ವೈಷ್ಣೋದೇವಿ ದರ್ಶನ ಪಡೆದ ಶಾರುಖ್ ಖಾನ್ 
ಬಾಲಿವುಡ್

ಜವಾನ್ ಬಿಡುಗಡೆಗೂ ಮುನ್ನ ವೈಷ್ಣೋದೇವಿ ದರ್ಶನ ಪಡೆದ ಶಾರುಖ್ ಖಾನ್

ಸೂಪರ್ ಸ್ಟಾರ್ ಶಾರುಖ್ ಖಾನ್  ತಮ್ಮ ಬಹು ನಿರೀಕ್ಷಿತ ಚಿತ್ರ "ಜವಾನ್" ಬಿಡುಗಡೆಗೂ ಮುನ್ನ ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ತ್ರಿಕೂಟ ಬೆಟ್ಟಗಳ ಮೇಲಿರುವ ಮಾತಾ ವೈಷ್ಣೋ ದೇವಿಯ ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸಿದರು.

ಮುಂಬೈ: ಸೂಪರ್ ಸ್ಟಾರ್ ಶಾರುಖ್ ಖಾನ್  ತಮ್ಮ ಬಹು ನಿರೀಕ್ಷಿತ ಚಿತ್ರ "ಜವಾನ್" ಬಿಡುಗಡೆಗೂ ಮುನ್ನ ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ತ್ರಿಕೂಟ ಬೆಟ್ಟಗಳ ಮೇಲಿರುವ ಮಾತಾ ವೈಷ್ಣೋ ದೇವಿಯ ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸಿದರು.

58 ವರ್ಷದ ನಟ ಶಾರುಖ್ ಖಾನ್ ಮಂಗಳವಾರ ತಡರಾತ್ರಿ ದೇಗುಲಕ್ಕೆ ಬಂದು ದೇವಿಯ ದರ್ಶನ ಪಡೆದಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. "ಶಾರುಖ್ ಖಾನ್ ಮಂಗಳವಾರ ಸಂಜೆ ಬೇಸ್ ಕ್ಯಾಂಪ್ ಕತ್ರಾ ತಲುಪಿದರು ಮತ್ತು ರಾತ್ರಿ 11.40 ರ ಸುಮಾರಿಗೆ ದೇಗುಲವನ್ನು ತಲುಪಲು ಹೊಸ ತಾರಾಕೋಟೆ ಮಾರ್ಗವನ್ನು ಬಳಸಿದರು. ಅವರು ಪ್ರಾರ್ಥನೆ ಸಲ್ಲಿಸಿ ತಕ್ಷಣವೇ ತೆರಳಿದರು" ಎಂದು ಅಧಿಕಾರಿ ಹೇಳಿದರು.

ದೇಗುಲದಲ್ಲಿರುವ ನಟನನ್ನು ತೋರಿಸುವ ಸಂಕ್ಷಿಪ್ತ ವೀಡಿಯೊ ಬಿಡುಗಡೆಯಾಗಿದ್ದು, ಶಾರುಖ್ ನೀಲಿ ಬಣ್ಣದ ಜಾಕೆಟ್ ಧರಿಸಿದ್ದರು. ಭಕ್ತರಿಗೆ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಶಾರುಖ್ ಖಾನ್ ಅವರ ಮುಖವನ್ನು ಸಂಪೂರ್ಣವಾಗಿ ಮುಚ್ಚಲಾಗಿತ್ತು. ಈ ಕುರಿತ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ವೈಷ್ಣೋದೇವಿ ದೇಗುಲ ಮಂಡಳಿಯ ಅಧಿಕಾರಿಗಳು, ಕೆಲವು ಪೊಲೀಸರು ಮತ್ತು ಸೂಪರ್‌ಸ್ಟಾರ್ ಅವರ ವೈಯಕ್ತಿಕ ಸಿಬ್ಬಂದಿಯನ್ನು ಕ್ಲಿಪ್‌ನಲ್ಲಿ ಕಾಣಬಹುದು.

ಒಂಬತ್ತು ತಿಂಗಳಲ್ಲಿ ಶಾರುಖ್ ವೈಷ್ಣೋದೇವಿಗೆ ಭೇಟಿ ನೀಡುತ್ತಿರುವುದು ಇದು ಎರಡನೇ ಬಾರಿ. ನಟ ಈ ಹಿಂದೆ ಡಿಸೆಂಬರ್ 2022 ರಲ್ಲಿ ಅವರ ಬ್ಲಾಕ್‌ಬಸ್ಟರ್ ಹಿಟ್ ಚಿತ್ರ "ಪಠಾನ್" ಬಿಡುಗಡೆಗೆ ಒಂದು ತಿಂಗಳ ಮೊದಲು ದೇವಾಲಯಕ್ಕೆ ಭೇಟಿ ನೀಡಿದ್ದರು.

ಇನ್ನು "ಜವಾನ್", ಹೈ-ಆಕ್ಟೇನ್ ಆಕ್ಷನ್ ಥ್ರಿಲ್ಲರ್ ಚಿತ್ರವಾಗಿದ್ದು, ಖ್ಯಾತ ತಮಿಳು ಚಲನಚಿತ್ರ ನಿರ್ದೇಶಕ ಅಟ್ಲೀ ಜವಾನ್ ಚಿತ್ರವನ್ನು ನಿರ್ದೇಶಿಸಿದ್ದಾರೆ. ಇದು ಸೆಪ್ಟೆಂಬರ್ 7 ರಂದು ಥಿಯೇಟರ್‌ಗಳಿಗೆ ಬರಲಿದೆ. ಚಿತ್ರದಲ್ಲಿ ನಯನತಾರಾ, ವಿಜಯ್ ಸೇತುಪತಿ, ಪ್ರಿಯಾಮಣಿ ಮತ್ತು ಸಾನ್ಯಾ ಮಲ್ಹೋತ್ರಾ ಸಹ ನಟಿಸಿದ್ದಾರೆ. ದೀಪಿಕಾ ಪಡುಕೋಣೆ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸದ್ಯದಲ್ಲೇ ಮೋದಿ ಸಂಪುಟ ಪುನರ್ ರಚನೆ: ಅಮಿತ್ ಶಾಗೆ ಉಪ ಪ್ರಧಾನಿ ಪಟ್ಟ? ವರದಿಗಳು

ಶ್ರೀರಂಗಪಟ್ಟಣದಲ್ಲಿ ಬೃಹತ್ ಭೂ ಹಗರಣ: ಬರೋಬ್ಬರಿ 200 ಎಕರೆ ಸರ್ಕಾರಿ ಭೂಮಿ ಕಬಳಿಸಲು ನಕಲಿ ದಾಖಲೆ ಸೃಷ್ಟಿ; 9 ಜನರ ಬಂಧನ!

ಆಗ್ರಾ: ಸೋನಂ, ಸಿಯಾ ಆಯ್ತು, ಈಗ ರೂಬಿ; ಪತಿಯನ್ನು ಕೊಂದು, ಶವವನ್ನು ಬಾತ್ ರೂಂನ ಟೈಲ್ಸ್ ಕೆಳಗೆ ಹೂತು ಹಾಕಿದ್ದ ಮಹಿಳೆಯ ಬಂಧನ!

ಘೋರ ದುರಂತ: ಬಾವಿಗೆ ಬಿದ್ದ ಹೋರಿ ರಕ್ಷಿಸಲು ಹೋಗಿ ಒಂದೇ ಕುಟುಂಬದ ಮೂವರು ದಾರುಣ ಸಾವು!

Video: ವಿಶ್ವದ ಹಲವು ದೇಶಗಳು ಯುವಕರಿಗೆ ತರಬೇತಿ ನೀಡಲು RSS ಸಹಕಾರ ಕೇಳುತ್ತಿವೆ: ಮೋಹನ್ ಭಾಗವತ್