ವಿವೇಕ್ ಅಗ್ನಿಹೋತ್ರಿ ಮತ್ತು ಜ್ಯೂರಿ ಮುಖ್ಯಸ್ಥರ ಸಂಗ್ರಹ ಚಿತ್ರ 
ಬಾಲಿವುಡ್

'ಕಾಶ್ಮೀರ್ ಫೈಲ್ಸ್' ಅಸಭ್ಯ, ಪ್ರಚಾರ ಪ್ರಿಯ ಚಿತ್ರ ಎಂದ ಐಎಫ್ಎಫ್ಐ ಜ್ಯೂರಿ ಮುಖ್ಯಸ್ಥನಿಗೆ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ತಿರುಗೇಟು

ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ(53rd IFFI) ಸಮಾರೋಪ ಸಮಾರಂಭದಲ್ಲಿ ಜ್ಯೂರಿ ಮುಖ್ಯಸ್ಥ ನಡಾವ್ ಲ್ಯಾಪಿಡ್ ಅವರು ಕಾಶ್ಮೀರ್ ಫೈಲ್ಸ್ ಚಿತ್ರವನ್ನು ಅಸಭ್ಯ, ಪ್ರಚಾರ ಚಿತ್ರ ಎಂದು ಕರೆದಿರುವುದಕ್ಕೆ ಚಿತ್ರದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.

ಮುಂಬೈ: ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ(53rd IFFI) ಸಮಾರೋಪ ಸಮಾರಂಭದಲ್ಲಿ ಜ್ಯೂರಿ ಮುಖ್ಯಸ್ಥ ನಡಾವ್ ಲ್ಯಾಪಿಡ್ ಅವರು ಕಾಶ್ಮೀರ್ ಫೈಲ್ಸ್ ಚಿತ್ರವನ್ನು ಅಸಭ್ಯ, ಪ್ರಚಾರ ಚಿತ್ರ ಎಂದು ಕರೆದಿರುವುದಕ್ಕೆ ಚಿತ್ರದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.

ಈ ಕುರಿತು ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ಅವರು, ಶುಭೋದಯ, ಸತ್ಯ ಯಾವಾಗಲೂ ಅಪಾಯವಾಗಿರುತ್ತದೆ, ಇದು ಮನುಷ್ಯರನ್ನು ಸುಳ್ಳು ಹೇಳುವಂತೆ ಮಾಡುತ್ತದೆ ಎಂದು ಬರೆದು ಸೃಜನಾತ್ಮಕ ಜಾಗೃತಿ ಎಂದು ಹ್ಯಾಶ್ ಟ್ಯಾಗ್ ನೀಡಿದ್ದಾರೆ.

ದಿ ಕಾಶ್ಮೀರ್ ಫೈಲ್ಸ್ ಚಿತ್ರ ಅಸಭ್ಯವಾಗಿದ್ದು, ಪ್ರಚಾರಕ್ಕೋಸ್ಕರ ಮಾಡಲಾಗಿದೆ. ಇಂತಹ ಪ್ರತಿಷ್ಠಿತ ಚಿತ್ರೋತ್ಸವದಲ್ಲಿ ಅಂತಹ ಚಿತ್ರವನ್ನು ನೋಡಿ ನನಗೆ ಆಘಾತವಾಗಿದೆ ಎಂದು ಹೇಳಿದ್ದು ಚಿತ್ರೋತ್ಸವದ ವಿಡಿಯೊವೊಂದು ವೈರಲ್ ಆಗಿದ್ದು ಅದರಲ್ಲಿ ಲ್ಯಾಪಿಡ್ ಚಿತ್ರವನ್ನು ಟೀಕಿಸುತ್ತಿದ್ದಾರೆ.

ನಮಗೆಲ್ಲರಿಗೂ 15ನೇ ಚಿತ್ರ ನೋಡಿ ಆಘಾತ ಮತ್ತು ಮನಸ್ಸಿಗೆ ತುಂಬಾ ನೋವಾಗಿದೆ. ಅದು ಕಾಶ್ಮೀರ್ ಫೈಲ್ಸ್ ಚಿತ್ರ. ಇದೊಂದು ಪ್ರಚಾರ ಪ್ರಿಯ, ಅಸಭ್ಯ ಚಿತ್ರ, ಇಂತಹ ಪ್ರತಿಷ್ಟಿತ ಚಿತ್ರೋತ್ಸವದಲ್ಲಿ ಇಂತಹ ಕೀಳು ಮಟ್ಟದ ಚಿತ್ರವನ್ನು ಸ್ಪರ್ಧೆಗೆ ತರುವುದು ಸರಿಯಲ್ಲ. ನನ್ನ ಈ ಭಾವನೆಯನ್ನು ಮುಕ್ತವಾಗಿ ಹೇಳಿಕೊಳ್ಳಲು ನನಗೆ ಯಾವುದೇ ಹಿಂಜರಿಕೆಯಿಲ್ಲ. ಈ ಚಿತ್ರೋತ್ಸವದ ಸಂದರ್ಭದಲ್ಲಿ ಈ ಬಗ್ಗೆ ವಿಮರ್ಶಾತ್ಮಕ ಚರ್ಚೆಗೆ ಸ್ವಾಗತವಿದೆ, ಕಲಾವಿದರು ಕಲಾ ಬದುಕಿನಲ್ಲಿ ಅದು ಮುಖ್ಯ ಕೂಡ ಎಂದು ನಿನ್ನೆ 53ನೇ ಐಎಫ್ಎಫ್ಐ ಚಿತ್ರೋತ್ಸವದ ಮುಕ್ತಾಯ ಸಮಾರಂಭದಲ್ಲಿ ಹೇಳಿದ್ದರು.

ಕಾಶ್ಮೀರ ಫೈಲ್ಸ್ ಚಿತ್ರ ಈ ವರ್ಷದ ಆರಂಭದಲ್ಲಿ ತೆರೆಗೆ ಬಂದಿದ್ದು 1990ರ ದಶಕದಲ್ಲಿ ಹಿಂದೂ ವಲಸಿಗರು ಮತ್ತು ಕಾಶ್ಮೀರ ಪಂಡಿತರನ್ನು ಗುರಿಯಾಗಿಟ್ಟುಕೊಂಡು ಕೊಂದಿದ್ದರ ಬಗ್ಗೆ ಕಥೆಯನ್ನು ಹೊಂದಿತ್ತು. ಅದರಲ್ಲಿ ಮುಖ್ಯ ಪಾತ್ರದಲ್ಲಿ ಅನುಪಮ್ ಖೇರ್ ನಟಿಸಿದ್ದು ಅವರ ನಟನೆಗೆ ಮತ್ತು ಒಟ್ಟಾರೆ ಚಿತ್ರಕ್ಕೆ ದೇಶಾದ್ಯಂತ ವ್ಯಾಪಕ ಪ್ರಶಂಸೆ ವ್ಯಕ್ತವಾಗಿತ್ತು. ಚಿತ್ರ ಕೂಡ ಸಾಕಷ್ಟು ಗಳಿಕೆ ಕಂಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT