ವಿವೇಕ್ ಅಗ್ನಿಹೋತ್ರಿ ಮತ್ತು ಜ್ಯೂರಿ ಮುಖ್ಯಸ್ಥರ ಸಂಗ್ರಹ ಚಿತ್ರ 
ಬಾಲಿವುಡ್

'ಕಾಶ್ಮೀರ್ ಫೈಲ್ಸ್' ಅಸಭ್ಯ, ಪ್ರಚಾರ ಪ್ರಿಯ ಚಿತ್ರ ಎಂದ ಐಎಫ್ಎಫ್ಐ ಜ್ಯೂರಿ ಮುಖ್ಯಸ್ಥನಿಗೆ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ತಿರುಗೇಟು

ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ(53rd IFFI) ಸಮಾರೋಪ ಸಮಾರಂಭದಲ್ಲಿ ಜ್ಯೂರಿ ಮುಖ್ಯಸ್ಥ ನಡಾವ್ ಲ್ಯಾಪಿಡ್ ಅವರು ಕಾಶ್ಮೀರ್ ಫೈಲ್ಸ್ ಚಿತ್ರವನ್ನು ಅಸಭ್ಯ, ಪ್ರಚಾರ ಚಿತ್ರ ಎಂದು ಕರೆದಿರುವುದಕ್ಕೆ ಚಿತ್ರದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.

ಮುಂಬೈ: ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ(53rd IFFI) ಸಮಾರೋಪ ಸಮಾರಂಭದಲ್ಲಿ ಜ್ಯೂರಿ ಮುಖ್ಯಸ್ಥ ನಡಾವ್ ಲ್ಯಾಪಿಡ್ ಅವರು ಕಾಶ್ಮೀರ್ ಫೈಲ್ಸ್ ಚಿತ್ರವನ್ನು ಅಸಭ್ಯ, ಪ್ರಚಾರ ಚಿತ್ರ ಎಂದು ಕರೆದಿರುವುದಕ್ಕೆ ಚಿತ್ರದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.

ಈ ಕುರಿತು ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ಅವರು, ಶುಭೋದಯ, ಸತ್ಯ ಯಾವಾಗಲೂ ಅಪಾಯವಾಗಿರುತ್ತದೆ, ಇದು ಮನುಷ್ಯರನ್ನು ಸುಳ್ಳು ಹೇಳುವಂತೆ ಮಾಡುತ್ತದೆ ಎಂದು ಬರೆದು ಸೃಜನಾತ್ಮಕ ಜಾಗೃತಿ ಎಂದು ಹ್ಯಾಶ್ ಟ್ಯಾಗ್ ನೀಡಿದ್ದಾರೆ.

ದಿ ಕಾಶ್ಮೀರ್ ಫೈಲ್ಸ್ ಚಿತ್ರ ಅಸಭ್ಯವಾಗಿದ್ದು, ಪ್ರಚಾರಕ್ಕೋಸ್ಕರ ಮಾಡಲಾಗಿದೆ. ಇಂತಹ ಪ್ರತಿಷ್ಠಿತ ಚಿತ್ರೋತ್ಸವದಲ್ಲಿ ಅಂತಹ ಚಿತ್ರವನ್ನು ನೋಡಿ ನನಗೆ ಆಘಾತವಾಗಿದೆ ಎಂದು ಹೇಳಿದ್ದು ಚಿತ್ರೋತ್ಸವದ ವಿಡಿಯೊವೊಂದು ವೈರಲ್ ಆಗಿದ್ದು ಅದರಲ್ಲಿ ಲ್ಯಾಪಿಡ್ ಚಿತ್ರವನ್ನು ಟೀಕಿಸುತ್ತಿದ್ದಾರೆ.

ನಮಗೆಲ್ಲರಿಗೂ 15ನೇ ಚಿತ್ರ ನೋಡಿ ಆಘಾತ ಮತ್ತು ಮನಸ್ಸಿಗೆ ತುಂಬಾ ನೋವಾಗಿದೆ. ಅದು ಕಾಶ್ಮೀರ್ ಫೈಲ್ಸ್ ಚಿತ್ರ. ಇದೊಂದು ಪ್ರಚಾರ ಪ್ರಿಯ, ಅಸಭ್ಯ ಚಿತ್ರ, ಇಂತಹ ಪ್ರತಿಷ್ಟಿತ ಚಿತ್ರೋತ್ಸವದಲ್ಲಿ ಇಂತಹ ಕೀಳು ಮಟ್ಟದ ಚಿತ್ರವನ್ನು ಸ್ಪರ್ಧೆಗೆ ತರುವುದು ಸರಿಯಲ್ಲ. ನನ್ನ ಈ ಭಾವನೆಯನ್ನು ಮುಕ್ತವಾಗಿ ಹೇಳಿಕೊಳ್ಳಲು ನನಗೆ ಯಾವುದೇ ಹಿಂಜರಿಕೆಯಿಲ್ಲ. ಈ ಚಿತ್ರೋತ್ಸವದ ಸಂದರ್ಭದಲ್ಲಿ ಈ ಬಗ್ಗೆ ವಿಮರ್ಶಾತ್ಮಕ ಚರ್ಚೆಗೆ ಸ್ವಾಗತವಿದೆ, ಕಲಾವಿದರು ಕಲಾ ಬದುಕಿನಲ್ಲಿ ಅದು ಮುಖ್ಯ ಕೂಡ ಎಂದು ನಿನ್ನೆ 53ನೇ ಐಎಫ್ಎಫ್ಐ ಚಿತ್ರೋತ್ಸವದ ಮುಕ್ತಾಯ ಸಮಾರಂಭದಲ್ಲಿ ಹೇಳಿದ್ದರು.

ಕಾಶ್ಮೀರ ಫೈಲ್ಸ್ ಚಿತ್ರ ಈ ವರ್ಷದ ಆರಂಭದಲ್ಲಿ ತೆರೆಗೆ ಬಂದಿದ್ದು 1990ರ ದಶಕದಲ್ಲಿ ಹಿಂದೂ ವಲಸಿಗರು ಮತ್ತು ಕಾಶ್ಮೀರ ಪಂಡಿತರನ್ನು ಗುರಿಯಾಗಿಟ್ಟುಕೊಂಡು ಕೊಂದಿದ್ದರ ಬಗ್ಗೆ ಕಥೆಯನ್ನು ಹೊಂದಿತ್ತು. ಅದರಲ್ಲಿ ಮುಖ್ಯ ಪಾತ್ರದಲ್ಲಿ ಅನುಪಮ್ ಖೇರ್ ನಟಿಸಿದ್ದು ಅವರ ನಟನೆಗೆ ಮತ್ತು ಒಟ್ಟಾರೆ ಚಿತ್ರಕ್ಕೆ ದೇಶಾದ್ಯಂತ ವ್ಯಾಪಕ ಪ್ರಶಂಸೆ ವ್ಯಕ್ತವಾಗಿತ್ತು. ಚಿತ್ರ ಕೂಡ ಸಾಕಷ್ಟು ಗಳಿಕೆ ಕಂಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT