ನಟಿ ಜಾಕ್ವೆಲಿನ್ ಫರ್ನಾಂಡೀಸ್ 
ಬಾಲಿವುಡ್

200 ಕೋಟಿ ರೂ. ಸುಲಿಗೆ ಪ್ರಕರಣ: ನಟಿ ಜಾಕ್ವೆಲಿನ್ ಜಾಮೀನು ಅರ್ಜಿಯ ವಿಚಾರಣೆ ಇಂದು

ವಂಚಕ ಸುಕೇಶ್ ಚಂದ್ರಶೇಖರ್ ಮತ್ತಿತರನ್ನೊಳಗೊಂಡಿರುವ  200 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ದೆಹಲಿಯ ನ್ಯಾಯಾಲಯವೊಂದು ಶನಿವಾರ ನಡೆಸಲಿದೆ.

ನವದೆಹಲಿ: ವಂಚಕ ಸುಕೇಶ್ ಚಂದ್ರಶೇಖರ್ ಮತ್ತಿತರನ್ನೊಳಗೊಂಡಿರುವ 200 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ದೆಹಲಿಯ ನ್ಯಾಯಾಲಯವೊಂದು ಶನಿವಾರ ನಡೆಸಲಿದೆ.

ಕಳೆದ ವಿಚಾರಣೆ ವೇಳೆಯಲ್ಲಿ ಜಾಕ್ವೆಲಿನ್ಗೆ  ಮಧ್ಯಂತರ ಜಾಮೀನು ನೀಡಲಾಗಿತ್ತು.ಜಾಕ್ವೆಲಿನ್ ಫರ್ನಾಂಡಿಸ್ ಇಂದು ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗಲಿದ್ದಾರೆ ಎಂದು ಅವರ ಪರ ವಕೀಲ ಪ್ರಶಾಂತ್ ಪಾಟೀಲ್ ಎಎನ್ ಐ ಸುದ್ದಿಸಂಸ್ಥೆಗೆ  ಖಚಿತಪಡಿಸಿದ್ದಾರೆ.

ಕಳೆದ ಬಾರಿಯ ವಿಚಾರಣೆ ಸಂದರ್ಭದಲ್ಲಿ ಜಾಕ್ವೆಲಿನ್ ಕೋರ್ಟಿನಲ್ಲಿ ವಿಚಾರಣೆಗೆ ಹಾಜರಾಗಿದ್ದರು. ಜಾಕ್ವೆಲಿನ್ ಅವರಿಗೆ  ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರು ಇಂದಿನವರೆಗೂ ರೂ. 50,000 ಜಾಮೀನು ಬಾಂಡ್‌ನಲ್ಲಿ ಮಧ್ಯಂತರ ಜಾಮೀನು ನೀಡಿದ್ದರು.

200 ಕೋಟಿ ರೂಪಾಯಿ ಸುಲಿಗೆ ಪ್ರಕರಣದಲ್ಲಿ  ಆಗಸ್ಟ್ 17, 2022 ರಂದು ದೆಹಲಿ ನ್ಯಾಯಾಲಯದಲ್ಲಿ ಅಪರಾಧಿ ಸುಖೇಶ್ ಚಂದ್ರಶೇಖರ್ ವಿರುದ್ಧ ಜಾರಿ ನಿರ್ದೇಶನಾಲಯ ಸಲ್ಲಿಸಿದ ಪೂರಕ ಆರೋಪಪಟ್ಟಿಯಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರ ಹೆಸರನ್ನು ಆರೋಪಿ ಎಂದು ಉಲ್ಲೇಖಿಸಲಾಗಿದೆ.

ಪ್ರಸ್ತುತ ಪ್ರಕರಣದ ಎಲ್ಲಾ ಆರೋಪಿಗಳಿಗೆ ದೋಷಾರೋಪ ಪಟ್ಟಿಯ ಪ್ರತಿಯನ್ನು ನೀಡುವಂತೆಯೂ ಕೋರ್ಟ್ ಇಡಿಗೆ ಸೂಚಿಸಿದೆ.

ಜಾಕ್ವೆಲಿನ್ ಫೆರ್ನಾಂಡಿಸ್ ಅವರಿಗೆ ತನಿಖೆಯ ಉದ್ದೇಶಕ್ಕಾಗಿ ಇಡಿ ಹಲವು ಬಾರಿ ಸಮನ್ಸ್ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT