, ಸನ್ನೆ ಅಥವಾ ಕೃತ್ಯದ ಮೂಲಕ ಮಹಿಳೆಯನ್ನು ಅವಮಾನಿಸುವ ಉದ್ದೇಶ) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಚೆಂಬೂರ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ತಮ್ಮ ನಗ್ನ ಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುವ ಮೂಲಕ ಬಾಲಿವುಡ್ ನಟ ರಣವೀರ್ ಸಿಂಗ್, ಮಹಿಳೆಯರ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಮತ್ತು ಅವರ ಭಾವನೆಗಳಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿರುವುದಾಗಿ ಪೊಲೀಸರು ಸೋಮವಾರ ತಿಳಿಸಿದ್ದರು.

ರಣವೀರ್ ಸಿಂಗ್ ಇತ್ತೀಚೆಗೆ ನಿಯತಕಾಲಿಕೆಯೊಂದರ ಫೋಟೊಶೂಟ್‌ಗೆ ಬೆತ್ತಲೆಯಾಗಿ ಕಾಣಿಸಿಕೊಂಡು ಸುದ್ದಿಯಾಗಿದ್ದರು. ತಮ್ಮ ನಗ್ನ ಫೋಟೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿಯೂ ಪ್ರಕಟಿಸಿದ್ದರು. ಇದು ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಇದು ಮಹಿಳೆಯರಿಗೆ ಮಾಡಿರುವ ಅವಮಾನ ಎಂದು ಹಲವರು ಟೀಕಿಸಿದ್ದರು.

ಇದರ ಬಳಿಕ ರಣವೀರ್ ಸಿಂಗ್‌ ಅವರಿಂದ ಪ್ರೇರಿತರಾಗಿ ತಮಿಳು ನಟ ವಿಷ್ಣು ವಿಶಾಲ್ ಕೂಡ ಬೆತ್ತಲೆ ಫೋಟೊಶೂಟ್ ಮಾಡಿಸಿದ್ದರು.

ತಮ್ಮ ನಟನೆಗಾಗಿ ಹಲವಾರು ಪ್ರಶಸ್ತಿಗಳನ್ನು ಪಡೆದಿರುವ ನಟ ರಣವೀರ್ ಸಿಂಗ್ ಅವರು 'ಬಾಜಿರಾವ್ ಮಸ್ತಾನಿ', 'ಪದ್ಮಾವತ್' ಮತ್ತು 'ಗಲ್ಲಿ ಬಾಯ್' ಸಿನಿಮಾಗಳಲ್ಲಿ ನಟಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT