ನೋರಾ ಫತೇಹಿ 
ಬಾಲಿವುಡ್

200 ಕೋಟಿ ಸುಲಿಗೆ ಪ್ರಕರಣ: ಬಾಲಿವುಡ್ ನಟಿ ನೋರಾ ಫತೇಹಿಗೆ 30 ಪ್ರಶ್ನೆ ಕೇಳಿದ ದೆಹಲಿ ಪೊಲೀಸರು

ವಂಚಕ ಸುಕೇಶ್ ಚಂದ್ರಶೇಖರ್ ಗೆ ಸಂಬಂಧಿಸಿದಂತೆ ಸುಲಿಗೆ ಪ್ರಕರಣವೊಂದರ ತನಿಖೆಯ ಭಾಗವಾಗಿ ದೆಹಲಿ ಪೊಲೀಸ್ ಆರ್ಥಿಕ ಅಪರಾಧ ವಿಭಾಗದಿಂದ ಇಂದು ಸುಮಾರು 5 ಗಂಟೆಗಳ ಕಾಲ ಬಾಲಿವುಡ್ ನಟಿ ನೋರಾ ಫತೇಹಿ ಅವರ ವಿಚಾರಣೆ ನಡೆಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ನವದೆಹಲಿ: ವಂಚಕ ಸುಕೇಶ್ ಚಂದ್ರಶೇಖರ್ ಗೆ ಸಂಬಂಧಿಸಿದಂತೆ ಸುಲಿಗೆ ಪ್ರಕರಣವೊಂದರ ತನಿಖೆಯ ಭಾಗವಾಗಿ ದೆಹಲಿ ಪೊಲೀಸ್ ಆರ್ಥಿಕ ಅಪರಾಧ ವಿಭಾಗದಿಂದ ಇಂದು ಸುಮಾರು 5 ಗಂಟೆಗಳ ಕಾಲ ಬಾಲಿವುಡ್ ನಟಿ ನೋರಾ ಫತೇಹಿ ಅವರ ವಿಚಾರಣೆ ನಡೆಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಪ್ರಕರಣದಲ್ಲಿ ಆಕೆಯ ಪಾತ್ರದ ಆರೋಪದಿಂದಾಗಿ ದೆಹಲಿ ಪೊಲೀಸರು ಎರಡನೇ ಬಾರಿಗೆ ಸಮನ್ಸ್ ನೀಡಿದ್ದರು.  ಉದ್ಯಮಿ ಚಂದ್ರಶೇಖರ್ ನನ್ನು ಪರಿಚಯಿಸಿದ ಪಿಂಕಿ ಇರಾನಿ ಅವರೊಂದಿಗೆ ಫತೇಹಿ ವಿಚಾರಣೆ ನಡೆಸಲಾಯಿತು.  ನಿನ್ನೆ ಕೂಡಾ ಜಾಕ್ವೆಲಿನ್ ಫರ್ನಾಂಡಿಸ್ ಅವರೊಂದಿಗೆ ಇರಾನಿ ವಿಚಾರಣೆ ನಡೆಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಮಂದಿರ ಮಾರ್ಗದಲ್ಲಿರುವ ಆರ್ಥಿಕ ಅಪರಾಧ ವಿಭಾಗದ ಕಚೇರಿಯಲ್ಲಿ ಇರಾನಿ ಮತ್ತು ಫತೇಹಿ ಇಬ್ಬರನ್ನು ವಿಚಾರಣೆ ನಡೆಸಲಾಗಿದೆ. "ಫತೇಹಿ, ಆಕೆಯ ಸೋದರ ಮಾವ ಮೆಹಬೂಬ್ ಅಲಿಯಾಸ್ ಬಾಬಿ ಮತ್ತು ಇರಾನಿ ಅವರನ್ನು ಸುಮಾರು ಐದು ಗಂಟೆಗಳ ಕಾಲ ವಿಚಾರಣೆ ನಡೆಸಲಾಯಿತು. ಅವರೆಲ್ಲರೂ ತನಿಖೆಯ ಸಮಯದಲ್ಲಿ ಸಹಕರಿಸಿದರು ಮತ್ತು ಅವರಿಗೆ ಊಟವನ್ನು ಒದಗಿಸಲಾಯಿತು.  ಇರಾನಿ ಫತೇಹಿಯ ಸೋದರಮಾವನನ್ನೂ ಸಂಪರ್ಕಿಸಿದ್ದಾಗಿನಿಂದ ಮೂವರೂ ಪರಸ್ಪರ ಮುಖಾಮುಖಿಯಾಗಿದ್ದರು ಎಂದು ಅವರು ಹೇಳಿದರು.

 ಫತೇಹಿ ವಿಚಾರಣೆಯನ್ನು ಈಗಾಗಲೇ ನಡೆಸಲಾಗಿತ್ತು. ಆದರೆ ಚಂದ್ರಶೇಖರ್  ಪತ್ನಿ ಚೆನ್ನೈನಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ ನಂತರ, ಅವರಿಂದ  ನಿಜವಾಗಿಯೂ ಕಾರನ್ನು ಯಾರು ಪಡೆದರು ಮತ್ತು ಫತೇಹಿ ಮಾವನ  ಬ್ಯಾಂಕ್ ಸ್ಟೇಟ್‌ಮೆಂಟ್ ವಿವರಗಳನ್ನು  ಪಡೆಯಲು ನಾವು ಬಯಸಿದ್ದೇವು.  ಫತೇಹಿ ಮತ್ತು ಆಕೆಯ ಸೋದರ ಮಾವನಿಗೆ 30 ಪ್ರಶ್ನೆಗಳಿದ್ದ ಪ್ರಶ್ನಾವಳಿಯನ್ನು ನೀಡಲಾಯಿತು. ಅವರು ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದರು ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

SCROLL FOR NEXT