ನಟಿ ನೋರಾ ಫತೇಹಿ 
ಬಾಲಿವುಡ್

ಸುಲಿಗೆ ಪ್ರಕರಣ: ಜಾಕ್ವೆಲಿನ್ ನಂತರ ವಿಚಾರಣೆಗೆ ಹಾಜರಾಗಲು ನಟಿ ನೋರಾ ಫತೇಹಿಗೆ ದೆಹಲಿ ಪೊಲೀಸರ ಸಮನ್ಸ್ 

ವಂಚಕ ಸುಖೇಶ್ ಚಂದ್ರಶೇಖರ್ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರನ್ನು ಬುಧವಾರ ಸುಮಾರು 8 ಗಂಟೆಗಳ ಕಾಲ ವಿಚಾರಣೆ ನಡೆಸಿರುವ ದೆಹಲಿ ಪೊಲೀಸ್ ಆರ್ಥಿಕ ಅಪರಾಧ ವಿಭಾಗದ ಅಧಿಕಾರಿಗಳು, ಫರ್ನಾಂಡೀಸ್ ಅವರನ್ನು ಚಂದ್ರಶೇಖರ್ ಗೆ ಪರಿಚಯಿಸಿದ ನಟಿ ನೋರ್ ಫತೇಹಿ  ಗುರುವಾರ ವಿಚಾರಣೆಗೆ ಹಾಜರಾಗಲು ಸಮನ್ಸ್ ನೀಡಿದ್ದಾರೆ.

ನವದೆಹಲಿ: ವಂಚಕ ಸುಖೇಶ್ ಚಂದ್ರಶೇಖರ್ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರನ್ನು ಬುಧವಾರ ಸುಮಾರು 8 ಗಂಟೆಗಳ ಕಾಲ ವಿಚಾರಣೆ ನಡೆಸಿರುವ ದೆಹಲಿ ಪೊಲೀಸ್ ಆರ್ಥಿಕ ಅಪರಾಧ ವಿಭಾಗದ ಅಧಿಕಾರಿಗಳು, ಫರ್ನಾಂಡೀಸ್ ಅವರನ್ನು ಚಂದ್ರಶೇಖರ್ ಗೆ ಪರಿಚಯಿಸಿದ ನಟಿ ನೋರ್ ಫತೇಹಿ  ಗುರುವಾರ ವಿಚಾರಣೆಗೆ ಹಾಜರಾಗಲು ಸಮನ್ಸ್ ನೀಡಿದ್ದಾರೆ.

ಶ್ರೀಲಂಕಾದ ಜಾಕ್ವೆಲಿನ್ ಫರ್ನಾಂಡೀಸ್ ಮೂರನೇ ಬಾರಿ ಸಮನ್ಸ್ ನೀಡಿದ ನಂತರ ವಿಚಾರಣೆಗೆ ಹಾಜರಾಗಿದ್ದರು. ಚಂದ್ರಶೇಖರ್‌ಗೆ ಸಂಬಂಧಿಸಿದ ಬಹುಕೋಟಿ ಹಣ ವರ್ಗಾವಣೆ ಪ್ರಕರಣದಲ್ಲಿ ಫರ್ನಾಂಡೀಸ್ ಅವರ ಪಾತ್ರ ಮತ್ತಿತರ ವಿಷಯಗಳ ಜೊತೆಗೆ ಅವರು  ಪಡೆದ ಉಡುಗೊರೆಗಳ ಬಗ್ಗೆ ಫರ್ನಾಂಡೀಸ್ ವಿಚಾರಣೆ ನಡೆಸಲಾಗಿದೆ ಎಂದು ವಿಶೇಷ ಪೊಲೀಸ್ ಆಯುಕ್ತ (ಅಪರಾಧ) ರವೀಂದ್ರ ಯಾದವ್ ಹೇಳಿದ್ದಾರೆ.

ಫರ್ನಾಂಡಿಸ್ ಮತ್ತು ಇರಾನಿ ಒಟ್ಟಿಗೆ ವಿಚಾರಣೆಗೆ ಹಾಜರಾಗಿದ್ದು, ಕೇಳಿದ ಪ್ರಶ್ನೆಗಳಿಗೆಲ್ಲಾ ಉತ್ತರಿಸಿದ್ದಾರೆ.  ಆಕೆಯನ್ನು ಮತ್ತೆ ವಿಚಾರಣೆಗೆ ಕರೆಯಲಾಗುವುದು ಆದರೆ ದಿನಾಂಕವನ್ನು ಇನ್ನೂ ನಿಗದಿಪಡಿಸಲಾಗಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಏಜೆನ್ಸಿ ಈಗಾಗಲೇ ನೋರಾ ಫತೇಹಿಯನ್ನು ಆರರಿಂದ ಏಳು ಗಂಟೆಗಳ ಕಾಲ ವಿಚಾರಣೆಗೊಳಪಡಿಸಿದೆ ಮತ್ತು ಆಕೆಯ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆಯಾದರೂ ಕೆಲವು ಉತ್ತರವಿಲ್ಲದ ಪ್ರಶ್ನೆಗಳು" ಇರುವುದರಿಂದ ಗುರುವಾರ ಅವಳನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗುವುದು ಎಂದು ಅವರು ಹೇಳಿದರು.

ಆದಾಗ್ಯೂ, ಇಬ್ಬರು ನಟಿಯರು ನಡುವೆ ಯಾವುದೇ ನೇರ ಸಂಪರ್ಕ ಹೊಂದಿರುವುದನ್ನು ಅಧಿಕಾರಿ ನಿರಾಕರಿಸಿದ್ದಾರೆ.  ಪ್ರಸ್ತುತ ಜೈಲಿನಲ್ಲಿರುವ ಚಂದ್ರಶೇಖರ್ ಮಾಜಿ ಫೋರ್ಟಿಸ್ ಹೆಲ್ತ್‌ಕೇರ್ ಪ್ರವರ್ತಕ ಶಿವಿಂದರ್ ಮೋಹನ್ ಸಿಂಗ್ ಅವರ ಪತ್ನಿ ಅದಿತಿ ಸಿಂಗ್ ಅವರಂತಹ ಉನ್ನತ ವ್ಯಕ್ತಿಗಳು ಸೇರಿದಂತೆ ಅನೇಕ ಮಂದಿಯನ್ನು ವಂಚಿಸಿದ ಆರೋಪ ಹೊತ್ತಿದ್ದಾರೆ. ಈ ಪ್ರಕರಣದಲ್ಲಿ ಫತೇಹಿ ಅವರನ್ನು ಜಾರಿ ನಿರ್ದೇಶನಾಲಯ ಈ ಹಿಂದೆ ವಿಚಾರಣೆ ನಡೆಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT