ಅರ್ಮಾನ್ ಕೊಹ್ಲಿ 
ಬಾಲಿವುಡ್

ಡ್ರಗ್ಸ್ ಪ್ರಕರಣ: ಬಾಲಿವುಡ್ ನಟ ಅರ್ಮಾನ್ ಕೊಹ್ಲಿಗೆ ಷರತ್ತು ಬದ್ಧ ಜಾಮೀನು

ಡ್ರಗ್ಸ್ ಪ್ರಕರಣ ಸಂಬಂಧ ಎನ್‌ಸಿಬಿಯಿಂದ ಬಂಧನಕ್ಕೊಳಗಾಗಿದ್ದ ಬಾಲಿವುಡ್ ನಟ ಅರ್ಮಾನ್ ಕೊಹ್ಲಿಗೆ ಬಾಂಬೆ ಹೈಕೋರ್ಟ್ ಮಂಗಳವಾರ ಷರತ್ತು ಬದ್ಧ ಜಾಮೀನು ನೀಡಿದೆ. ನ್ಯಾಯಮೂರ್ತಿ ನಿತಿನ್ ಸಾಂಬ್ರೆ ಅವರ ಪೀಠವು ಒಂದು ಲಕ್ಷ...

ಮುಂಬೈ: ಡ್ರಗ್ಸ್ ಪ್ರಕರಣ ಸಂಬಂಧ ಎನ್‌ಸಿಬಿಯಿಂದ ಬಂಧನಕ್ಕೊಳಗಾಗಿದ್ದ ಬಾಲಿವುಡ್ ನಟ ಅರ್ಮಾನ್ ಕೊಹ್ಲಿಗೆ ಬಾಂಬೆ ಹೈಕೋರ್ಟ್ ಮಂಗಳವಾರ ಷರತ್ತು ಬದ್ಧ ಜಾಮೀನು ನೀಡಿದೆ. ನ್ಯಾಯಮೂರ್ತಿ ನಿತಿನ್ ಸಾಂಬ್ರೆ ಅವರ ಪೀಠವು ಒಂದು ಲಕ್ಷ ರೂಪಾಯಿಗಳ ಶ್ಯೂರಿಟಿ ಮೇಲೆ ಜಾಮೀನು ನೀಡಿದೆ.

ಕೊಹ್ಲಿ ಮತ್ತೊಮ್ಮೆ ಇದೇ ರೀತಿಯ ಅಪರಾಧದಲ್ಲಿ ಭಾಗಿಯಾಗಿರುವುದು ಕಂಡುಬಂದರೆ, ಜಾಮೀನು ರದ್ದತಿಗೆ ಮುಂದಾಗಲು ಪ್ರಾಸಿಕ್ಯೂಷನ್‌ಗೆ ಸ್ವಾತಂತ್ರ್ಯವಿದೆ ಎಂದು ನ್ಯಾಯಾಲಯ ಹೇಳಿದೆ.

ಎನ್‌ಸಿಬಿ ಪರವಾಗಿ ವಾದ ಮಂಡಿಸಿದ ವಕೀಲ ಶ್ರೀರಾಮ್ ಶಿರ್ಸಾತ್, ಎನ್‌ಸಿಬಿ ಕಚೇರಿಗೆ ಹಾಜರಾಗುವಂತೆ ಕೊಹ್ಲಿಗೆ ಸೂಚಿಸುವಂತೆ ನ್ಯಾಯಾಲಯದ ಮುಂದೆ ಮನವಿ ಮಾಡಿದರು. ಪ್ರತಿ ತಿಂಗಳಿಗೊಮ್ಮೆ ಏಜೆನ್ಸಿಯ ದಕ್ಷಿಣ ಮುಂಬೈ ಕಚೇರಿಗೆ ಹಾಜರಾಗುವಂತೆ ನಟನಿಗೆ ಸೂಚಿಸಿದ ನ್ಯಾಯಮೂರ್ತಿ ಸಾಂಬ್ರೆ ಜಾಮೀನು ಮಂಜೂರು ಮಾಡಿದರು.

ಡ್ರಗ್ಸ್ ದಂಧೆಗೆ ಹಣಕಾಸು ಒದಗಿಸಿದ ಆರೋಪ ಮೇಲೆ ಕೊಹ್ಲಿಯನ್ನು ಕಳೆದ ವರ್ಷ ಆಗಸ್ಟ್ ನಲ್ಲಿ ನಾರ್ಕೋಟಿಕ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ)ಬಂಧಿಸಿತ್ತು. ಕೊಹ್ಲಿ ಪರ ವಾದ ಮಂಡಿಸಿದ ವಕೀಲರಾದ ತಾರಕ್ ಸಯಾದ್ ಮತ್ತು ಅಭಿಷೇಕ್ ಯೆಂಡೆ ಅವರು, ಕೊಹ್ಲಿ ಡ್ರಗ್ಸ್ ಸೇವಿಸಿದ್ದಾರೆ. ಆದರೆ ಡೀಲ್ ಮಾಡಿಲ್ಲ ಎಂದು ಹೇಳಿದ್ದಾರೆ. ಆದ್ದರಿಂದ ಆತನ ವಿರುದ್ಧ ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್‌ಸ್ಟೆನ್ಸ್ (ಎನ್‌ಡಿಪಿಎಸ್) ಕಾಯ್ದೆಯ ಕಠಿಣ ಸೆಕ್ಷನ್ ಗಳ ಅಡಿಯಲ್ಲಿ ಆರೋಪ ಹೊರಿಸಲಾಗುವುದಿಲ್ಲ ಎಂದು ಹೇಳಿದೆ.

ನೈಜೀರಿಯಾದ ಪ್ರಜೆ ಇಸ್ರೇಲ್ ಸ್ಯಾಮ್ ಅವರನ್ನು 55 ಗ್ರಾಂ ಮೆಫೆಡ್ರೋನ್ ಡ್ರಗ್ಸ್ ನೊಂದಿಗೆ ಎನ್‌ಸಿಬಿ ಬಂಧಿಸಿದೆ. ಕೊಹ್ಲಿ ಅವರ ಫೋನ್‌ ಪರಿಶೀಲಿಸಿದಾಗ ಇಸ್ರೇಲ್ ಸ್ಯಾಮ್ ನಿಂದ ಹಲವಾರು ಕರೆಗಳು ಮತ್ತು ಸಂದೇಶಗಳು ಬಂದಿವೆ, ಅವರು ನಿರಂತರವಾಗಿ ಸಂಪರ್ಕದಲ್ಲಿದ್ದರು ಎಂದು ಉಲ್ಲೇಖಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್