ಬಾಲಿವುಡ್ ನಟಿ ಪ್ರೀತಿ ಜಿಂಟಾ 
ಬಾಲಿವುಡ್

ಮುಂಬೈನಲ್ಲಿ ನಡೆದ ಎರಡು ಆಘಾತಕಾರಿ ಘಟನೆ ಹಂಚಿಕೊಂಡ ಪ್ರೀತಿ ಜಿಂಟಾ

ಬಾಲಿವುಡ್ ನಟಿ ಹಾಗೂ ಉದ್ಯಮಿ ಪ್ರೀತಿ ಜಿಂಟಾ ಅವರು ಇತ್ತೀಚೆಗೆ ವಾಣಿಜ್ಯ ನಗರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಎರಡು ಪ್ರತ್ಯೇಕ ಸಂದರ್ಭಗಳಲ್ಲಿ ಕಿರುಕುಳಕ್ಕೆ ಒಳಗಾಗಿದ್ದೇನೆ ಎಂದು ಹೇಳಿದ್ದು, ಈ ಘಟನೆಗಳಿಂದ ಆಘಾತಗೊಂಡಿದ್ದೇನೆ...

ಮುಂಬೈ: ಬಾಲಿವುಡ್ ನಟಿ ಹಾಗೂ ಉದ್ಯಮಿ ಪ್ರೀತಿ ಜಿಂಟಾ ಅವರು ಇತ್ತೀಚೆಗೆ ವಾಣಿಜ್ಯ ನಗರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಎರಡು ಪ್ರತ್ಯೇಕ ಸಂದರ್ಭಗಳಲ್ಲಿ ಕಿರುಕುಳಕ್ಕೆ ಒಳಗಾಗಿದ್ದೇನೆ ಎಂದು ಹೇಳಿದ್ದು, ಈ ಘಟನೆಗಳಿಂದ ಆಘಾತಗೊಂಡಿದ್ದೇನೆ ಎಂದಿದ್ದಾರೆ.

ಈ ಎರಡು ಘಟನೆ ಕುರಿತು ಇನ್‌ಸ್ಟಾಗ್ರಾಮ್‌ನಲ್ಲಿ ಬರೆದುಕೊಂಡಿರುವ ಜಿಂಟಾ, ಇತ್ತೀಚೆಗೆ ಪಾರ್ಕ್ ಒಂದಕ್ಕೆ ತನ್ನ ದೊಡ್ಡ ಮಗಳು ಗಿಯಾ ಅನ್ನು ಕರೆದೊಯ್ದಿದ್ದರಂತೆ. ಅಲ್ಲಿ ಮಹಿಳೆಯೊಬ್ಬರು ಗಿಯಾ ಜೊತೆ ಫೋಟೊ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ. ಆದರೆ ಪ್ರೀತಿ ಅದಕ್ಕೆ ಒಪ್ಪಿಗೆ ನೀಡಿಲ್ಲ. ಬಳಿಕ ಸುಮ್ಮನಾದ ಆ ಮಹಿಳೆ ಸ್ವಲ್ಪ ಹೊತ್ತಿನ ಬಳಿಕ ಬಲವಂತವಾಗಿ ಗಿಯಾಳ ತುಟಿಯ ಬಳಿ ಮುತ್ತಿಟ್ಟು ಓಡಿ ಹೋದಳಂತೆ. ಇದು ಪ್ರೀತಿಗೆ ಆಘಾತ ತಂದಿದೆ. ಮಗಳಿಗೆ ಮುತ್ತಿಟ್ಟು ಓಡಿಹೋದ ಮಹಿಳೆ ಐಶಾರಾಮಿ ಅಪಾರ್ಟ್​ಮೆಂಟ್​ನಲ್ಲಿ ವಾಸಿಸುತ್ತಾರೆ ಎಂದಿರುವ ಪ್ರೀತಿ, ‘ನಾನು ಸೆಲೆಬ್ರಿಟಿ ಆಗದೇ ಇದ್ದಿದ್ದರೆ ಅಲ್ಲಿ ಬೇರೆಯದೇ ಘಟನೆ ನಡೆಯುತ್ತಿತ್ತು, ಆದರೆ ಅಲ್ಲಿ ಸೀನ್ ಕ್ರಿಯೇಟ್ ಮಾಡಲು ನನಗೆ ಇಷ್ಟವಿರಲಿಲ್ಲ’ ಎಂದು ಹೇಳಿದ್ದಾರೆ.

ಎರಡನೇ ಘಟನೆಯನ್ನು ವಿವರಿಸಿದ ಐಪಿಎಲ್ ತಂಡ ಕಿಂಗ್ಸ್ ಇಲೆವೆನ್ ಪಂಜಾಬ್‌ನ ಸಹ-ಮಾಲೀಕರಾಗಿರುವ ನಟಿ, ವಿಮಾನ ನಿಲ್ದಾಣಕ್ಕೆ ಹೋಗಲು ಕಾರು ಹತ್ತಲು ಬಂದಾಗ ಅಂಗವಿಕಲ ವ್ಯಕ್ತಿಯೊಬ್ಬ ಬಂದು ನನಗೆ ಹಣ ಕೇಳಿದ. ಈ ಹಿಂದೆ ಹಲವು ಬಾರಿ ಆ ವ್ಯಕ್ತಿಗೆ ಹಣ ಕೊಟ್ಟಿದ್ದೇನೆ. ಆದರೆ ಈ ಬಾರಿ ನನ್ನ ಬಳಿ ನಗದು ಇರಲಿಲ್ಲ. ಕಾರ್ಡ್ ಮಾತ್ರವೇ ಇದೆ ಎಂದು ಹೇಳಿ ಹೊರಟುಬಿಟ್ಟೆ. ಆದರೆ ಆ ಅಂಗವಿಕಲ ವ್ಯಕ್ತಿ ನನ್ನ ಕಾರನ್ನು ಹಿಂಬಾಲಿಸುತ್ತಾ ಬಂದ, ನಾನು ಅವನಿಗೆ ಹಣ ಕೊಡದೇ ಇದ್ದುದ್ದಕ್ಕೆ ಬೈಯ್ಯಲು ಆರಂಭಿಸಿದ. ಬಳಿಕ ಕಾರಿನಲ್ಲಿ ನನ್ನ ಜೊತೆಗಿದ್ದ ಮಹಿಳೆ ಅವನಿಗೆ ತನ್ನ ಪರ್ಸ್​ನಲ್ಲಿದ್ದ ಸ್ವಲ್ಪ ಹಣ ಕೊಟ್ಟರು. ಆದರೆ ಆ ವ್ಯಕ್ತಿ ಹಣವನ್ನು ಎಸೆದುಬಿಟ್ಟ, ಇಷ್ಟು ಹಣ ಸಾಕಾಗುವುದಿಲ್ಲ, ಇನ್ನಷ್ಟು ಹಣ ಕೊಡುವಂತೆ ಪೀಡಿಸಲು ಆರಂಭಿಸಿದ. ಬೈಯ್ಯಲು ಆರಂಭಿಸಿದ ಎಂದು ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT