ಶಿಲ್ಪಾ ಶೆಟ್ಟಿಗೆ ಮುತ್ತು ಕೊಟ್ಟಿದ್ದ ರಿಚರ್ಡ್ ಗೇರ್ 
ಬಾಲಿವುಡ್

'ಶಿಲ್ಪಾ ಶೆಟ್ಟಿಗೆ ಮುತ್ತು ಕೊಟ್ಟಿದ್ದು ರಿಚರ್ಡ್ ಗೇರ್, ಆಕೆ ಅಶ್ಲೀಲವಾಗಿ ವರ್ತಿಸಿಲ್ಲ': ಮುಂಬೈ ಕೋರ್ಟ್ ತೀರ್ಪು

ಸಾರ್ವಜನಿಕ ಸ್ಥಳಗಳಲ್ಲಿ ಅಥವಾ ಸಾರ್ವಜನಿಕ ಸಾರಿಗೆಯಲ್ಲಿ ಮಹಿಳೆಯೊಬ್ಬರ ಮೇಲೆ ಅಸಭ್ಯವಾಗಿ ವರ್ತಿಸಿದರೆ ಅದರಲ್ಲಿ ಮಹಿಳೆಯ ಪಾತ್ರವಿರುತ್ತದೆ ಎಂದು ಹೇಳಲು ಸಾಧ್ಯವಿಲ್ಲ ಮತ್ತು ಆಕೆ ತಪ್ಪಿತಸ್ಥೆ ಎಂದು ಆಕೆಯ ವಿರುದ್ಧ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಮುಂಬೈ ನ್ಯಾಯಾಲಯವು ತೀರ್ಪು ನೀಡಿದೆ.

ಮುಂಬೈ: ಸಾರ್ವಜನಿಕ ಸ್ಥಳಗಳಲ್ಲಿ ಅಥವಾ ಸಾರ್ವಜನಿಕ ಸಾರಿಗೆಯಲ್ಲಿ ಮಹಿಳೆಯೊಬ್ಬರ ಮೇಲೆ ಅಸಭ್ಯವಾಗಿ ವರ್ತಿಸಿದರೆ ಅದರಲ್ಲಿ ಮಹಿಳೆಯ ಪಾತ್ರವಿರುತ್ತದೆ ಎಂದು ಹೇಳಲು ಸಾಧ್ಯವಿಲ್ಲ ಮತ್ತು ಆಕೆ ತಪ್ಪಿತಸ್ಥೆ ಎಂದು ಆಕೆಯ ವಿರುದ್ಧ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಮುಂಬೈ ನ್ಯಾಯಾಲಯವು 2007 ರ ಹಾಲಿವುಡ್ ನಟ ರಿಚರ್ಡ್ ಗೇರ್ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿಗೆ ಮುತ್ತುಕೊಟ್ಟ ಪ್ರಕರಣದಲ್ಲಿ ತೀರ್ಪು ನೀಡಿದೆ.

2007ರಲ್ಲಿ ಸಾರ್ವಜನಿಕ ವೇದಿಕೆ ಮೇಲೆ ಹಾಲಿವುಡ್ ನಟ ರಿಚರ್ಡ್ ಗೇರ್ ನಟಿ ಶಿಲ್ಪಾ ಶೆಟ್ಟಿಗೆ ಮುತ್ತು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ಪ್ರಕಟಿಸುವ ವೇಳೆ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಎಸ್ ಸಿ ಜಾಧವ್, ಈ ಘಟನೆಯಲ್ಲಿ ಶಿಲ್ಪಾ ಶೆಟ್ಟಿ ಕಡೆಯಿಂದ ಅಶ್ಲೀಲತೆ ಅಥವಾ ಅಸಭ್ಯತೆ ಕಂಡುಬರುವುದಿಲ್ಲ ಎಂದು ಹೇಳಿ ಮ್ಯಾಜಿಸ್ಟ್ರೇಟ್ ಕೋರ್ಟ್ ನ ಆದೇಶವನ್ನು ಎತ್ತಿಹಿಡಿದರು.

