ಐಶ್ವರ್ಯ ರೈ 
ಬಾಲಿವುಡ್

ವರ್ಷಗಳಿಂದ ಅತ್ತೆ-ಸೊಸೆ ನಡುವೆ ಮಾತಿಲ್ಲ: ಮಗಳೊಂದಿಗೆ 'ಬಚ್ಚನ್' ಮನೆಯಿಂದ ಹೊರಬಂದ್ರಾ ಐಶ್ವರ್ಯಾ ರೈ?

ಐಶ್ವರ್ಯಾ ರೈ ಬಚ್ಚನ್ ಮತ್ತು ಅಭಿಷೇಕ್ ಬಚ್ಚನ್ ದಾಂಪತ್ಯದಲ್ಲಿ ನಡೆಯುತ್ತಿರುವ ಬಿರುಕಿನ ಸುದ್ದಿಯ ಗಾಸಿಪ್ ಇದೀಗ ನಿಜವಾಗುತ್ತಿದೆ ಎಂದು ಹೇಳಲಾಗಿದ್ದು. ಬಚ್ಚನ್ ಮನೆಯಿಂದ ಐಶ್ವರ್ಯಾ ಬಚ್ಚನ್ ತಮ್ಮ ಮಗಳೊಂದಿಗೆ ಹೊರ ಬಂದಿದ್ದಾರೆ ಎಂದು ಸುದ್ದಿಯಾಗಿದೆ.

ಮುಂಬೈ: ಐಶ್ವರ್ಯಾ ರೈ ಬಚ್ಚನ್ ಮತ್ತು ಅಭಿಷೇಕ್ ಬಚ್ಚನ್ ದಾಂಪತ್ಯದಲ್ಲಿ ನಡೆಯುತ್ತಿರುವ ಬಿರುಕಿನ ಸುದ್ದಿಯ ಗಾಸಿಪ್ ಇದೀಗ ನಿಜವಾಗುತ್ತಿದೆ ಎಂದು ಹೇಳಲಾಗಿದ್ದು. ಬಚ್ಚನ್ ಮನೆಯಿಂದ ಐಶ್ವರ್ಯಾ ಬಚ್ಚನ್ ತಮ್ಮ ಮಗಳೊಂದಿಗೆ ಹೊರ ಬಂದಿದ್ದಾರೆ ಎಂದು ಸುದ್ದಿಯಾಗಿದೆ.

ಜೂಮ್ ವೆಬ್ ಸೈಟ್ ವರದಿ ಪ್ರಕಾರ ಐಶ್ವರ್ಯಾ ರೈ ತನ್ನ ಮಗಳು ಆರಾಧ್ಯ ಬಚ್ಚನ್ ನೊಂದಿಗೆ ಬಚ್ಚನ್ ಮನೆ ಜಲ್ಸಾದಿಂದ ಹೊರಗೆ ಬಂದಿದ್ದಾರೆ. ಇದೀಗ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ ಎಂದು ಹೇಳಲಾಗಿದೆ.

ಮಾಧ್ಯಮಗಳ ವರದಿಯ ಪ್ರಕಾರ, ಐಶ್ವರ್ಯಾ ಮತ್ತು ಅವರ ಅತ್ತೆ ಜಯಾ ಬಚ್ಚನ್ ಕಳೆದ ಕೆಲವು ವರ್ಷಗಳಿಂದ ಯಾವುದೇ ರೀತಿಯ ಮಾತುಕತೆ ಇಲ್ಲದೆ ದೂರವಿದ್ದಾರೆ.ಆದರೆ ಅಭಿಷೇಕ್ ತನ್ನ ಹೆತ್ತವರಿಗೆ ನಿಷ್ಠೆ ಮತ್ತು ತನ್ನ ಹೆಂಡತಿ ಮತ್ತು ಮಗಳ ಬಗೆಗಿನ ಜವಾಬ್ದಾರಿಗಳನ್ನು ನಿಭಾಯಿಸುವ ಮೂಲಕ ಇಕ್ಕಟ್ಟಿನಲ್ಲಿ ಸಿಲುಕಿದ್ದಾರೆ.

ಈ ನಡುವೆ ಅಮಿತಾಬ್ ಬಚ್ಚನ್ ಮಗಳು ಶ್ವೇತಾ ಬಚ್ಚನ್ ಗಂಡನಿಂದ ದೂರವಾಗಿ ಇದೀಗ ಅಮಿತಾಬ್ ಬಚ್ಚನ್ ಮನೆಗೆ ಬಂದಿದ್ದು, ಈ ಗಲಾಟೆ ಮತ್ತಷ್ಟು ಹೆಚ್ಚಾಗಲು ಕಾರಣ ಎಂದು ಹೇಳಲಾಗಿದೆ. ಮಾಹಿತಿ ಪ್ರಕಾರ ಐಶ್ವರ್ಯ ರೈ ಮತ್ತು ಅಭಿಷೇಕ್ ಬಚ್ಚನ್ ವಿವಾಹ ವಿಚ್ಚೇದನ ಪಡೆಯುವ ಸಾಧ್ಯತೆಗಳು ತುಂಬಾ ಕಡಿಮೆ ಇದೆ. ಆದರೆ ಐಶ್ವರ್ಯಾ ಮಾತ್ರ ತನ್ನ ಮಗಳೊಂದಿಗೆ ಬಚ್ಚನ್ ಪ್ಯಾಮಿಲಿಯಿಂದ ದೂರ ಉಳಿಯಲಿದ್ದಾರೆ.

ಇದಕ್ಕೂ ಮೊದಲು ಅಮಿತಾಭ್ ಬಚ್ಚನ್ ಅವರು ಐಶ್ವರ್ಯಾ ಅವರ ಇನ್‌ಸ್ಟಾ ಅನ್ ಫಾಲೋ ಮಾಡಿದ ಬೆನ್ನಲ್ಲೇ, ಐಶ್ವರ್ಯಾ ಮತ್ತು ಅಭಿಷೇಕ್ ಡಿವೋರ್ಸ್ ಆಗಲಿದ್ದಾರೆಂಬ ಸುದ್ದಿ ಹರಡಿತ್ತು. ಐಶ್ವರ್ಯಾ ಬಚ್ಚನ್ ನಿವಾಸದಿಂದ ಹೊರಬಂದಿದ್ದಾರೆ. ಅವರು ಈಗ ತಮ್ಮ ಹೆಚ್ಚಿನ ಸಮಯವನ್ನು ತಮ್ಮ ತಾಯಿಯ ಮನೆಯಲ್ಲಿ ಕಳೆಯುತ್ತಾರೆ.

ಐಶ್ವರ್ಯಾ ಮತ್ತು ಅವರ ಅತ್ತೆ ಜಯಾ ಬಚ್ಚನ್ ಕಳೆದ ಕೆಲವು ವರ್ಷಗಳಿಂದ ಮಾತನಾಡುವುದನ್ನು ನಿಲ್ಲಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಉದ್ದೇಶಪೂರ್ವಕವಾಗಿ ಇಬ್ಬರು ಪರಸ್ಪರ ನಿರ್ಲಕ್ಷಿಸಿದ್ದಾರೆ ಎಂದು ಹಲವಾರು ವರದಿಗಳು ಹೇಳುತ್ತಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?