ಶಾರುಖ್ ಖಾನ್ 
ಬಾಲಿವುಡ್

ಕಾಂಜಾವಾಲಾ ಅಪಘಾತ: ಅಂಜಲಿ ಕುಟುಂಬಕ್ಕೆ ಸಹಾಯ ಹಸ್ತ ಚಾಚಿದ ಶಾರುಖ್ ಖಾನ್

ಕಾಂಜಾವಾಲಾ ಅಪಘಾತ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಡಿಸೆಂಬರ್ 31ರ ರಾತ್ರಿ ಸುಲ್ತಾನಪುರಿಯಲ್ಲಿ ಸಂಭವಿಸಿದ ಭಯಾನಕ ರಸ್ತೆ ಅಪಘಾತದಲ್ಲಿ ಅಂಜಲಿ ಸಿಂಗ್ ಸಾವನ್ನಪ್ಪಿದರು. ಇದೀಗ ಅಂಜಲಿ ಕುಟುಂಬಕ್ಕೆ ಬಾಲಿವುಡ್ ನಟ ಶಾರುಖ್ ಖಾನ್ ಸಹಾಯಹಸ್ತ ಚಾಚಿಸಿದ್ದಾರೆ.

ನವದೆಹಲಿ: ಕಾಂಜಾವಾಲಾ ಅಪಘಾತ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಡಿಸೆಂಬರ್ 31ರ ರಾತ್ರಿ ಸುಲ್ತಾನಪುರಿಯಲ್ಲಿ ಸಂಭವಿಸಿದ ಭಯಾನಕ ರಸ್ತೆ ಅಪಘಾತದಲ್ಲಿ ಅಂಜಲಿ ಸಿಂಗ್ ಸಾವನ್ನಪ್ಪಿದರು. ಇದೀಗ ಅಂಜಲಿ ಕುಟುಂಬಕ್ಕೆ ಬಾಲಿವುಡ್ ನಟ ಶಾರುಖ್ ಖಾನ್ ಸಹಾಯಹಸ್ತ ಚಾಚಿಸಿದ್ದಾರೆ. 

ಶಾರುಖ್ ಖಾನ್ ಅವರ ಮೀರ್ ಫೌಂಡೇಶನ್ ಅಂಜಲಿ ಸಿಂಗ್ ಅವರ ತಾಯಿಗೆ ಹಣವನ್ನು ದೇಣಿಗೆ ನೀಡಿದೆ. ವರದಿಗಳ ಪ್ರಕಾರ, ಅಂಜಲಿ ಕುಟುಂಬಕ್ಕೆ ಏಕೈಕ ಆಧಾರವಾಗಿದ್ದರು. ತಾಯಿ ಮತ್ತು ಒಡಹುಟ್ಟಿದವರಿಗೆ ನೆರವಾಗಿದ್ದರು. ಶಾರುಖ್ ಖಾನ್ ರ ಪ್ರತಿಷ್ಠಾನವು ಅಂಜಲಿ ಸಿಂಗ್ ಅವರ ತಾಯಿಯ ಆರೋಗ್ಯಕ್ಕೆ ಸಹಾಯ ಮಾಡಲು ಮತ್ತು ಅಂಜಲಿಯ ಒಡಹುಟ್ಟಿದವರಿಗೆ ಆರ್ಥಿಕ ಸಹಾಯ ಮಾಡಿದೆ ಎಂದು ವರದಿಯಾಗಿದೆ. 

ಮೀರ್ ಫೌಂಡೇಶನ್ ಅಧಿಕೃತ ಹೇಳಿಕೆಯಲ್ಲಿ, 'ಶಾರುಖ್ ಖಾನ್ ಅವರ ಮೀರ್ ಫೌಂಡೇಶನ್ ಅಂಜಲಿ ಸಿಂಗ್ ಅವರ ಕುಟುಂಬಕ್ಕೆ ಬಹಿರಂಗಪಡಿಸದ ಮೊತ್ತವನ್ನು ದೇಣಿಗೆ ನೀಡಿದೆ. ದೆಹಲಿಯ ಕಂಜಾವಾಲಾದಲ್ಲಿ 20 ವರ್ಷದ ಅಂಜಲಿ ಕಾರು ಡಿಕ್ಕಿಯಾಗಿ ಸಾವನ್ನಪ್ಪಿದ್ದಳು. 

ಅಂಜಲಿಯ ತಂದೆ ಎಂಟು ವರ್ಷಗಳ ಹಿಂದೆ ನಿಧನರಾಗಿದ್ದು ಅವರ ತಾಯಿ ಮೂತ್ರಪಿಂಡದ ಕಾಯಿಲೆಯಿಂದ ಬಳಲುತ್ತಿದ್ದಾರೆ. ಕೇವಲ 10ನೇ ತರಗತಿವರೆಗೆ ಓದಿರುವ ಅಂಜಲಿ ತನ್ನ ಕುಟುಂಬದ ಅಗತ್ಯಗಳನ್ನು ಪೂರೈಸಲು ಹಲವು ಚಿಕ್ಕಪುಟ್ಟ ಕೆಲಸಗಳನ್ನು ಮಾಡುತ್ತಿದ್ದಳು.

ಹೊಸ ವರ್ಷದಂದು ದೆಹಲಿಯ ಹೊರವಲಯದಲ್ಲಿ ಅಂಜಲಿ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಆಕೆ ಸ್ಕೂಟಿಯಲ್ಲಿ ಹೋಗುತ್ತಿದ್ದಾಗ ಬಲೆನೋ ಕಾರು ಆಕೆಗೆ ಡಿಕ್ಕಿ ಹೊಡೆದು 10 ಕಿ.ಮೀ.ವರೆಗೆ ವಾಹನದ ಕೆಳಗೆ ಎಳೆದೊಯ್ದಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?