ನ್ಯಾಯಾಧೀಶರ ಆದೇಶ ವಿವರವಾಗಿ ಇಂದು ಲಭ್ಯವಾಗಿದೆ. 2007ರಲ್ಲಿ ರಾಜಸ್ತಾನದಲ್ಲಿ ಏಡ್ಸ್ ಜಾಗೃತಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ವೇಳೆ ಹಾಲಿವುಡ್ ನಟ ರಿಚರ್ಡ್ ಗೇರ್ ನಟಿ ಶಿಲ್ಪಾ ಶೆಟ್ಟಿಗೆ ಸಾರ್ವಜನಿಕ ವೇದಿಕೆ ಮೇಲೆ ಕಿಸ್ ನೀಡಿದ್ದರು.

ಶಿಲ್ಪಾ ಶೆಟ್ಟಿ ವಿರುದ್ಧ ಐಪಿಸಿ ಸೆಕ್ಷನ್ 292 ರ ಅಡಿಯಲ್ಲಿ ಅಶ್ಲೀಲತೆ, ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ಮಹಿಳೆಯರ ಅಸಭ್ಯ ಪ್ರಾತಿನಿಧ್ಯ (ನಿಷೇಧ) ಕಾಯ್ದೆಯಡಿಯಲ್ಲಿ ಆರೋಪಗಳನ್ನು ಹೊರಿಸಲು ಸಾಕಷ್ಟು ಪುರಾವೆಗಳಿವೆ ಎಂದು ಪ್ರಾಸಿಕ್ಯೂಷನ್ ಪರ ವಕೀಲರು ವಾದಿಸಿದ್ದರು. ಮ್ಯಾಜಿಸ್ಟ್ರೇಟ್ ಆದೇಶವನ್ನು ರದ್ದುಗೊಳಿಸುವಂತೆ ಕೋರಿದ್ದರು. 

ಆದರೆ, ಶಿಲ್ಪಾ ಶೆಟ್ಟಿ ಪರ ವಕೀಲ ಪ್ರಶಾಂತ್ ಪಾಟೀಲ್ ಅವರು ಕೆಳ ನ್ಯಾಯಾಲಯದ ಆದೇಶವು ಸರಿಯಾಗಿದ್ದು ಕಾನೂನುಬದ್ಧವಾಗಿದೆ ಎಂದು ವಾದಿಸಿದರು. ಆರೋಪಗಳನ್ನು ರೂಪಿಸಲು ಪುರಾವೆಗಳಿಲ್ಲ ಮತ್ತು ಸರಿಯಾದ ಕ್ರಮದಲ್ಲಿಲ್ಲ. ಹೀಗಾಗಿ ಪರಿಷ್ಕರಣೆ ಅರ್ಜಿಯನ್ನು ವಜಾಗೊಳಿಸಬೇಕು ಎಂದು ಪಾಟೀಲ್ ವಾದಿಸಿದರು.

ಎರಡೂ ಕಡೆಯ ವಾದವನ್ನು ಆಲಿಸಿದ ನಂತರ, ಏಪ್ರಿಲ್ 3 ರಂದು ನ್ಯಾಯಾಲಯವು, “ಮಹಿಳೆಯನ್ನು ರಸ್ತೆಯಲ್ಲಿ ಹಿಡಿಯುವುದು ಅಥವಾ ಸಾರ್ವಜನಿಕ ಸಾರಿಗೆಯಲ್ಲಿ ಸ್ಪರ್ಶಿಸಿದರೆ ಮಹಿಳೆ ಅದರಲ್ಲಿ ಭಾಗಿಯಾಗಿದ್ದಾಳೆ ಎಂದು ದೂಷಿಸಿ ಆಕೆ ತಪ್ಪಿತಸ್ಥಳು ಎಂದು ಹೇಳಲು ಸಾಧ್ಯವಿಲ್ಲ. ಆಕೆಯನ್ನು ಕಾನೂನು ಕ್ರಮಕ್ಕೆ ಹೊಣೆಗಾರರನ್ನಾಗಿ ಮಾಡುವುದು ಅಪರಾಧವಾಗುತ್ತದೆ ಎಂದು ಹೇಳಿತು. 

ಶಿಲ್ಪಾ ಶೆಟ್ಟಿ ಕಡೆಯಿಂದ ಅಶ್ಲೀಲತೆ ಕಂಡುಬರುತ್ತಿಲ್ಲ. ದೂರುದಾರರ ಪ್ರಾಥಮಿಕ ಸಾಕ್ಷ್ಯದಲ್ಲಿ ಯಾವುದೇ ದಾಖಲೆಗಳಿಲ್ಲ ಎಂದು ನ್ಯಾಯಾಧೀಶರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

SCROLL FOR NEXT