ಶಾರುಖ್ ಖಾನ್ 
ಬಾಲಿವುಡ್

ಕಾಂಜಾವಾಲಾ ಅಪಘಾತ: ಅಂಜಲಿ ಕುಟುಂಬಕ್ಕೆ ಸಹಾಯ ಹಸ್ತ ಚಾಚಿದ ಶಾರುಖ್ ಖಾನ್

ಕಾಂಜಾವಾಲಾ ಅಪಘಾತ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಡಿಸೆಂಬರ್ 31ರ ರಾತ್ರಿ ಸುಲ್ತಾನಪುರಿಯಲ್ಲಿ ಸಂಭವಿಸಿದ ಭಯಾನಕ ರಸ್ತೆ ಅಪಘಾತದಲ್ಲಿ ಅಂಜಲಿ ಸಿಂಗ್ ಸಾವನ್ನಪ್ಪಿದರು. ಇದೀಗ ಅಂಜಲಿ ಕುಟುಂಬಕ್ಕೆ ಬಾಲಿವುಡ್ ನಟ ಶಾರುಖ್ ಖಾನ್ ಸಹಾಯಹಸ್ತ ಚಾಚಿಸಿದ್ದಾರೆ.

ನವದೆಹಲಿ: ಕಾಂಜಾವಾಲಾ ಅಪಘಾತ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಡಿಸೆಂಬರ್ 31ರ ರಾತ್ರಿ ಸುಲ್ತಾನಪುರಿಯಲ್ಲಿ ಸಂಭವಿಸಿದ ಭಯಾನಕ ರಸ್ತೆ ಅಪಘಾತದಲ್ಲಿ ಅಂಜಲಿ ಸಿಂಗ್ ಸಾವನ್ನಪ್ಪಿದರು. ಇದೀಗ ಅಂಜಲಿ ಕುಟುಂಬಕ್ಕೆ ಬಾಲಿವುಡ್ ನಟ ಶಾರುಖ್ ಖಾನ್ ಸಹಾಯಹಸ್ತ ಚಾಚಿಸಿದ್ದಾರೆ. 

ಶಾರುಖ್ ಖಾನ್ ಅವರ ಮೀರ್ ಫೌಂಡೇಶನ್ ಅಂಜಲಿ ಸಿಂಗ್ ಅವರ ತಾಯಿಗೆ ಹಣವನ್ನು ದೇಣಿಗೆ ನೀಡಿದೆ. ವರದಿಗಳ ಪ್ರಕಾರ, ಅಂಜಲಿ ಕುಟುಂಬಕ್ಕೆ ಏಕೈಕ ಆಧಾರವಾಗಿದ್ದರು. ತಾಯಿ ಮತ್ತು ಒಡಹುಟ್ಟಿದವರಿಗೆ ನೆರವಾಗಿದ್ದರು. ಶಾರುಖ್ ಖಾನ್ ರ ಪ್ರತಿಷ್ಠಾನವು ಅಂಜಲಿ ಸಿಂಗ್ ಅವರ ತಾಯಿಯ ಆರೋಗ್ಯಕ್ಕೆ ಸಹಾಯ ಮಾಡಲು ಮತ್ತು ಅಂಜಲಿಯ ಒಡಹುಟ್ಟಿದವರಿಗೆ ಆರ್ಥಿಕ ಸಹಾಯ ಮಾಡಿದೆ ಎಂದು ವರದಿಯಾಗಿದೆ. 

ಮೀರ್ ಫೌಂಡೇಶನ್ ಅಧಿಕೃತ ಹೇಳಿಕೆಯಲ್ಲಿ, 'ಶಾರುಖ್ ಖಾನ್ ಅವರ ಮೀರ್ ಫೌಂಡೇಶನ್ ಅಂಜಲಿ ಸಿಂಗ್ ಅವರ ಕುಟುಂಬಕ್ಕೆ ಬಹಿರಂಗಪಡಿಸದ ಮೊತ್ತವನ್ನು ದೇಣಿಗೆ ನೀಡಿದೆ. ದೆಹಲಿಯ ಕಂಜಾವಾಲಾದಲ್ಲಿ 20 ವರ್ಷದ ಅಂಜಲಿ ಕಾರು ಡಿಕ್ಕಿಯಾಗಿ ಸಾವನ್ನಪ್ಪಿದ್ದಳು. 

ಅಂಜಲಿಯ ತಂದೆ ಎಂಟು ವರ್ಷಗಳ ಹಿಂದೆ ನಿಧನರಾಗಿದ್ದು ಅವರ ತಾಯಿ ಮೂತ್ರಪಿಂಡದ ಕಾಯಿಲೆಯಿಂದ ಬಳಲುತ್ತಿದ್ದಾರೆ. ಕೇವಲ 10ನೇ ತರಗತಿವರೆಗೆ ಓದಿರುವ ಅಂಜಲಿ ತನ್ನ ಕುಟುಂಬದ ಅಗತ್ಯಗಳನ್ನು ಪೂರೈಸಲು ಹಲವು ಚಿಕ್ಕಪುಟ್ಟ ಕೆಲಸಗಳನ್ನು ಮಾಡುತ್ತಿದ್ದಳು.

ಹೊಸ ವರ್ಷದಂದು ದೆಹಲಿಯ ಹೊರವಲಯದಲ್ಲಿ ಅಂಜಲಿ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಆಕೆ ಸ್ಕೂಟಿಯಲ್ಲಿ ಹೋಗುತ್ತಿದ್ದಾಗ ಬಲೆನೋ ಕಾರು ಆಕೆಗೆ ಡಿಕ್ಕಿ ಹೊಡೆದು 10 ಕಿ.ಮೀ.ವರೆಗೆ ವಾಹನದ ಕೆಳಗೆ ಎಳೆದೊಯ್ದಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT