ಶಾರುಖ್ ಖಾನ್ 
ಬಾಲಿವುಡ್

ಕಾಂಜಾವಾಲಾ ಅಪಘಾತ: ಅಂಜಲಿ ಕುಟುಂಬಕ್ಕೆ ಸಹಾಯ ಹಸ್ತ ಚಾಚಿದ ಶಾರುಖ್ ಖಾನ್

ಕಾಂಜಾವಾಲಾ ಅಪಘಾತ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಡಿಸೆಂಬರ್ 31ರ ರಾತ್ರಿ ಸುಲ್ತಾನಪುರಿಯಲ್ಲಿ ಸಂಭವಿಸಿದ ಭಯಾನಕ ರಸ್ತೆ ಅಪಘಾತದಲ್ಲಿ ಅಂಜಲಿ ಸಿಂಗ್ ಸಾವನ್ನಪ್ಪಿದರು. ಇದೀಗ ಅಂಜಲಿ ಕುಟುಂಬಕ್ಕೆ ಬಾಲಿವುಡ್ ನಟ ಶಾರುಖ್ ಖಾನ್ ಸಹಾಯಹಸ್ತ ಚಾಚಿಸಿದ್ದಾರೆ.

ನವದೆಹಲಿ: ಕಾಂಜಾವಾಲಾ ಅಪಘಾತ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಡಿಸೆಂಬರ್ 31ರ ರಾತ್ರಿ ಸುಲ್ತಾನಪುರಿಯಲ್ಲಿ ಸಂಭವಿಸಿದ ಭಯಾನಕ ರಸ್ತೆ ಅಪಘಾತದಲ್ಲಿ ಅಂಜಲಿ ಸಿಂಗ್ ಸಾವನ್ನಪ್ಪಿದರು. ಇದೀಗ ಅಂಜಲಿ ಕುಟುಂಬಕ್ಕೆ ಬಾಲಿವುಡ್ ನಟ ಶಾರುಖ್ ಖಾನ್ ಸಹಾಯಹಸ್ತ ಚಾಚಿಸಿದ್ದಾರೆ. 

ಶಾರುಖ್ ಖಾನ್ ಅವರ ಮೀರ್ ಫೌಂಡೇಶನ್ ಅಂಜಲಿ ಸಿಂಗ್ ಅವರ ತಾಯಿಗೆ ಹಣವನ್ನು ದೇಣಿಗೆ ನೀಡಿದೆ. ವರದಿಗಳ ಪ್ರಕಾರ, ಅಂಜಲಿ ಕುಟುಂಬಕ್ಕೆ ಏಕೈಕ ಆಧಾರವಾಗಿದ್ದರು. ತಾಯಿ ಮತ್ತು ಒಡಹುಟ್ಟಿದವರಿಗೆ ನೆರವಾಗಿದ್ದರು. ಶಾರುಖ್ ಖಾನ್ ರ ಪ್ರತಿಷ್ಠಾನವು ಅಂಜಲಿ ಸಿಂಗ್ ಅವರ ತಾಯಿಯ ಆರೋಗ್ಯಕ್ಕೆ ಸಹಾಯ ಮಾಡಲು ಮತ್ತು ಅಂಜಲಿಯ ಒಡಹುಟ್ಟಿದವರಿಗೆ ಆರ್ಥಿಕ ಸಹಾಯ ಮಾಡಿದೆ ಎಂದು ವರದಿಯಾಗಿದೆ. 

ಮೀರ್ ಫೌಂಡೇಶನ್ ಅಧಿಕೃತ ಹೇಳಿಕೆಯಲ್ಲಿ, 'ಶಾರುಖ್ ಖಾನ್ ಅವರ ಮೀರ್ ಫೌಂಡೇಶನ್ ಅಂಜಲಿ ಸಿಂಗ್ ಅವರ ಕುಟುಂಬಕ್ಕೆ ಬಹಿರಂಗಪಡಿಸದ ಮೊತ್ತವನ್ನು ದೇಣಿಗೆ ನೀಡಿದೆ. ದೆಹಲಿಯ ಕಂಜಾವಾಲಾದಲ್ಲಿ 20 ವರ್ಷದ ಅಂಜಲಿ ಕಾರು ಡಿಕ್ಕಿಯಾಗಿ ಸಾವನ್ನಪ್ಪಿದ್ದಳು. 

ಅಂಜಲಿಯ ತಂದೆ ಎಂಟು ವರ್ಷಗಳ ಹಿಂದೆ ನಿಧನರಾಗಿದ್ದು ಅವರ ತಾಯಿ ಮೂತ್ರಪಿಂಡದ ಕಾಯಿಲೆಯಿಂದ ಬಳಲುತ್ತಿದ್ದಾರೆ. ಕೇವಲ 10ನೇ ತರಗತಿವರೆಗೆ ಓದಿರುವ ಅಂಜಲಿ ತನ್ನ ಕುಟುಂಬದ ಅಗತ್ಯಗಳನ್ನು ಪೂರೈಸಲು ಹಲವು ಚಿಕ್ಕಪುಟ್ಟ ಕೆಲಸಗಳನ್ನು ಮಾಡುತ್ತಿದ್ದಳು.

ಹೊಸ ವರ್ಷದಂದು ದೆಹಲಿಯ ಹೊರವಲಯದಲ್ಲಿ ಅಂಜಲಿ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಆಕೆ ಸ್ಕೂಟಿಯಲ್ಲಿ ಹೋಗುತ್ತಿದ್ದಾಗ ಬಲೆನೋ ಕಾರು ಆಕೆಗೆ ಡಿಕ್ಕಿ ಹೊಡೆದು 10 ಕಿ.ಮೀ.ವರೆಗೆ ವಾಹನದ ಕೆಳಗೆ ಎಳೆದೊಯ್ದಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

SCROLL FOR NEXT