ರಣದೀಪ್ ಹೂಡಾ 
ಬಾಲಿವುಡ್

ಕುದುರೆ ಓಡಿಸುವಾಗ ತಲೆ ಸುತ್ತಿ ಬಿದ್ದ ನಟ ರಣದೀಪ್ ಹೂಡಾ: ಆಸ್ಪತ್ರೆಗೆ ದಾಖಲು, ಸ್ಥಿತಿ ಗಂಭೀರ

ಕುದುರೆ ಸವಾರಿ ಮಾಡುವಾಗ ಪ್ರಜ್ಞಾಹೀನರಾಗಿ ಬಿದ್ದ ಪರಿಣಾಮ ಬಾಲಿವುಡ್ ನಟ ರಣದೀಪ್ ಹೂಡಾ ಗಾಯಗೊಂಡಿದ್ದಾರೆ. ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ.

ಕುದುರೆ ಸವಾರಿ ಮಾಡುವಾಗ ಪ್ರಜ್ಞಾಹೀನರಾಗಿ ಬಿದ್ದ ಪರಿಣಾಮ ಬಾಲಿವುಡ್ ನಟ ರಣದೀಪ್ ಹೂಡಾ ಗಾಯಗೊಂಡಿದ್ದಾರೆ. ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ.

ಸದ್ಯ ರಣದೀಪ್ ಅವರಿಗೆ ಮುಂಬೈನ ಕೋಕಿಲಾಬೆನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಚಿಕಿತ್ಸೆಗೆ ನಟ ಸ್ಪಂದಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಕೆಲವು ಮೂಲಗಳಿಂದ ಬಂದಿರುವ ಮಾಹಿತಿ ಪ್ರಕಾರ ಕೆಲವು ವಾರಗಳ ಕಾಲ ಬೆಸ್ಟ್‌ ರೆಸ್ಟ್‌ ತೆಗೆದುಕೊಳ್ಳಬೇಕಂತೆ. ರಣದೀಪ್ ಫೋಟೋ ಅಥವಾ ವಿಡಿಯೋ ಎಲ್ಲಿಯೂ ರಿವೀಲ್ ಅಗಿಲ್ಲ

2001ರಲ್ಲಿ ಮಾನ್ಸೂನ್ ವೆಡ್ಡಿಂಗ್ ಸಿನಿಮಾ ಮೂಲಕ ಬಾಲಿವುಡ್ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. 32 ಸಿನಿಮಾಗಳಲ್ಲಿ ಅಭಿನಯಿಸಿರುವ ರಣದೀಪ್ ಸಾವರ್ಕರ್ ಪಾತ್ರಕ್ಕಾಗಿ ಕೆಲವು ದಿನಗಳ ಹಿಂದೆ 18 ಕೆಜಿ ತೂಕ ಇಳಿಸಿಕೊಂಡಿದ್ದರು.

ಕಳೆದ ವರ್ಷ ಸಲ್ಮಾನ್ ಖಾನ್ ರಾಧೆ ಸಿನಿಮಾ ಚಿತ್ರೀಕರಣ ಸಮಯದಲ್ಲಿ ರಣದೀಪ್ ಬಿದ್ದು ಮಂಡಿಗೆ ಪೆಟ್ಟು ಮಾಡಿಕೊಂಡಿದ್ದರು. ದೊಡ್ಡ ಆಪರೇಷನ್‌ ನಂತರ ಚಿತ್ರೀಕರಣಕ್ಕೆ ಮರುಳಿದ್ದರು. ಆಗ ಕಾಲಿನ ಫೋಟೋ ಅಪ್ಲೋಡ್ ಮಾಡಿ ಅಭಿಮಾನಿಗಳಿಗೆ ಆರೋಗ್ಯದ ಬಗ್ಗೆ ಅಪ್ಡೇಟ್ ಮಾಡಿದ್ದರು.

ಈ ನೆಪದಲ್ಲಿ ಕುದುರೆ ಸವಾರಿ ಕೂಡ ಅವರು ಮಾಡುತ್ತಿದ್ದರು. ಈ ಸಮಯದಲ್ಲಿ ಕುದುರೆ ಮೇಲಿಂದ ಬಿದ್ದು ತೀವ್ರಗಾಯಗೊಂಡಿದ್ದಾರೆ. ಬಿದ್ದಿರುವ ಹೊಡೆತಕ್ಕೆ ಪ್ರಜ್ಞೆ ಕೂಡ ಕಳೆದುಕೊಂಡಿದ್ದರು. ಈ ಹಿಂದೆಯೂ ರಾಧೆ ಸಿನಿಮಾದ ಶೂಟಿಂಗ್ ವೇಳೆಯೂ ರಣದೀಪ್ ಗಾಯಗೊಂಡು ಆಸ್ಪತ್ರೆಗೆ ಸೇರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

SCROLL FOR NEXT